ಆತನ ಹೆಸರು ಧನುಷ್. ಸದ್ಯ ಧನುಷ್ ಮದುವೆ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಕೆಲವರು ಟೀಕೆ ಮಾಡಿದರೆ, ಇನ್ನು ಕೆಲವರು ಈತನನ್ನು ವರಿಸಿದ ವಧುವನ್ನ ಬಾಯಿತುಂಬಾ ಹೊಗಳುತ್ತಿದ್ದಾರೆ. ಇಷ್ಟಕ್ಕೂ ಏನಿದು ಕಥೆ..? ವಿವರ ಇಲ್ಲಿದೆ.
ತಮಿಳು ಸ್ಟಾರ್ ಹೀರೋ, ಮಾಜಿ ಶಾಸಕ, ಮಾಜಿ ಸಂಸದ, ಮಾಜಿ ಕೇಂದ್ರ ಸಚಿವ ಸಾಫ್ಟ್ವೇರ್ ಉದ್ಯಮಿ ನೆಪೋಲಿಯನ್ ಸುಪುತ್ರ ಧನುಷ್. ಕೋಟಿ ಕೋಟಿ ಆಸ್ತಿ ಒಡೆಯ. ಈತ ಬೆಳೆಯುತ್ತಾ ಹೋದಂತೆ ಈತನಿಗೆ ಅಪರೂಪದ ಕಾಯಿಲೆಯೊಂದು ಒಕ್ಕರಿಸಿದೆ. ಆ ಕಾಯಿಲೆಯ ಹೆಸರು ಸ್ನಾಯು ಕ್ಷಯ(Muscular dystrophy). ಅಂದರೆ ಈತನ ಸ್ನಾಯುಗಳು ವಯಸ್ಸಾಗುತ್ತಾ ಆಗುತ್ತಾ ಹೋದಂತೆ ಕ್ಷಯವಾಗುತ್ತಾ, ಕ್ಷೀಣಿಸುತ್ತಾ, ದುರ್ಬಲವಾಗುತ್ತಾ ಹೋಗುತ್ತವೆ. ಈ ಕಾಯಿಲೆಯ ಸ್ಥಿತಿಯಲ್ಲಿರುವ ಧನುಷ್ ಗೆ ಈಗ ಕೈಕಾಲು ಎತ್ತುವುದಕ್ಕೂ ಆಗದ ಸ್ಥಿತಿ ಪ್ರಸ್ತುತ ಇದೆ.
ಈತನ ಚಿಕಿತ್ಸೆಗಾಗಿ ಅಮೆರಿಕಕ್ಕೆ ಹೋಗಿರುವ ನೆಪೋಲಿಯನ್ ದಂಪತಿ, ಇವತ್ತಿಗೂ ಅಲ್ಲಿಯೇ ಇದ್ದು, ಚಿಕಿತ್ಸೆ ಕೊಡಿಸುತ್ತಲೇ ಇದ್ದಾರೆ ಎನ್ನಲಾಗಿದೆ. ಚಿಕಿತ್ಸೆಗಾಗಿ ಕೋಟಿ ಕೋಟಿ ಖರ್ಚಾಗುತ್ತಿದೆ. ಆದರೆ, ಧನುಷ್ ಆರೋಗ್ಯದಲ್ಲಿ ಯಾವ ಚೇತರಿಕೆಯೂ ಆಗುತ್ತಿಲ್ಲ ಎಂಬುದು ನೋವಿನ ಸಂಗತಿ.
ಈತನ ಮಲಮೂತ್ರ ವಿಸರ್ಜನೆಯನ್ನೂ ಬೇರೊಬ್ಬರು ಮಾಡಿಸಬೇಕು. ಬಟ್ಟೆಯನ್ನು ತೊಡಿಸಬೇಕು. ಈತನಿಗೆ ಲೈಂಗಿಕ ಶಕ್ತಿಯೂ ಇಲ್ಲ ಎನ್ನಲಾಗುತ್ತಿದೆ. ಹೀಗಿದ್ದರೂ, ತಮ್ಮ ಮಗನಿಗೆ ಮದುವೆ ಮಾಡಬೇಕು ಎಂದು ತಂದೆ ಆಸೆಪಟ್ಟು ಮದುವೆ ಮಾಡಿದ್ದಾರೆ.
ಈಗ ಟೀಕೆ ಆಗುತ್ತಿರುವುದು ಇದಕ್ಕೆ. ದೈಹಿಕವಾಗಿ ಯಾವ ಶಕ್ತಿಯೂ ಇಲ್ಲದವನನ್ನು ಈ ಹುಡುಗಿ ಮದುವೆಯಾಗುವುದಕ್ಕೆ ಆತನ ಹೆಸರಲ್ಲಿದ್ದ ಕೋಟಿ ಕೋಟಿ ಆಸ್ತಿಯೇ ಕಾರಣ, ದುಡ್ಡಿದ್ದರೆ ಹುಡುಗಿಯರು ಎಂಥವನನ್ನು ಬೇಕಾದರೂ ಮದುವೆ ಆಗ್ತಾರೆ.. ಎಂದೆಲ್ಲ ಟೀಕೆ ಮಾಡ್ತಿದ್ದಾರೆ.
ಹಾಗಂತ ಅಕ್ಷಯ, ಅವಿದ್ಯಾವಂತೆಯೇನಲ್ಲ. ತೀರಾ ಬಡಕುಟುಂಬದವಳೂ ಅಲ್ಲ. ನರ್ಸಿಂಗ್ ಓದಿರುವ ಈಕೆ, ಈಗ ಧನುಷ್ ಅವರನ್ನು ವಿವಾಹವಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…