ಪುರೋಹಿತರಿಂದ ರಾಜದಂಡ ಸೆಂಗೋಲ್ ಸ್ವೀಕರಿಸಿದ ಪ್ರಧಾನಿ ಮೋದಿಯವರು ಲೋಕಸಭಾ ಸ್ಪೀಕರ್ ಆಸನದ ಬಳಿ ಪ್ರತಿಷ್ಠಾಪಿಸುವ ಮೂಲಕ ನೂತನ ಸಂಸತ್ ಭವನ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ.
ಪೂಜಾ ವಿಧಾನಗಳು ಮುಗಿದ ಬಳಿಕ ಬಹುಚರ್ಚಿತ ರಾಜದಂಡವಾದ ‘ಸೆಂಗೋಲ್’ ಅನ್ನು ತಮಿಳುನಾಡಿನ ವಿವಿಧ ಅಧೀನಂಗಳಿಂದ ಪ್ರಧಾನಿ ಮೋದಿ ಅವರಿಗೆ ಹಸ್ತಾಂತರ ಮಾಡಲಾಯಿತು.
ಬಳಿಕ ಪವಿತ್ರ ರಾಜದಂಡದೊಂದಿಗೆ ಮೋದಿ ನಾದಸ್ವರ ಮತ್ತು ವೇದ ಮಂತ್ರಗಳ ಪಠಣಗಳ ನಡುವೆ ಮೆರವಣಿಗೆಯಲ್ಲಿ ಹೊಸ ಸಂಸತ್ ಭವನಕ್ಕೆ ಸೆಂಗೋಲ್ ನ್ನು ಕೊಂಡೊಯ್ದರು.
ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ನಿಗದಿಪಡಿಸಲಾಗಿದ್ದ ವಿಶೇಷ ಆವರಣದಲ್ಲಿ ರಾಜದಂಡವನ್ನು ಸ್ಪೀಕರ್ ಓಂ ಬಿರ್ಲಾ ಅವರ ಸಮೇತ ತೆರಳಿ ಅಲ್ಲಿ ಪ್ರತಿಷ್ಠಾಪಿಸಿದರು. ಅಲ್ಲಿ ಇಡಲಾಗಿದ್ದ ಜ್ಯೋತಿಯನ್ನ ಬೆಳಗಿಸುವ ಮೂಲಕ ನೂತನ ಸಂಸತ್ ಭವನದ ಉದ್ಘಾಟನೆಗೆ ಅಧಿಕೃತ ಚಾಲನೆ ನೀಡಿದರು.
ಇದಾದ ಬಳಿಕ ಸಂಸತ್ನ ಲಾಬಿಯಲ್ಲಿ ಏರ್ಪಡಿಸಲಾಗಿದ್ದ ಸರ್ವಧರ್ಮ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಿದರು.
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…