ಪುರೋಹಿತರಿಂದ ರಾಜದಂಡ ಸೆಂಗೋಲ್ ಸ್ವೀಕರಿಸಿದ ಪ್ರಧಾನಿ ಮೋದಿಯವರು ಲೋಕಸಭಾ ಸ್ಪೀಕರ್ ಆಸನದ ಬಳಿ ಪ್ರತಿಷ್ಠಾಪಿಸುವ ಮೂಲಕ ನೂತನ ಸಂಸತ್ ಭವನ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ.
ಪೂಜಾ ವಿಧಾನಗಳು ಮುಗಿದ ಬಳಿಕ ಬಹುಚರ್ಚಿತ ರಾಜದಂಡವಾದ ‘ಸೆಂಗೋಲ್’ ಅನ್ನು ತಮಿಳುನಾಡಿನ ವಿವಿಧ ಅಧೀನಂಗಳಿಂದ ಪ್ರಧಾನಿ ಮೋದಿ ಅವರಿಗೆ ಹಸ್ತಾಂತರ ಮಾಡಲಾಯಿತು.
ಬಳಿಕ ಪವಿತ್ರ ರಾಜದಂಡದೊಂದಿಗೆ ಮೋದಿ ನಾದಸ್ವರ ಮತ್ತು ವೇದ ಮಂತ್ರಗಳ ಪಠಣಗಳ ನಡುವೆ ಮೆರವಣಿಗೆಯಲ್ಲಿ ಹೊಸ ಸಂಸತ್ ಭವನಕ್ಕೆ ಸೆಂಗೋಲ್ ನ್ನು ಕೊಂಡೊಯ್ದರು.
ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ನಿಗದಿಪಡಿಸಲಾಗಿದ್ದ ವಿಶೇಷ ಆವರಣದಲ್ಲಿ ರಾಜದಂಡವನ್ನು ಸ್ಪೀಕರ್ ಓಂ ಬಿರ್ಲಾ ಅವರ ಸಮೇತ ತೆರಳಿ ಅಲ್ಲಿ ಪ್ರತಿಷ್ಠಾಪಿಸಿದರು. ಅಲ್ಲಿ ಇಡಲಾಗಿದ್ದ ಜ್ಯೋತಿಯನ್ನ ಬೆಳಗಿಸುವ ಮೂಲಕ ನೂತನ ಸಂಸತ್ ಭವನದ ಉದ್ಘಾಟನೆಗೆ ಅಧಿಕೃತ ಚಾಲನೆ ನೀಡಿದರು.
ಇದಾದ ಬಳಿಕ ಸಂಸತ್ನ ಲಾಬಿಯಲ್ಲಿ ಏರ್ಪಡಿಸಲಾಗಿದ್ದ ಸರ್ವಧರ್ಮ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಿದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…