ನಗರದ ಬಸವ ಭವನದ ಸಮೀಪ ಹಾದು ಹೋಗಿರುವ ದಾಬಸ್ ಪೇಟೆ ಹಾಗೂ ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಸಾಲು ಸಾಲಾಗಿ ಬೃಹದಾಕಾರವಾದ ಹುಣಸೆ ಮರಗಳು ಇವೆ. ಲಾವಣ್ಯ ಶಾಲೆ ಸಮೀಪ ಶಾಸಕ ಧೀರಜ್ ಮುನಿರಾಜು ಅವರಿಗೆ ಸಂಬಂಧಿಸಿದೆ ಎನ್ನಲಾದ ಲೇಔಟ್ ಮುಂದೆ ಇದ್ದ ಹುಣಸೆ ಮರಗಳ ರೆಂಬೆ ಕೊಂಬೆಗಳ ಕಡಿದು ಮರಗಳ ಅಂದ ಚೆಂದ ಕೆಡಿಸಿದಲ್ಲದೇ ನಗರದ ಸೌಂದರ್ಯವನ್ನು ಹಾಳು ಮಾಡಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.
ಈ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಹುಣಸೆ ಮರಗಳ ಇರುವದರಿಂದ ಹೆದ್ದಾರಿಯಲ್ಲಿ ಒಂದು ರೀತಿಯ ಸೌಂದರ್ಯ ಎದ್ದು ಕಾಣುತ್ತಿತ್ತು. ಬಹಳ ವರ್ಷಗಳಿಂದ ಈ ಮರಗಳು ಯಾರಿಗೂ ಎನೂ ತೊಂದರೆ ಮಾಡಿಲ್ಲ. ಈಗ ತೊಂದರೆ ಮಾಡುತ್ತವೆ ಎಂದು ರೆಂಬೆ ಕೊಂಬೆಗಳಿಗೆ ಕೊಡಲಿ ಹಾಕಿದ್ದಾರೆ ಎಂದು ಪರಿಸರ ಪ್ರೇಮಿ ಚಿದಾನಂದ ಅವರು ಆರೋಪಿಸಿದ್ದಾರೆ.
ಅರಣ್ಯ ಇಲಾಖೆಯಿಂದ ಲೇಔಟ್ ಮುಂದಿರುವ ನಾಲ್ಕು ಮರಗಳ ಹತ್ತು ಕೊಂಬೆಗಳನ್ನು ಕಡಿಯಲು ಹಾಗೂ ಎರಡು ಮರಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವುದಕ್ಕೆ ಅನುಮತಿ ಪಡೆದಿದ್ದಾರೆ. ಇದಕ್ಕೂ ಅರಣ್ಯ ಇಲಾಖೆ ಅನುಮತಿ ನೀಡಬಾರದಿತ್ತು. ಅನುಮತಿ ನೀಡಿದ್ದಾರೆಂದರೆ ಅದು ರಾಜಕೀಯ ಪ್ರಭಾವ ಎಂದೇ ಭಾವಿಸಬೇಕಾಗಿದೆ. ತಮ್ಮ ಅಧಿಕಾರ ಬಳಸಿ ಅವೈಜ್ಞಾನಿಕವಾದ ಕೆಲಸವನ್ನು ಕಾನೂನಾತ್ಮಕವಾಗಿ ಮಾಡಲು ಶಾಸಕರು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.
ತಾಲೂಕಿನಲ್ಲಿ ಇನ್ನೂ ಬೇಕಾದಷ್ಟು ಅಭಿವೃದ್ಧಿ ಕೆಲಸಗಳು ಆಗಬೇಕಾಗಿದೆ. ಮಾನ್ಯ ಶಾಸಕರೇ ನಿಮ್ಮ ಅಧಿಕಾರ ಬಳಸಿ ತಾಲೂಕನ್ನು ಇನ್ನಷ್ಟು ಅಭಿವೃದ್ಧಿ ಮಾಡಿ, ಪರಿಸರ ನಾಶ ಮಾಡಬೇಡಿ ಎಂದು ಕಿವಿಮಾತು ಹೇಳಿದರು.
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…