ನೆಪೋಲಿಯನ್ ಮಗನ ಮದುವೆ ದೊಡ್ಡ ಮಟ್ಟದಲ್ಲಿ ಚರ್ಚೆ: ಇಷ್ಟಕ್ಕೂ ಏನಿದು ಕಥೆ..? ವಿವರ ಇಲ್ಲಿದೆ…..

ಆತನ ಹೆಸರು ಧನುಷ್. ಸದ್ಯ ಧನುಷ್ ಮದುವೆ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಕೆಲವರು ಟೀಕೆ ಮಾಡಿದರೆ, ಇನ್ನು ಕೆಲವರು ಈತನನ್ನು ವರಿಸಿದ ವಧುವನ್ನ ಬಾಯಿತುಂಬಾ ಹೊಗಳುತ್ತಿದ್ದಾರೆ. ಇಷ್ಟಕ್ಕೂ ಏನಿದು ಕಥೆ..? ವಿವರ ಇಲ್ಲಿದೆ.

ತಮಿಳು ಸ್ಟಾರ್ ಹೀರೋ, ಮಾಜಿ ಶಾಸಕ, ಮಾಜಿ ಸಂಸದ, ಮಾಜಿ ಕೇಂದ್ರ ಸಚಿವ ಸಾಫ್ಟ್‌ವೇರ್‌ ಉದ್ಯಮಿ ನೆಪೋಲಿಯನ್ ಸುಪುತ್ರ ಧನುಷ್. ಕೋಟಿ ಕೋಟಿ ಆಸ್ತಿ ಒಡೆಯ. ಈತ ಬೆಳೆಯುತ್ತಾ ಹೋದಂತೆ ಈತನಿಗೆ ಅಪರೂಪದ ಕಾಯಿಲೆಯೊಂದು ಒಕ್ಕರಿಸಿದೆ. ಆ ಕಾಯಿಲೆಯ ಹೆಸರು ಸ್ನಾಯು ಕ್ಷಯ(Muscular dystrophy). ಅಂದರೆ ಈತನ ಸ್ನಾಯುಗಳು ವಯಸ್ಸಾಗುತ್ತಾ ಆಗುತ್ತಾ ಹೋದಂತೆ ಕ್ಷಯವಾಗುತ್ತಾ, ಕ್ಷೀಣಿಸುತ್ತಾ, ದುರ್ಬಲವಾಗುತ್ತಾ ಹೋಗುತ್ತವೆ. ಈ ಕಾಯಿಲೆಯ ಸ್ಥಿತಿಯಲ್ಲಿರುವ ಧನುಷ್ ಗೆ ಈಗ ಕೈಕಾಲು ಎತ್ತುವುದಕ್ಕೂ ಆಗದ ಸ್ಥಿತಿ ಪ್ರಸ್ತುತ ಇದೆ.

ಈತನ ಚಿಕಿತ್ಸೆಗಾಗಿ ಅಮೆರಿಕಕ್ಕೆ ಹೋಗಿರುವ ನೆಪೋಲಿಯನ್ ದಂಪತಿ, ಇವತ್ತಿಗೂ ಅಲ್ಲಿಯೇ ಇದ್ದು, ಚಿಕಿತ್ಸೆ ಕೊಡಿಸುತ್ತಲೇ ಇದ್ದಾರೆ ಎನ್ನಲಾಗಿದೆ. ಚಿಕಿತ್ಸೆಗಾಗಿ ಕೋಟಿ ಕೋಟಿ ಖರ್ಚಾಗುತ್ತಿದೆ. ಆದರೆ, ಧನುಷ್ ಆರೋಗ್ಯದಲ್ಲಿ ಯಾವ ಚೇತರಿಕೆಯೂ ಆಗುತ್ತಿಲ್ಲ ಎಂಬುದು ನೋವಿನ ಸಂಗತಿ.

ಈತನ ಮಲಮೂತ್ರ ವಿಸರ್ಜನೆಯನ್ನೂ ಬೇರೊಬ್ಬರು ಮಾಡಿಸಬೇಕು. ಬಟ್ಟೆಯನ್ನು ತೊಡಿಸಬೇಕು. ಈತನಿಗೆ ಲೈಂಗಿಕ ಶಕ್ತಿಯೂ ಇಲ್ಲ ಎನ್ನಲಾಗುತ್ತಿದೆ. ಹೀಗಿದ್ದರೂ, ತಮ್ಮ ಮಗನಿಗೆ ಮದುವೆ ಮಾಡಬೇಕು ಎಂದು ತಂದೆ ಆಸೆಪಟ್ಟು ಮದುವೆ ಮಾಡಿದ್ದಾರೆ.

ನೆಪೋಲಿಯನ್ ದಂಪತಿಯ ಈ ಆಸೆಯನ್ನು ಈಡೇರಿಸಲು ಧನುಷ್ ನನ್ನು ಮದುವೆಯಾಗಲು ಅಕ್ಷಯ ಎಂಬ ಹುಡುಗಿ ಮುಂದೆ ಬಂದಳು. ಈಗ ಆಕೆಯ ಜೊತೆ ಧನುಷ್ ಮದುವೆಯಾಗಿದೆ. ಜಪಾನ್ ಟೋಕಿಯೋದಲ್ಲಿ ನಡೆದ ಅದ್ಧೂರಿ ಮದುವೆಯಲ್ಲಿ ಧನುಷ್-ಅಕ್ಷಯ ಸತಿಪತಿಗಳಾಗಿದ್ದಾರೆ.

ಈಗ ಟೀಕೆ ಆಗುತ್ತಿರುವುದು ಇದಕ್ಕೆ. ದೈಹಿಕವಾಗಿ ಯಾವ ಶಕ್ತಿಯೂ ಇಲ್ಲದವನನ್ನು ಈ ಹುಡುಗಿ ಮದುವೆಯಾಗುವುದಕ್ಕೆ ಆತನ ಹೆಸರಲ್ಲಿದ್ದ ಕೋಟಿ ಕೋಟಿ ಆಸ್ತಿಯೇ ಕಾರಣ, ದುಡ್ಡಿದ್ದರೆ ಹುಡುಗಿಯರು ಎಂಥವನನ್ನು ಬೇಕಾದರೂ ಮದುವೆ ಆಗ್ತಾರೆ.. ಎಂದೆಲ್ಲ ಟೀಕೆ ಮಾಡ್ತಿದ್ದಾರೆ.

ಹಾಗಂತ ಎಲ್ಲರದ್ದೂ ಟೀಕೆ, ಲೇವಡಿ ಅಲ್ಲ. ಕೆಲವರು ಹೊಗಳಿಯೂ ಇದ್ದಾರೆ. ಎಲ್ಲರೂ ದೈಹಿಕವಾಗಿ ಸರಿ ಇರುವ ವ್ಯಕ್ತಿಯನ್ನಷ್ಟೇ ಮದುವೆ ಆಗುವುದಾಗಿದ್ದರೆ, ಜಗತ್ತಿನ ಕೋಟ್ಯಂತರ ವಿಕಲಚೇತನರು ಮದುವೆಯೇ ಆಗುತ್ತಿರಲಿಲ್ಲ. ಆಕೆಯನ್ನು ಟೀಕೆ ಮಾಡಬೇಡಿ ಎಂದು ಹೇಳುವವರೂ ಇದ್ದಾರೆ.

ಹಾಗಂತ ಅಕ್ಷಯ, ಅವಿದ್ಯಾವಂತೆಯೇನಲ್ಲ. ತೀರಾ ಬಡಕುಟುಂಬದವಳೂ ಅಲ್ಲ. ನರ್ಸಿಂಗ್ ಓದಿರುವ ಈಕೆ, ಈಗ ಧನುಷ್ ಅವರನ್ನು ವಿವಾಹವಾಗಿದ್ದಾರೆ.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

20 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago