ಪುರೋಹಿತರಿಂದ ರಾಜದಂಡ ಸೆಂಗೋಲ್ ಸ್ವೀಕರಿಸಿದ ಪ್ರಧಾನಿ ಮೋದಿಯವರು ಲೋಕಸಭಾ ಸ್ಪೀಕರ್ ಆಸನದ ಬಳಿ ಪ್ರತಿಷ್ಠಾಪಿಸುವ ಮೂಲಕ ನೂತನ ಸಂಸತ್ ಭವನ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ.
ಪೂಜಾ ವಿಧಾನಗಳು ಮುಗಿದ ಬಳಿಕ ಬಹುಚರ್ಚಿತ ರಾಜದಂಡವಾದ ‘ಸೆಂಗೋಲ್’ ಅನ್ನು ತಮಿಳುನಾಡಿನ ವಿವಿಧ ಅಧೀನಂಗಳಿಂದ ಪ್ರಧಾನಿ ಮೋದಿ ಅವರಿಗೆ ಹಸ್ತಾಂತರ ಮಾಡಲಾಯಿತು.
ಬಳಿಕ ಪವಿತ್ರ ರಾಜದಂಡದೊಂದಿಗೆ ಮೋದಿ ನಾದಸ್ವರ ಮತ್ತು ವೇದ ಮಂತ್ರಗಳ ಪಠಣಗಳ ನಡುವೆ ಮೆರವಣಿಗೆಯಲ್ಲಿ ಹೊಸ ಸಂಸತ್ ಭವನಕ್ಕೆ ಸೆಂಗೋಲ್ ನ್ನು ಕೊಂಡೊಯ್ದರು.
ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ನಿಗದಿಪಡಿಸಲಾಗಿದ್ದ ವಿಶೇಷ ಆವರಣದಲ್ಲಿ ರಾಜದಂಡವನ್ನು ಸ್ಪೀಕರ್ ಓಂ ಬಿರ್ಲಾ ಅವರ ಸಮೇತ ತೆರಳಿ ಅಲ್ಲಿ ಪ್ರತಿಷ್ಠಾಪಿಸಿದರು. ಅಲ್ಲಿ ಇಡಲಾಗಿದ್ದ ಜ್ಯೋತಿಯನ್ನ ಬೆಳಗಿಸುವ ಮೂಲಕ ನೂತನ ಸಂಸತ್ ಭವನದ ಉದ್ಘಾಟನೆಗೆ ಅಧಿಕೃತ ಚಾಲನೆ ನೀಡಿದರು.
ಇದಾದ ಬಳಿಕ ಸಂಸತ್ನ ಲಾಬಿಯಲ್ಲಿ ಏರ್ಪಡಿಸಲಾಗಿದ್ದ ಸರ್ವಧರ್ಮ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಿದರು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…