ನಗರದ ಬಸವ ಭವನದ ಸಮೀಪ ಹಾದು ಹೋಗಿರುವ ದಾಬಸ್ ಪೇಟೆ ಹಾಗೂ ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಸಾಲು ಸಾಲಾಗಿ ಬೃಹದಾಕಾರವಾದ ಹುಣಸೆ ಮರಗಳು ಇವೆ. ಲಾವಣ್ಯ ಶಾಲೆ ಸಮೀಪ ಶಾಸಕ ಧೀರಜ್ ಮುನಿರಾಜು ಅವರಿಗೆ ಸಂಬಂಧಿಸಿದೆ ಎನ್ನಲಾದ ಲೇಔಟ್ ಮುಂದೆ ಇದ್ದ ಹುಣಸೆ ಮರಗಳ ರೆಂಬೆ ಕೊಂಬೆಗಳ ಕಡಿದು ಮರಗಳ ಅಂದ ಚೆಂದ ಕೆಡಿಸಿದಲ್ಲದೇ ನಗರದ ಸೌಂದರ್ಯವನ್ನು ಹಾಳು ಮಾಡಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.
ಈ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಹುಣಸೆ ಮರಗಳ ಇರುವದರಿಂದ ಹೆದ್ದಾರಿಯಲ್ಲಿ ಒಂದು ರೀತಿಯ ಸೌಂದರ್ಯ ಎದ್ದು ಕಾಣುತ್ತಿತ್ತು. ಬಹಳ ವರ್ಷಗಳಿಂದ ಈ ಮರಗಳು ಯಾರಿಗೂ ಎನೂ ತೊಂದರೆ ಮಾಡಿಲ್ಲ. ಈಗ ತೊಂದರೆ ಮಾಡುತ್ತವೆ ಎಂದು ರೆಂಬೆ ಕೊಂಬೆಗಳಿಗೆ ಕೊಡಲಿ ಹಾಕಿದ್ದಾರೆ ಎಂದು ಪರಿಸರ ಪ್ರೇಮಿ ಚಿದಾನಂದ ಅವರು ಆರೋಪಿಸಿದ್ದಾರೆ.
ಅರಣ್ಯ ಇಲಾಖೆಯಿಂದ ಲೇಔಟ್ ಮುಂದಿರುವ ನಾಲ್ಕು ಮರಗಳ ಹತ್ತು ಕೊಂಬೆಗಳನ್ನು ಕಡಿಯಲು ಹಾಗೂ ಎರಡು ಮರಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವುದಕ್ಕೆ ಅನುಮತಿ ಪಡೆದಿದ್ದಾರೆ. ಇದಕ್ಕೂ ಅರಣ್ಯ ಇಲಾಖೆ ಅನುಮತಿ ನೀಡಬಾರದಿತ್ತು. ಅನುಮತಿ ನೀಡಿದ್ದಾರೆಂದರೆ ಅದು ರಾಜಕೀಯ ಪ್ರಭಾವ ಎಂದೇ ಭಾವಿಸಬೇಕಾಗಿದೆ. ತಮ್ಮ ಅಧಿಕಾರ ಬಳಸಿ ಅವೈಜ್ಞಾನಿಕವಾದ ಕೆಲಸವನ್ನು ಕಾನೂನಾತ್ಮಕವಾಗಿ ಮಾಡಲು ಶಾಸಕರು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.
ತಾಲೂಕಿನಲ್ಲಿ ಇನ್ನೂ ಬೇಕಾದಷ್ಟು ಅಭಿವೃದ್ಧಿ ಕೆಲಸಗಳು ಆಗಬೇಕಾಗಿದೆ. ಮಾನ್ಯ ಶಾಸಕರೇ ನಿಮ್ಮ ಅಧಿಕಾರ ಬಳಸಿ ತಾಲೂಕನ್ನು ಇನ್ನಷ್ಟು ಅಭಿವೃದ್ಧಿ ಮಾಡಿ, ಪರಿಸರ ನಾಶ ಮಾಡಬೇಡಿ ಎಂದು ಕಿವಿಮಾತು ಹೇಳಿದರು.
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…