ನಗರದ ಬಸವ ಭವನದ ಸಮೀಪ ಹಾದು ಹೋಗಿರುವ ದಾಬಸ್ ಪೇಟೆ ಹಾಗೂ ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಸಾಲು ಸಾಲಾಗಿ ಬೃಹದಾಕಾರವಾದ ಹುಣಸೆ ಮರಗಳು ಇವೆ. ಲಾವಣ್ಯ ಶಾಲೆ ಸಮೀಪ ಶಾಸಕ ಧೀರಜ್ ಮುನಿರಾಜು ಅವರಿಗೆ ಸಂಬಂಧಿಸಿದೆ ಎನ್ನಲಾದ ಲೇಔಟ್ ಮುಂದೆ ಇದ್ದ ಹುಣಸೆ ಮರಗಳ ರೆಂಬೆ ಕೊಂಬೆಗಳ ಕಡಿದು ಮರಗಳ ಅಂದ ಚೆಂದ ಕೆಡಿಸಿದಲ್ಲದೇ ನಗರದ ಸೌಂದರ್ಯವನ್ನು ಹಾಳು ಮಾಡಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.
ಈ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಹುಣಸೆ ಮರಗಳ ಇರುವದರಿಂದ ಹೆದ್ದಾರಿಯಲ್ಲಿ ಒಂದು ರೀತಿಯ ಸೌಂದರ್ಯ ಎದ್ದು ಕಾಣುತ್ತಿತ್ತು. ಬಹಳ ವರ್ಷಗಳಿಂದ ಈ ಮರಗಳು ಯಾರಿಗೂ ಎನೂ ತೊಂದರೆ ಮಾಡಿಲ್ಲ. ಈಗ ತೊಂದರೆ ಮಾಡುತ್ತವೆ ಎಂದು ರೆಂಬೆ ಕೊಂಬೆಗಳಿಗೆ ಕೊಡಲಿ ಹಾಕಿದ್ದಾರೆ ಎಂದು ಪರಿಸರ ಪ್ರೇಮಿ ಚಿದಾನಂದ ಅವರು ಆರೋಪಿಸಿದ್ದಾರೆ.
ಅರಣ್ಯ ಇಲಾಖೆಯಿಂದ ಲೇಔಟ್ ಮುಂದಿರುವ ನಾಲ್ಕು ಮರಗಳ ಹತ್ತು ಕೊಂಬೆಗಳನ್ನು ಕಡಿಯಲು ಹಾಗೂ ಎರಡು ಮರಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವುದಕ್ಕೆ ಅನುಮತಿ ಪಡೆದಿದ್ದಾರೆ. ಇದಕ್ಕೂ ಅರಣ್ಯ ಇಲಾಖೆ ಅನುಮತಿ ನೀಡಬಾರದಿತ್ತು. ಅನುಮತಿ ನೀಡಿದ್ದಾರೆಂದರೆ ಅದು ರಾಜಕೀಯ ಪ್ರಭಾವ ಎಂದೇ ಭಾವಿಸಬೇಕಾಗಿದೆ. ತಮ್ಮ ಅಧಿಕಾರ ಬಳಸಿ ಅವೈಜ್ಞಾನಿಕವಾದ ಕೆಲಸವನ್ನು ಕಾನೂನಾತ್ಮಕವಾಗಿ ಮಾಡಲು ಶಾಸಕರು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.
ತಾಲೂಕಿನಲ್ಲಿ ಇನ್ನೂ ಬೇಕಾದಷ್ಟು ಅಭಿವೃದ್ಧಿ ಕೆಲಸಗಳು ಆಗಬೇಕಾಗಿದೆ. ಮಾನ್ಯ ಶಾಸಕರೇ ನಿಮ್ಮ ಅಧಿಕಾರ ಬಳಸಿ ತಾಲೂಕನ್ನು ಇನ್ನಷ್ಟು ಅಭಿವೃದ್ಧಿ ಮಾಡಿ, ಪರಿಸರ ನಾಶ ಮಾಡಬೇಡಿ ಎಂದು ಕಿವಿಮಾತು ಹೇಳಿದರು.
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…