ಪುರೋಹಿತರಿಂದ ರಾಜದಂಡ ಸೆಂಗೋಲ್ ಸ್ವೀಕರಿಸಿದ ಪ್ರಧಾನಿ ಮೋದಿಯವರು ಲೋಕಸಭಾ ಸ್ಪೀಕರ್ ಆಸನದ ಬಳಿ ಪ್ರತಿಷ್ಠಾಪಿಸುವ ಮೂಲಕ ನೂತನ ಸಂಸತ್ ಭವನ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ.
ಪೂಜಾ ವಿಧಾನಗಳು ಮುಗಿದ ಬಳಿಕ ಬಹುಚರ್ಚಿತ ರಾಜದಂಡವಾದ ‘ಸೆಂಗೋಲ್’ ಅನ್ನು ತಮಿಳುನಾಡಿನ ವಿವಿಧ ಅಧೀನಂಗಳಿಂದ ಪ್ರಧಾನಿ ಮೋದಿ ಅವರಿಗೆ ಹಸ್ತಾಂತರ ಮಾಡಲಾಯಿತು.
ಬಳಿಕ ಪವಿತ್ರ ರಾಜದಂಡದೊಂದಿಗೆ ಮೋದಿ ನಾದಸ್ವರ ಮತ್ತು ವೇದ ಮಂತ್ರಗಳ ಪಠಣಗಳ ನಡುವೆ ಮೆರವಣಿಗೆಯಲ್ಲಿ ಹೊಸ ಸಂಸತ್ ಭವನಕ್ಕೆ ಸೆಂಗೋಲ್ ನ್ನು ಕೊಂಡೊಯ್ದರು.
ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ನಿಗದಿಪಡಿಸಲಾಗಿದ್ದ ವಿಶೇಷ ಆವರಣದಲ್ಲಿ ರಾಜದಂಡವನ್ನು ಸ್ಪೀಕರ್ ಓಂ ಬಿರ್ಲಾ ಅವರ ಸಮೇತ ತೆರಳಿ ಅಲ್ಲಿ ಪ್ರತಿಷ್ಠಾಪಿಸಿದರು. ಅಲ್ಲಿ ಇಡಲಾಗಿದ್ದ ಜ್ಯೋತಿಯನ್ನ ಬೆಳಗಿಸುವ ಮೂಲಕ ನೂತನ ಸಂಸತ್ ಭವನದ ಉದ್ಘಾಟನೆಗೆ ಅಧಿಕೃತ ಚಾಲನೆ ನೀಡಿದರು.
ಇದಾದ ಬಳಿಕ ಸಂಸತ್ನ ಲಾಬಿಯಲ್ಲಿ ಏರ್ಪಡಿಸಲಾಗಿದ್ದ ಸರ್ವಧರ್ಮ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಿದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…