ನಗರದ ಬಸವ ಭವನದ ಸಮೀಪ ಹಾದು ಹೋಗಿರುವ ದಾಬಸ್ ಪೇಟೆ ಹಾಗೂ ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಸಾಲು ಸಾಲಾಗಿ ಬೃಹದಾಕಾರವಾದ ಹುಣಸೆ ಮರಗಳು ಇವೆ. ಲಾವಣ್ಯ ಶಾಲೆ ಸಮೀಪ ಶಾಸಕ ಧೀರಜ್ ಮುನಿರಾಜು ಅವರಿಗೆ ಸಂಬಂಧಿಸಿದೆ ಎನ್ನಲಾದ ಲೇಔಟ್ ಮುಂದೆ ಇದ್ದ ಹುಣಸೆ ಮರಗಳ ರೆಂಬೆ ಕೊಂಬೆಗಳ ಕಡಿದು ಮರಗಳ ಅಂದ ಚೆಂದ ಕೆಡಿಸಿದಲ್ಲದೇ ನಗರದ ಸೌಂದರ್ಯವನ್ನು ಹಾಳು ಮಾಡಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.
ಈ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಹುಣಸೆ ಮರಗಳ ಇರುವದರಿಂದ ಹೆದ್ದಾರಿಯಲ್ಲಿ ಒಂದು ರೀತಿಯ ಸೌಂದರ್ಯ ಎದ್ದು ಕಾಣುತ್ತಿತ್ತು. ಬಹಳ ವರ್ಷಗಳಿಂದ ಈ ಮರಗಳು ಯಾರಿಗೂ ಎನೂ ತೊಂದರೆ ಮಾಡಿಲ್ಲ. ಈಗ ತೊಂದರೆ ಮಾಡುತ್ತವೆ ಎಂದು ರೆಂಬೆ ಕೊಂಬೆಗಳಿಗೆ ಕೊಡಲಿ ಹಾಕಿದ್ದಾರೆ ಎಂದು ಪರಿಸರ ಪ್ರೇಮಿ ಚಿದಾನಂದ ಅವರು ಆರೋಪಿಸಿದ್ದಾರೆ.
ಅರಣ್ಯ ಇಲಾಖೆಯಿಂದ ಲೇಔಟ್ ಮುಂದಿರುವ ನಾಲ್ಕು ಮರಗಳ ಹತ್ತು ಕೊಂಬೆಗಳನ್ನು ಕಡಿಯಲು ಹಾಗೂ ಎರಡು ಮರಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವುದಕ್ಕೆ ಅನುಮತಿ ಪಡೆದಿದ್ದಾರೆ. ಇದಕ್ಕೂ ಅರಣ್ಯ ಇಲಾಖೆ ಅನುಮತಿ ನೀಡಬಾರದಿತ್ತು. ಅನುಮತಿ ನೀಡಿದ್ದಾರೆಂದರೆ ಅದು ರಾಜಕೀಯ ಪ್ರಭಾವ ಎಂದೇ ಭಾವಿಸಬೇಕಾಗಿದೆ. ತಮ್ಮ ಅಧಿಕಾರ ಬಳಸಿ ಅವೈಜ್ಞಾನಿಕವಾದ ಕೆಲಸವನ್ನು ಕಾನೂನಾತ್ಮಕವಾಗಿ ಮಾಡಲು ಶಾಸಕರು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.
ತಾಲೂಕಿನಲ್ಲಿ ಇನ್ನೂ ಬೇಕಾದಷ್ಟು ಅಭಿವೃದ್ಧಿ ಕೆಲಸಗಳು ಆಗಬೇಕಾಗಿದೆ. ಮಾನ್ಯ ಶಾಸಕರೇ ನಿಮ್ಮ ಅಧಿಕಾರ ಬಳಸಿ ತಾಲೂಕನ್ನು ಇನ್ನಷ್ಟು ಅಭಿವೃದ್ಧಿ ಮಾಡಿ, ಪರಿಸರ ನಾಶ ಮಾಡಬೇಡಿ ಎಂದು ಕಿವಿಮಾತು ಹೇಳಿದರು.
ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…
ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…
ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…
ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…