ನೂರು ವರ್ಷಗಳ ದೂರದೃಷ್ಟಿಯ ಯೋಜನೆಯೊಂದಿಗೆ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಆಗಬೇಕು- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಘಾಟಿ ಸುಬ್ರಮಣ್ಯ ಕ್ಷೇತ್ರ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ಪುಣ್ಯ ಕ್ಷೇತ್ರವಾಗಿದ್ದು, ನೂರು ವರ್ಷಗಳ ದೂರದೃಷ್ಟಿಯ ಯೋಜನೆಯೊಂದಿಗೆ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಆಗಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಹೇಳಿದರು.

ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ರವರ ನೇತೃತ್ವದಲ್ಲಿ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಸಭೆಯಲ್ಲಿ  ಅವರು ಮಾತನಾಡಿದರು.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಷ್ಟೇ ಈ ಭಾಗವು ಅಭಿವೃದ್ಧಿಮಾಡಬೇಕು‌ ಪ್ರತಿವರ್ಷ ನಡೆಯುವ ಧನಗಳ ಜಾತ್ರೆ ವಿಶೇಷವಾಗಿದ್ದು, ನೀರಿನ ವ್ಯವಸ್ಥೆ, ಕಲ್ಯಾಣ ಮಂಟಪ, ಒಮ್ಮೆಗೆ 5 ಸಾವಿರ ಜನರು ಊಟ ಮಾಡಲು ಅನಿಕೂಲಕರವಾದ ಅನ್ನದಾಸೋಹ ಭವನ ನಿರ್ಮಾಣದ ಕುರಿತು ಸಭೆಯಲ್ಲಿ ಚರ್ಚಿಸಿದರು.

ರಸ್ತೆ ಅಗಲೀಕರಣದೊಂದಿಗೆ ಡಬಲ್ ರಸ್ತೆಯ ಅಭಿವೃದ್ಧಿ ಮಾಡಬೇಕು. ಕ್ಷೇತ್ರದ ಮೂಲಸೌಕರ್ಯಗಳ ಅಭಿವೃದ್ಧಿಯು ನೂರು ವರ್ಷಗಳಿಗೆ ಅನುಕೂಲಕರವಾದ ಯೋಜನೆಯನ್ನು ರೂಪಿಸಿ ನಿರ್ಮಾಣ ಮಾಡಬೇಕಿದೆ ಎಂದರು.

ಸಭೆಯಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಮುಜರಾಯಿ ಇಲಾಖೆ ಆಯುಕ್ತ ವೆಂಕಟೇಶ್, ಬೆ.ಗ್ರಾ.ಜಿಲ್ಲಾಧಿಕಾರಿ ಎ.ಬಿ.ಬಸವರಾಜ್, ಕಂದಾಯ ಇಲಾಖೆಯ ಕಾರ್ಯದರ್ಶಿ ರಾಜೇಂದ್ರ ಖಠಾರಿಯಾ, ಆಹಾರ ಸಚಿವರ ಆಪ್ತ ಕಾರ್ಯದರ್ಶಿ ಡಾ.ಎಚ್.ನಟರಾಜ್, ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್.ಅನುರಾಧಾ, ಘಾಟಿ ಸುಬ್ರಮಣ್ಯ ಪ್ರಾಧಿಕಾರದ ಸದಸ್ಯ ರಂಗಪ್ಪ, ಜಿಲ್ಲಾ‌ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜಣ್ಣ, ಪ್ರಾಧಿಕಾರದ ಸದಸ್ಯ ಆರ್.ವಿ.ಮಹೇಶ್ ಕುಮಾರ್, ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಹಾಗೂ ಅರ್ಚಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

7 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

12 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago