ನೂತನ ಸಂಸತ್ ಭವನ ಲೋಕಾರ್ಪಣೆಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

ಪುರೋಹಿತರಿಂದ ರಾಜದಂಡ ಸೆಂಗೋಲ್​ ಸ್ವೀಕರಿಸಿದ ಪ್ರಧಾನಿ ಮೋದಿಯವರು ಲೋಕಸಭಾ ಸ್ಪೀಕರ್​ ಆಸನದ ಬಳಿ​ ಪ್ರತಿಷ್ಠಾಪಿಸುವ ಮೂಲಕ ನೂತನ ಸಂಸತ್​ ಭವನ ಲೋಕಾರ್ಪಣೆ ಮಾಡಿದ‌ ಪ್ರಧಾನಿ ನರೇಂದ್ರ ಮೋದಿ.

ಪೂಜಾ ವಿಧಾನಗಳು ಮುಗಿದ ಬಳಿಕ ಬಹುಚರ್ಚಿತ ರಾಜದಂಡವಾದ ‘ಸೆಂಗೋಲ್​’ ಅನ್ನು ತಮಿಳುನಾಡಿನ ವಿವಿಧ ಅಧೀನಂಗಳಿಂದ ಪ್ರಧಾನಿ ಮೋದಿ ಅವರಿಗೆ ಹಸ್ತಾಂತರ ಮಾಡಲಾಯಿತು.

ಬಳಿಕ ಪವಿತ್ರ ರಾಜದಂಡದೊಂದಿಗೆ ಮೋದಿ ನಾದಸ್ವರ ಮತ್ತು ವೇದ ಮಂತ್ರಗಳ ಪಠಣಗಳ ನಡುವೆ ಮೆರವಣಿಗೆಯಲ್ಲಿ ಹೊಸ ಸಂಸತ್ ಭವನಕ್ಕೆ ಸೆಂಗೋಲ್ ನ್ನು ಕೊಂಡೊಯ್ದರು.

ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ನಿಗದಿಪಡಿಸಲಾಗಿದ್ದ ವಿಶೇಷ ಆವರಣದಲ್ಲಿ ರಾಜದಂಡವನ್ನು ಸ್ಪೀಕರ್​ ಓಂ ಬಿರ್ಲಾ ಅವರ ಸಮೇತ ತೆರಳಿ ಅಲ್ಲಿ ಪ್ರತಿಷ್ಠಾಪಿಸಿದರು. ಅಲ್ಲಿ ಇಡಲಾಗಿದ್ದ ಜ್ಯೋತಿಯನ್ನ ಬೆಳಗಿಸುವ ಮೂಲಕ ನೂತನ ಸಂಸತ್​ ಭವನದ ಉದ್ಘಾಟನೆಗೆ ಅಧಿಕೃತ ಚಾಲನೆ ನೀಡಿದರು.

ಸೆಂಗೋಲ್​ ಸ್ಥಾಪನೆಯ ಬಳಿಕ ಅಲ್ಲಿಂದ ಹೊರಬಂದ ಪ್ರಧಾನಿ ಮೋದಿ ಅವರು, ನೂತನ ಸಂಸತ್ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದ ಕೆಲ ಕಾರ್ಮಿಕರಿಗೆ ಗೌರವ ಸಲ್ಲಿಸಿದರು. ಶಾಲು ಮತ್ತು ಸ್ಮರಣಿಗೆ ನೀಡಿ ಅವರನ್ನು ಸನ್ಮಾನಿಸಿದರು. ಬಳಿಕ ನೂತನ ಸಂಸತ್ ಭವನದ ಉದ್ಘಾಟನೆಯನ್ನು ಗುರುತಿಸಲು ಫಲಕವೊಂದನ್ನು ಮೋದಿಯವರು ಅನಾವರಣಗೊಳಿಸಿದರು.

ಇದಾದ ಬಳಿಕ ಸಂಸತ್​ನ ಲಾಬಿಯಲ್ಲಿ ಏರ್ಪಡಿಸಲಾಗಿದ್ದ ಸರ್ವಧರ್ಮ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಿದರು.

ಹಿಂದೂ, ಮುಸ್ಲಿಂ, ಜೈನ, ಬೌದ್ಧ, ಕ್ರೈಸ್ತ ಧರ್ಮ ಸೇರಿದಂತೆ ಎಲ್ಲ ಧರ್ಮಗಳ ಮುಖಂಡರು ಪ್ರಾರ್ಥನೆ ಸಲ್ಲಿಸಿದರು. ನೂತನ ಸಂಸತ್​ ಕಟ್ಟಡವು ಐತಿಹಾಸಿಕ ರಾಜಕೀಯ ವಿದ್ಯಮಾನಗಳಿಗೆ ಸಾಕ್ಷಿಯಾಗಲಿ ಎಂದು ಹರಸಿದರು.

ಈ ವೇಳೆ ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ರಾಜ್ಯಸಭಾ ಉಪ ಸಭಾಪತಿ ಹರಿವಂಶ್, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ಎಸ್ ಜೈಶಂಕರ್ ಮತ್ತು ಜಿತೇಂದ್ರ ಸಿಂಗ್, ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ, 25 ಪಕ್ಷಗಳ ಪ್ರತಿನಿಧಿಗಳು ಮತ್ತು ಮುಖ್ಯಮಂತ್ರಿಗಳು ಮತ್ತು ಸಚಿವರು, ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

2 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

2 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

3 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

4 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

7 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

7 hours ago