ಆತನ ಹೆಸರು ಧನುಷ್. ಸದ್ಯ ಧನುಷ್ ಮದುವೆ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಕೆಲವರು ಟೀಕೆ ಮಾಡಿದರೆ, ಇನ್ನು ಕೆಲವರು ಈತನನ್ನು ವರಿಸಿದ ವಧುವನ್ನ ಬಾಯಿತುಂಬಾ ಹೊಗಳುತ್ತಿದ್ದಾರೆ. ಇಷ್ಟಕ್ಕೂ ಏನಿದು ಕಥೆ..? ವಿವರ ಇಲ್ಲಿದೆ.
ತಮಿಳು ಸ್ಟಾರ್ ಹೀರೋ, ಮಾಜಿ ಶಾಸಕ, ಮಾಜಿ ಸಂಸದ, ಮಾಜಿ ಕೇಂದ್ರ ಸಚಿವ ಸಾಫ್ಟ್ವೇರ್ ಉದ್ಯಮಿ ನೆಪೋಲಿಯನ್ ಸುಪುತ್ರ ಧನುಷ್. ಕೋಟಿ ಕೋಟಿ ಆಸ್ತಿ ಒಡೆಯ. ಈತ ಬೆಳೆಯುತ್ತಾ ಹೋದಂತೆ ಈತನಿಗೆ ಅಪರೂಪದ ಕಾಯಿಲೆಯೊಂದು ಒಕ್ಕರಿಸಿದೆ. ಆ ಕಾಯಿಲೆಯ ಹೆಸರು ಸ್ನಾಯು ಕ್ಷಯ(Muscular dystrophy). ಅಂದರೆ ಈತನ ಸ್ನಾಯುಗಳು ವಯಸ್ಸಾಗುತ್ತಾ ಆಗುತ್ತಾ ಹೋದಂತೆ ಕ್ಷಯವಾಗುತ್ತಾ, ಕ್ಷೀಣಿಸುತ್ತಾ, ದುರ್ಬಲವಾಗುತ್ತಾ ಹೋಗುತ್ತವೆ. ಈ ಕಾಯಿಲೆಯ ಸ್ಥಿತಿಯಲ್ಲಿರುವ ಧನುಷ್ ಗೆ ಈಗ ಕೈಕಾಲು ಎತ್ತುವುದಕ್ಕೂ ಆಗದ ಸ್ಥಿತಿ ಪ್ರಸ್ತುತ ಇದೆ.
ಈತನ ಚಿಕಿತ್ಸೆಗಾಗಿ ಅಮೆರಿಕಕ್ಕೆ ಹೋಗಿರುವ ನೆಪೋಲಿಯನ್ ದಂಪತಿ, ಇವತ್ತಿಗೂ ಅಲ್ಲಿಯೇ ಇದ್ದು, ಚಿಕಿತ್ಸೆ ಕೊಡಿಸುತ್ತಲೇ ಇದ್ದಾರೆ ಎನ್ನಲಾಗಿದೆ. ಚಿಕಿತ್ಸೆಗಾಗಿ ಕೋಟಿ ಕೋಟಿ ಖರ್ಚಾಗುತ್ತಿದೆ. ಆದರೆ, ಧನುಷ್ ಆರೋಗ್ಯದಲ್ಲಿ ಯಾವ ಚೇತರಿಕೆಯೂ ಆಗುತ್ತಿಲ್ಲ ಎಂಬುದು ನೋವಿನ ಸಂಗತಿ.
ಈತನ ಮಲಮೂತ್ರ ವಿಸರ್ಜನೆಯನ್ನೂ ಬೇರೊಬ್ಬರು ಮಾಡಿಸಬೇಕು. ಬಟ್ಟೆಯನ್ನು ತೊಡಿಸಬೇಕು. ಈತನಿಗೆ ಲೈಂಗಿಕ ಶಕ್ತಿಯೂ ಇಲ್ಲ ಎನ್ನಲಾಗುತ್ತಿದೆ. ಹೀಗಿದ್ದರೂ, ತಮ್ಮ ಮಗನಿಗೆ ಮದುವೆ ಮಾಡಬೇಕು ಎಂದು ತಂದೆ ಆಸೆಪಟ್ಟು ಮದುವೆ ಮಾಡಿದ್ದಾರೆ.
ಈಗ ಟೀಕೆ ಆಗುತ್ತಿರುವುದು ಇದಕ್ಕೆ. ದೈಹಿಕವಾಗಿ ಯಾವ ಶಕ್ತಿಯೂ ಇಲ್ಲದವನನ್ನು ಈ ಹುಡುಗಿ ಮದುವೆಯಾಗುವುದಕ್ಕೆ ಆತನ ಹೆಸರಲ್ಲಿದ್ದ ಕೋಟಿ ಕೋಟಿ ಆಸ್ತಿಯೇ ಕಾರಣ, ದುಡ್ಡಿದ್ದರೆ ಹುಡುಗಿಯರು ಎಂಥವನನ್ನು ಬೇಕಾದರೂ ಮದುವೆ ಆಗ್ತಾರೆ.. ಎಂದೆಲ್ಲ ಟೀಕೆ ಮಾಡ್ತಿದ್ದಾರೆ.
ಹಾಗಂತ ಅಕ್ಷಯ, ಅವಿದ್ಯಾವಂತೆಯೇನಲ್ಲ. ತೀರಾ ಬಡಕುಟುಂಬದವಳೂ ಅಲ್ಲ. ನರ್ಸಿಂಗ್ ಓದಿರುವ ಈಕೆ, ಈಗ ಧನುಷ್ ಅವರನ್ನು ವಿವಾಹವಾಗಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…