ನೂತನ ಸಂಸತ್ ಭವನ ಲೋಕಾರ್ಪಣೆಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

ಪುರೋಹಿತರಿಂದ ರಾಜದಂಡ ಸೆಂಗೋಲ್​ ಸ್ವೀಕರಿಸಿದ ಪ್ರಧಾನಿ ಮೋದಿಯವರು ಲೋಕಸಭಾ ಸ್ಪೀಕರ್​ ಆಸನದ ಬಳಿ​ ಪ್ರತಿಷ್ಠಾಪಿಸುವ ಮೂಲಕ ನೂತನ ಸಂಸತ್​ ಭವನ ಲೋಕಾರ್ಪಣೆ ಮಾಡಿದ‌ ಪ್ರಧಾನಿ ನರೇಂದ್ರ ಮೋದಿ.

ಪೂಜಾ ವಿಧಾನಗಳು ಮುಗಿದ ಬಳಿಕ ಬಹುಚರ್ಚಿತ ರಾಜದಂಡವಾದ ‘ಸೆಂಗೋಲ್​’ ಅನ್ನು ತಮಿಳುನಾಡಿನ ವಿವಿಧ ಅಧೀನಂಗಳಿಂದ ಪ್ರಧಾನಿ ಮೋದಿ ಅವರಿಗೆ ಹಸ್ತಾಂತರ ಮಾಡಲಾಯಿತು.

ಬಳಿಕ ಪವಿತ್ರ ರಾಜದಂಡದೊಂದಿಗೆ ಮೋದಿ ನಾದಸ್ವರ ಮತ್ತು ವೇದ ಮಂತ್ರಗಳ ಪಠಣಗಳ ನಡುವೆ ಮೆರವಣಿಗೆಯಲ್ಲಿ ಹೊಸ ಸಂಸತ್ ಭವನಕ್ಕೆ ಸೆಂಗೋಲ್ ನ್ನು ಕೊಂಡೊಯ್ದರು.

ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ನಿಗದಿಪಡಿಸಲಾಗಿದ್ದ ವಿಶೇಷ ಆವರಣದಲ್ಲಿ ರಾಜದಂಡವನ್ನು ಸ್ಪೀಕರ್​ ಓಂ ಬಿರ್ಲಾ ಅವರ ಸಮೇತ ತೆರಳಿ ಅಲ್ಲಿ ಪ್ರತಿಷ್ಠಾಪಿಸಿದರು. ಅಲ್ಲಿ ಇಡಲಾಗಿದ್ದ ಜ್ಯೋತಿಯನ್ನ ಬೆಳಗಿಸುವ ಮೂಲಕ ನೂತನ ಸಂಸತ್​ ಭವನದ ಉದ್ಘಾಟನೆಗೆ ಅಧಿಕೃತ ಚಾಲನೆ ನೀಡಿದರು.

ಸೆಂಗೋಲ್​ ಸ್ಥಾಪನೆಯ ಬಳಿಕ ಅಲ್ಲಿಂದ ಹೊರಬಂದ ಪ್ರಧಾನಿ ಮೋದಿ ಅವರು, ನೂತನ ಸಂಸತ್ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದ ಕೆಲ ಕಾರ್ಮಿಕರಿಗೆ ಗೌರವ ಸಲ್ಲಿಸಿದರು. ಶಾಲು ಮತ್ತು ಸ್ಮರಣಿಗೆ ನೀಡಿ ಅವರನ್ನು ಸನ್ಮಾನಿಸಿದರು. ಬಳಿಕ ನೂತನ ಸಂಸತ್ ಭವನದ ಉದ್ಘಾಟನೆಯನ್ನು ಗುರುತಿಸಲು ಫಲಕವೊಂದನ್ನು ಮೋದಿಯವರು ಅನಾವರಣಗೊಳಿಸಿದರು.

ಇದಾದ ಬಳಿಕ ಸಂಸತ್​ನ ಲಾಬಿಯಲ್ಲಿ ಏರ್ಪಡಿಸಲಾಗಿದ್ದ ಸರ್ವಧರ್ಮ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಿದರು.

ಹಿಂದೂ, ಮುಸ್ಲಿಂ, ಜೈನ, ಬೌದ್ಧ, ಕ್ರೈಸ್ತ ಧರ್ಮ ಸೇರಿದಂತೆ ಎಲ್ಲ ಧರ್ಮಗಳ ಮುಖಂಡರು ಪ್ರಾರ್ಥನೆ ಸಲ್ಲಿಸಿದರು. ನೂತನ ಸಂಸತ್​ ಕಟ್ಟಡವು ಐತಿಹಾಸಿಕ ರಾಜಕೀಯ ವಿದ್ಯಮಾನಗಳಿಗೆ ಸಾಕ್ಷಿಯಾಗಲಿ ಎಂದು ಹರಸಿದರು.

ಈ ವೇಳೆ ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ರಾಜ್ಯಸಭಾ ಉಪ ಸಭಾಪತಿ ಹರಿವಂಶ್, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ಎಸ್ ಜೈಶಂಕರ್ ಮತ್ತು ಜಿತೇಂದ್ರ ಸಿಂಗ್, ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ, 25 ಪಕ್ಷಗಳ ಪ್ರತಿನಿಧಿಗಳು ಮತ್ತು ಮುಖ್ಯಮಂತ್ರಿಗಳು ಮತ್ತು ಸಚಿವರು, ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

7 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

11 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

11 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

14 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago