ನೂರು ವರ್ಷಗಳ ದೂರದೃಷ್ಟಿಯ ಯೋಜನೆಯೊಂದಿಗೆ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಆಗಬೇಕು- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಘಾಟಿ ಸುಬ್ರಮಣ್ಯ ಕ್ಷೇತ್ರ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ಪುಣ್ಯ ಕ್ಷೇತ್ರವಾಗಿದ್ದು, ನೂರು ವರ್ಷಗಳ ದೂರದೃಷ್ಟಿಯ ಯೋಜನೆಯೊಂದಿಗೆ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಆಗಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಹೇಳಿದರು.

ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ರವರ ನೇತೃತ್ವದಲ್ಲಿ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಸಭೆಯಲ್ಲಿ  ಅವರು ಮಾತನಾಡಿದರು.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಷ್ಟೇ ಈ ಭಾಗವು ಅಭಿವೃದ್ಧಿಮಾಡಬೇಕು‌ ಪ್ರತಿವರ್ಷ ನಡೆಯುವ ಧನಗಳ ಜಾತ್ರೆ ವಿಶೇಷವಾಗಿದ್ದು, ನೀರಿನ ವ್ಯವಸ್ಥೆ, ಕಲ್ಯಾಣ ಮಂಟಪ, ಒಮ್ಮೆಗೆ 5 ಸಾವಿರ ಜನರು ಊಟ ಮಾಡಲು ಅನಿಕೂಲಕರವಾದ ಅನ್ನದಾಸೋಹ ಭವನ ನಿರ್ಮಾಣದ ಕುರಿತು ಸಭೆಯಲ್ಲಿ ಚರ್ಚಿಸಿದರು.

ರಸ್ತೆ ಅಗಲೀಕರಣದೊಂದಿಗೆ ಡಬಲ್ ರಸ್ತೆಯ ಅಭಿವೃದ್ಧಿ ಮಾಡಬೇಕು. ಕ್ಷೇತ್ರದ ಮೂಲಸೌಕರ್ಯಗಳ ಅಭಿವೃದ್ಧಿಯು ನೂರು ವರ್ಷಗಳಿಗೆ ಅನುಕೂಲಕರವಾದ ಯೋಜನೆಯನ್ನು ರೂಪಿಸಿ ನಿರ್ಮಾಣ ಮಾಡಬೇಕಿದೆ ಎಂದರು.

ಸಭೆಯಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಮುಜರಾಯಿ ಇಲಾಖೆ ಆಯುಕ್ತ ವೆಂಕಟೇಶ್, ಬೆ.ಗ್ರಾ.ಜಿಲ್ಲಾಧಿಕಾರಿ ಎ.ಬಿ.ಬಸವರಾಜ್, ಕಂದಾಯ ಇಲಾಖೆಯ ಕಾರ್ಯದರ್ಶಿ ರಾಜೇಂದ್ರ ಖಠಾರಿಯಾ, ಆಹಾರ ಸಚಿವರ ಆಪ್ತ ಕಾರ್ಯದರ್ಶಿ ಡಾ.ಎಚ್.ನಟರಾಜ್, ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್.ಅನುರಾಧಾ, ಘಾಟಿ ಸುಬ್ರಮಣ್ಯ ಪ್ರಾಧಿಕಾರದ ಸದಸ್ಯ ರಂಗಪ್ಪ, ಜಿಲ್ಲಾ‌ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜಣ್ಣ, ಪ್ರಾಧಿಕಾರದ ಸದಸ್ಯ ಆರ್.ವಿ.ಮಹೇಶ್ ಕುಮಾರ್, ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಹಾಗೂ ಅರ್ಚಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

4 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

8 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

8 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

13 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago