ನೆಪೋಲಿಯನ್ ಮಗನ ಮದುವೆ ದೊಡ್ಡ ಮಟ್ಟದಲ್ಲಿ ಚರ್ಚೆ: ಇಷ್ಟಕ್ಕೂ ಏನಿದು ಕಥೆ..? ವಿವರ ಇಲ್ಲಿದೆ…..

ಆತನ ಹೆಸರು ಧನುಷ್. ಸದ್ಯ ಧನುಷ್ ಮದುವೆ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಕೆಲವರು ಟೀಕೆ ಮಾಡಿದರೆ, ಇನ್ನು ಕೆಲವರು ಈತನನ್ನು ವರಿಸಿದ ವಧುವನ್ನ ಬಾಯಿತುಂಬಾ ಹೊಗಳುತ್ತಿದ್ದಾರೆ. ಇಷ್ಟಕ್ಕೂ ಏನಿದು ಕಥೆ..? ವಿವರ ಇಲ್ಲಿದೆ.

ತಮಿಳು ಸ್ಟಾರ್ ಹೀರೋ, ಮಾಜಿ ಶಾಸಕ, ಮಾಜಿ ಸಂಸದ, ಮಾಜಿ ಕೇಂದ್ರ ಸಚಿವ ಸಾಫ್ಟ್‌ವೇರ್‌ ಉದ್ಯಮಿ ನೆಪೋಲಿಯನ್ ಸುಪುತ್ರ ಧನುಷ್. ಕೋಟಿ ಕೋಟಿ ಆಸ್ತಿ ಒಡೆಯ. ಈತ ಬೆಳೆಯುತ್ತಾ ಹೋದಂತೆ ಈತನಿಗೆ ಅಪರೂಪದ ಕಾಯಿಲೆಯೊಂದು ಒಕ್ಕರಿಸಿದೆ. ಆ ಕಾಯಿಲೆಯ ಹೆಸರು ಸ್ನಾಯು ಕ್ಷಯ(Muscular dystrophy). ಅಂದರೆ ಈತನ ಸ್ನಾಯುಗಳು ವಯಸ್ಸಾಗುತ್ತಾ ಆಗುತ್ತಾ ಹೋದಂತೆ ಕ್ಷಯವಾಗುತ್ತಾ, ಕ್ಷೀಣಿಸುತ್ತಾ, ದುರ್ಬಲವಾಗುತ್ತಾ ಹೋಗುತ್ತವೆ. ಈ ಕಾಯಿಲೆಯ ಸ್ಥಿತಿಯಲ್ಲಿರುವ ಧನುಷ್ ಗೆ ಈಗ ಕೈಕಾಲು ಎತ್ತುವುದಕ್ಕೂ ಆಗದ ಸ್ಥಿತಿ ಪ್ರಸ್ತುತ ಇದೆ.

ಈತನ ಚಿಕಿತ್ಸೆಗಾಗಿ ಅಮೆರಿಕಕ್ಕೆ ಹೋಗಿರುವ ನೆಪೋಲಿಯನ್ ದಂಪತಿ, ಇವತ್ತಿಗೂ ಅಲ್ಲಿಯೇ ಇದ್ದು, ಚಿಕಿತ್ಸೆ ಕೊಡಿಸುತ್ತಲೇ ಇದ್ದಾರೆ ಎನ್ನಲಾಗಿದೆ. ಚಿಕಿತ್ಸೆಗಾಗಿ ಕೋಟಿ ಕೋಟಿ ಖರ್ಚಾಗುತ್ತಿದೆ. ಆದರೆ, ಧನುಷ್ ಆರೋಗ್ಯದಲ್ಲಿ ಯಾವ ಚೇತರಿಕೆಯೂ ಆಗುತ್ತಿಲ್ಲ ಎಂಬುದು ನೋವಿನ ಸಂಗತಿ.

ಈತನ ಮಲಮೂತ್ರ ವಿಸರ್ಜನೆಯನ್ನೂ ಬೇರೊಬ್ಬರು ಮಾಡಿಸಬೇಕು. ಬಟ್ಟೆಯನ್ನು ತೊಡಿಸಬೇಕು. ಈತನಿಗೆ ಲೈಂಗಿಕ ಶಕ್ತಿಯೂ ಇಲ್ಲ ಎನ್ನಲಾಗುತ್ತಿದೆ. ಹೀಗಿದ್ದರೂ, ತಮ್ಮ ಮಗನಿಗೆ ಮದುವೆ ಮಾಡಬೇಕು ಎಂದು ತಂದೆ ಆಸೆಪಟ್ಟು ಮದುವೆ ಮಾಡಿದ್ದಾರೆ.

ನೆಪೋಲಿಯನ್ ದಂಪತಿಯ ಈ ಆಸೆಯನ್ನು ಈಡೇರಿಸಲು ಧನುಷ್ ನನ್ನು ಮದುವೆಯಾಗಲು ಅಕ್ಷಯ ಎಂಬ ಹುಡುಗಿ ಮುಂದೆ ಬಂದಳು. ಈಗ ಆಕೆಯ ಜೊತೆ ಧನುಷ್ ಮದುವೆಯಾಗಿದೆ. ಜಪಾನ್ ಟೋಕಿಯೋದಲ್ಲಿ ನಡೆದ ಅದ್ಧೂರಿ ಮದುವೆಯಲ್ಲಿ ಧನುಷ್-ಅಕ್ಷಯ ಸತಿಪತಿಗಳಾಗಿದ್ದಾರೆ.

ಈಗ ಟೀಕೆ ಆಗುತ್ತಿರುವುದು ಇದಕ್ಕೆ. ದೈಹಿಕವಾಗಿ ಯಾವ ಶಕ್ತಿಯೂ ಇಲ್ಲದವನನ್ನು ಈ ಹುಡುಗಿ ಮದುವೆಯಾಗುವುದಕ್ಕೆ ಆತನ ಹೆಸರಲ್ಲಿದ್ದ ಕೋಟಿ ಕೋಟಿ ಆಸ್ತಿಯೇ ಕಾರಣ, ದುಡ್ಡಿದ್ದರೆ ಹುಡುಗಿಯರು ಎಂಥವನನ್ನು ಬೇಕಾದರೂ ಮದುವೆ ಆಗ್ತಾರೆ.. ಎಂದೆಲ್ಲ ಟೀಕೆ ಮಾಡ್ತಿದ್ದಾರೆ.

ಹಾಗಂತ ಎಲ್ಲರದ್ದೂ ಟೀಕೆ, ಲೇವಡಿ ಅಲ್ಲ. ಕೆಲವರು ಹೊಗಳಿಯೂ ಇದ್ದಾರೆ. ಎಲ್ಲರೂ ದೈಹಿಕವಾಗಿ ಸರಿ ಇರುವ ವ್ಯಕ್ತಿಯನ್ನಷ್ಟೇ ಮದುವೆ ಆಗುವುದಾಗಿದ್ದರೆ, ಜಗತ್ತಿನ ಕೋಟ್ಯಂತರ ವಿಕಲಚೇತನರು ಮದುವೆಯೇ ಆಗುತ್ತಿರಲಿಲ್ಲ. ಆಕೆಯನ್ನು ಟೀಕೆ ಮಾಡಬೇಡಿ ಎಂದು ಹೇಳುವವರೂ ಇದ್ದಾರೆ.

ಹಾಗಂತ ಅಕ್ಷಯ, ಅವಿದ್ಯಾವಂತೆಯೇನಲ್ಲ. ತೀರಾ ಬಡಕುಟುಂಬದವಳೂ ಅಲ್ಲ. ನರ್ಸಿಂಗ್ ಓದಿರುವ ಈಕೆ, ಈಗ ಧನುಷ್ ಅವರನ್ನು ವಿವಾಹವಾಗಿದ್ದಾರೆ.

Ramesh Babu

Journalist

Recent Posts

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

2 hours ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

4 hours ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

15 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

15 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

17 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

18 hours ago