ಆತನ ಹೆಸರು ಧನುಷ್. ಸದ್ಯ ಧನುಷ್ ಮದುವೆ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಕೆಲವರು ಟೀಕೆ ಮಾಡಿದರೆ, ಇನ್ನು ಕೆಲವರು ಈತನನ್ನು ವರಿಸಿದ ವಧುವನ್ನ ಬಾಯಿತುಂಬಾ ಹೊಗಳುತ್ತಿದ್ದಾರೆ. ಇಷ್ಟಕ್ಕೂ ಏನಿದು ಕಥೆ..? ವಿವರ ಇಲ್ಲಿದೆ.
ತಮಿಳು ಸ್ಟಾರ್ ಹೀರೋ, ಮಾಜಿ ಶಾಸಕ, ಮಾಜಿ ಸಂಸದ, ಮಾಜಿ ಕೇಂದ್ರ ಸಚಿವ ಸಾಫ್ಟ್ವೇರ್ ಉದ್ಯಮಿ ನೆಪೋಲಿಯನ್ ಸುಪುತ್ರ ಧನುಷ್. ಕೋಟಿ ಕೋಟಿ ಆಸ್ತಿ ಒಡೆಯ. ಈತ ಬೆಳೆಯುತ್ತಾ ಹೋದಂತೆ ಈತನಿಗೆ ಅಪರೂಪದ ಕಾಯಿಲೆಯೊಂದು ಒಕ್ಕರಿಸಿದೆ. ಆ ಕಾಯಿಲೆಯ ಹೆಸರು ಸ್ನಾಯು ಕ್ಷಯ(Muscular dystrophy). ಅಂದರೆ ಈತನ ಸ್ನಾಯುಗಳು ವಯಸ್ಸಾಗುತ್ತಾ ಆಗುತ್ತಾ ಹೋದಂತೆ ಕ್ಷಯವಾಗುತ್ತಾ, ಕ್ಷೀಣಿಸುತ್ತಾ, ದುರ್ಬಲವಾಗುತ್ತಾ ಹೋಗುತ್ತವೆ. ಈ ಕಾಯಿಲೆಯ ಸ್ಥಿತಿಯಲ್ಲಿರುವ ಧನುಷ್ ಗೆ ಈಗ ಕೈಕಾಲು ಎತ್ತುವುದಕ್ಕೂ ಆಗದ ಸ್ಥಿತಿ ಪ್ರಸ್ತುತ ಇದೆ.
ಈತನ ಚಿಕಿತ್ಸೆಗಾಗಿ ಅಮೆರಿಕಕ್ಕೆ ಹೋಗಿರುವ ನೆಪೋಲಿಯನ್ ದಂಪತಿ, ಇವತ್ತಿಗೂ ಅಲ್ಲಿಯೇ ಇದ್ದು, ಚಿಕಿತ್ಸೆ ಕೊಡಿಸುತ್ತಲೇ ಇದ್ದಾರೆ ಎನ್ನಲಾಗಿದೆ. ಚಿಕಿತ್ಸೆಗಾಗಿ ಕೋಟಿ ಕೋಟಿ ಖರ್ಚಾಗುತ್ತಿದೆ. ಆದರೆ, ಧನುಷ್ ಆರೋಗ್ಯದಲ್ಲಿ ಯಾವ ಚೇತರಿಕೆಯೂ ಆಗುತ್ತಿಲ್ಲ ಎಂಬುದು ನೋವಿನ ಸಂಗತಿ.
ಈತನ ಮಲಮೂತ್ರ ವಿಸರ್ಜನೆಯನ್ನೂ ಬೇರೊಬ್ಬರು ಮಾಡಿಸಬೇಕು. ಬಟ್ಟೆಯನ್ನು ತೊಡಿಸಬೇಕು. ಈತನಿಗೆ ಲೈಂಗಿಕ ಶಕ್ತಿಯೂ ಇಲ್ಲ ಎನ್ನಲಾಗುತ್ತಿದೆ. ಹೀಗಿದ್ದರೂ, ತಮ್ಮ ಮಗನಿಗೆ ಮದುವೆ ಮಾಡಬೇಕು ಎಂದು ತಂದೆ ಆಸೆಪಟ್ಟು ಮದುವೆ ಮಾಡಿದ್ದಾರೆ.
ಈಗ ಟೀಕೆ ಆಗುತ್ತಿರುವುದು ಇದಕ್ಕೆ. ದೈಹಿಕವಾಗಿ ಯಾವ ಶಕ್ತಿಯೂ ಇಲ್ಲದವನನ್ನು ಈ ಹುಡುಗಿ ಮದುವೆಯಾಗುವುದಕ್ಕೆ ಆತನ ಹೆಸರಲ್ಲಿದ್ದ ಕೋಟಿ ಕೋಟಿ ಆಸ್ತಿಯೇ ಕಾರಣ, ದುಡ್ಡಿದ್ದರೆ ಹುಡುಗಿಯರು ಎಂಥವನನ್ನು ಬೇಕಾದರೂ ಮದುವೆ ಆಗ್ತಾರೆ.. ಎಂದೆಲ್ಲ ಟೀಕೆ ಮಾಡ್ತಿದ್ದಾರೆ.
ಹಾಗಂತ ಅಕ್ಷಯ, ಅವಿದ್ಯಾವಂತೆಯೇನಲ್ಲ. ತೀರಾ ಬಡಕುಟುಂಬದವಳೂ ಅಲ್ಲ. ನರ್ಸಿಂಗ್ ಓದಿರುವ ಈಕೆ, ಈಗ ಧನುಷ್ ಅವರನ್ನು ವಿವಾಹವಾಗಿದ್ದಾರೆ.
ದೊಡ್ಡಬಳ್ಳಾಪುರ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…
ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…
ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…