ನಗರದ ಬಸವ ಭವನದ ಸಮೀಪ ಹಾದು ಹೋಗಿರುವ ದಾಬಸ್ ಪೇಟೆ ಹಾಗೂ ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಸಾಲು ಸಾಲಾಗಿ ಬೃಹದಾಕಾರವಾದ ಹುಣಸೆ ಮರಗಳು ಇವೆ. ಲಾವಣ್ಯ ಶಾಲೆ ಸಮೀಪ ಶಾಸಕ ಧೀರಜ್ ಮುನಿರಾಜು ಅವರಿಗೆ ಸಂಬಂಧಿಸಿದೆ ಎನ್ನಲಾದ ಲೇಔಟ್ ಮುಂದೆ ಇದ್ದ ಹುಣಸೆ ಮರಗಳ ರೆಂಬೆ ಕೊಂಬೆಗಳ ಕಡಿದು ಮರಗಳ ಅಂದ ಚೆಂದ ಕೆಡಿಸಿದಲ್ಲದೇ ನಗರದ ಸೌಂದರ್ಯವನ್ನು ಹಾಳು ಮಾಡಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.
ಈ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಹುಣಸೆ ಮರಗಳ ಇರುವದರಿಂದ ಹೆದ್ದಾರಿಯಲ್ಲಿ ಒಂದು ರೀತಿಯ ಸೌಂದರ್ಯ ಎದ್ದು ಕಾಣುತ್ತಿತ್ತು. ಬಹಳ ವರ್ಷಗಳಿಂದ ಈ ಮರಗಳು ಯಾರಿಗೂ ಎನೂ ತೊಂದರೆ ಮಾಡಿಲ್ಲ. ಈಗ ತೊಂದರೆ ಮಾಡುತ್ತವೆ ಎಂದು ರೆಂಬೆ ಕೊಂಬೆಗಳಿಗೆ ಕೊಡಲಿ ಹಾಕಿದ್ದಾರೆ ಎಂದು ಪರಿಸರ ಪ್ರೇಮಿ ಚಿದಾನಂದ ಅವರು ಆರೋಪಿಸಿದ್ದಾರೆ.
ಅರಣ್ಯ ಇಲಾಖೆಯಿಂದ ಲೇಔಟ್ ಮುಂದಿರುವ ನಾಲ್ಕು ಮರಗಳ ಹತ್ತು ಕೊಂಬೆಗಳನ್ನು ಕಡಿಯಲು ಹಾಗೂ ಎರಡು ಮರಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವುದಕ್ಕೆ ಅನುಮತಿ ಪಡೆದಿದ್ದಾರೆ. ಇದಕ್ಕೂ ಅರಣ್ಯ ಇಲಾಖೆ ಅನುಮತಿ ನೀಡಬಾರದಿತ್ತು. ಅನುಮತಿ ನೀಡಿದ್ದಾರೆಂದರೆ ಅದು ರಾಜಕೀಯ ಪ್ರಭಾವ ಎಂದೇ ಭಾವಿಸಬೇಕಾಗಿದೆ. ತಮ್ಮ ಅಧಿಕಾರ ಬಳಸಿ ಅವೈಜ್ಞಾನಿಕವಾದ ಕೆಲಸವನ್ನು ಕಾನೂನಾತ್ಮಕವಾಗಿ ಮಾಡಲು ಶಾಸಕರು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.
ತಾಲೂಕಿನಲ್ಲಿ ಇನ್ನೂ ಬೇಕಾದಷ್ಟು ಅಭಿವೃದ್ಧಿ ಕೆಲಸಗಳು ಆಗಬೇಕಾಗಿದೆ. ಮಾನ್ಯ ಶಾಸಕರೇ ನಿಮ್ಮ ಅಧಿಕಾರ ಬಳಸಿ ತಾಲೂಕನ್ನು ಇನ್ನಷ್ಟು ಅಭಿವೃದ್ಧಿ ಮಾಡಿ, ಪರಿಸರ ನಾಶ ಮಾಡಬೇಡಿ ಎಂದು ಕಿವಿಮಾತು ಹೇಳಿದರು.
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…