ಪುರೋಹಿತರಿಂದ ರಾಜದಂಡ ಸೆಂಗೋಲ್ ಸ್ವೀಕರಿಸಿದ ಪ್ರಧಾನಿ ಮೋದಿಯವರು ಲೋಕಸಭಾ ಸ್ಪೀಕರ್ ಆಸನದ ಬಳಿ ಪ್ರತಿಷ್ಠಾಪಿಸುವ ಮೂಲಕ ನೂತನ ಸಂಸತ್ ಭವನ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ.
ಪೂಜಾ ವಿಧಾನಗಳು ಮುಗಿದ ಬಳಿಕ ಬಹುಚರ್ಚಿತ ರಾಜದಂಡವಾದ ‘ಸೆಂಗೋಲ್’ ಅನ್ನು ತಮಿಳುನಾಡಿನ ವಿವಿಧ ಅಧೀನಂಗಳಿಂದ ಪ್ರಧಾನಿ ಮೋದಿ ಅವರಿಗೆ ಹಸ್ತಾಂತರ ಮಾಡಲಾಯಿತು.
ಬಳಿಕ ಪವಿತ್ರ ರಾಜದಂಡದೊಂದಿಗೆ ಮೋದಿ ನಾದಸ್ವರ ಮತ್ತು ವೇದ ಮಂತ್ರಗಳ ಪಠಣಗಳ ನಡುವೆ ಮೆರವಣಿಗೆಯಲ್ಲಿ ಹೊಸ ಸಂಸತ್ ಭವನಕ್ಕೆ ಸೆಂಗೋಲ್ ನ್ನು ಕೊಂಡೊಯ್ದರು.
ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ನಿಗದಿಪಡಿಸಲಾಗಿದ್ದ ವಿಶೇಷ ಆವರಣದಲ್ಲಿ ರಾಜದಂಡವನ್ನು ಸ್ಪೀಕರ್ ಓಂ ಬಿರ್ಲಾ ಅವರ ಸಮೇತ ತೆರಳಿ ಅಲ್ಲಿ ಪ್ರತಿಷ್ಠಾಪಿಸಿದರು. ಅಲ್ಲಿ ಇಡಲಾಗಿದ್ದ ಜ್ಯೋತಿಯನ್ನ ಬೆಳಗಿಸುವ ಮೂಲಕ ನೂತನ ಸಂಸತ್ ಭವನದ ಉದ್ಘಾಟನೆಗೆ ಅಧಿಕೃತ ಚಾಲನೆ ನೀಡಿದರು.
ಇದಾದ ಬಳಿಕ ಸಂಸತ್ನ ಲಾಬಿಯಲ್ಲಿ ಏರ್ಪಡಿಸಲಾಗಿದ್ದ ಸರ್ವಧರ್ಮ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಿದರು.
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…