ನಗರದ ಬಸವ ಭವನದ ಸಮೀಪ ಹಾದು ಹೋಗಿರುವ ದಾಬಸ್ ಪೇಟೆ ಹಾಗೂ ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಸಾಲು ಸಾಲಾಗಿ ಬೃಹದಾಕಾರವಾದ ಹುಣಸೆ ಮರಗಳು ಇವೆ. ಲಾವಣ್ಯ ಶಾಲೆ ಸಮೀಪ ಶಾಸಕ ಧೀರಜ್ ಮುನಿರಾಜು ಅವರಿಗೆ ಸಂಬಂಧಿಸಿದೆ ಎನ್ನಲಾದ ಲೇಔಟ್ ಮುಂದೆ ಇದ್ದ ಹುಣಸೆ ಮರಗಳ ರೆಂಬೆ ಕೊಂಬೆಗಳ ಕಡಿದು ಮರಗಳ ಅಂದ ಚೆಂದ ಕೆಡಿಸಿದಲ್ಲದೇ ನಗರದ ಸೌಂದರ್ಯವನ್ನು ಹಾಳು ಮಾಡಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.
ಈ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಹುಣಸೆ ಮರಗಳ ಇರುವದರಿಂದ ಹೆದ್ದಾರಿಯಲ್ಲಿ ಒಂದು ರೀತಿಯ ಸೌಂದರ್ಯ ಎದ್ದು ಕಾಣುತ್ತಿತ್ತು. ಬಹಳ ವರ್ಷಗಳಿಂದ ಈ ಮರಗಳು ಯಾರಿಗೂ ಎನೂ ತೊಂದರೆ ಮಾಡಿಲ್ಲ. ಈಗ ತೊಂದರೆ ಮಾಡುತ್ತವೆ ಎಂದು ರೆಂಬೆ ಕೊಂಬೆಗಳಿಗೆ ಕೊಡಲಿ ಹಾಕಿದ್ದಾರೆ ಎಂದು ಪರಿಸರ ಪ್ರೇಮಿ ಚಿದಾನಂದ ಅವರು ಆರೋಪಿಸಿದ್ದಾರೆ.
ಅರಣ್ಯ ಇಲಾಖೆಯಿಂದ ಲೇಔಟ್ ಮುಂದಿರುವ ನಾಲ್ಕು ಮರಗಳ ಹತ್ತು ಕೊಂಬೆಗಳನ್ನು ಕಡಿಯಲು ಹಾಗೂ ಎರಡು ಮರಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವುದಕ್ಕೆ ಅನುಮತಿ ಪಡೆದಿದ್ದಾರೆ. ಇದಕ್ಕೂ ಅರಣ್ಯ ಇಲಾಖೆ ಅನುಮತಿ ನೀಡಬಾರದಿತ್ತು. ಅನುಮತಿ ನೀಡಿದ್ದಾರೆಂದರೆ ಅದು ರಾಜಕೀಯ ಪ್ರಭಾವ ಎಂದೇ ಭಾವಿಸಬೇಕಾಗಿದೆ. ತಮ್ಮ ಅಧಿಕಾರ ಬಳಸಿ ಅವೈಜ್ಞಾನಿಕವಾದ ಕೆಲಸವನ್ನು ಕಾನೂನಾತ್ಮಕವಾಗಿ ಮಾಡಲು ಶಾಸಕರು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.
ತಾಲೂಕಿನಲ್ಲಿ ಇನ್ನೂ ಬೇಕಾದಷ್ಟು ಅಭಿವೃದ್ಧಿ ಕೆಲಸಗಳು ಆಗಬೇಕಾಗಿದೆ. ಮಾನ್ಯ ಶಾಸಕರೇ ನಿಮ್ಮ ಅಧಿಕಾರ ಬಳಸಿ ತಾಲೂಕನ್ನು ಇನ್ನಷ್ಟು ಅಭಿವೃದ್ಧಿ ಮಾಡಿ, ಪರಿಸರ ನಾಶ ಮಾಡಬೇಡಿ ಎಂದು ಕಿವಿಮಾತು ಹೇಳಿದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…