ನೆಪೋಲಿಯನ್ ಮಗನ ಮದುವೆ ದೊಡ್ಡ ಮಟ್ಟದಲ್ಲಿ ಚರ್ಚೆ: ಇಷ್ಟಕ್ಕೂ ಏನಿದು ಕಥೆ..? ವಿವರ ಇಲ್ಲಿದೆ…..

ಆತನ ಹೆಸರು ಧನುಷ್. ಸದ್ಯ ಧನುಷ್ ಮದುವೆ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಕೆಲವರು ಟೀಕೆ ಮಾಡಿದರೆ, ಇನ್ನು ಕೆಲವರು ಈತನನ್ನು ವರಿಸಿದ ವಧುವನ್ನ ಬಾಯಿತುಂಬಾ ಹೊಗಳುತ್ತಿದ್ದಾರೆ. ಇಷ್ಟಕ್ಕೂ ಏನಿದು ಕಥೆ..? ವಿವರ ಇಲ್ಲಿದೆ.

ತಮಿಳು ಸ್ಟಾರ್ ಹೀರೋ, ಮಾಜಿ ಶಾಸಕ, ಮಾಜಿ ಸಂಸದ, ಮಾಜಿ ಕೇಂದ್ರ ಸಚಿವ ಸಾಫ್ಟ್‌ವೇರ್‌ ಉದ್ಯಮಿ ನೆಪೋಲಿಯನ್ ಸುಪುತ್ರ ಧನುಷ್. ಕೋಟಿ ಕೋಟಿ ಆಸ್ತಿ ಒಡೆಯ. ಈತ ಬೆಳೆಯುತ್ತಾ ಹೋದಂತೆ ಈತನಿಗೆ ಅಪರೂಪದ ಕಾಯಿಲೆಯೊಂದು ಒಕ್ಕರಿಸಿದೆ. ಆ ಕಾಯಿಲೆಯ ಹೆಸರು ಸ್ನಾಯು ಕ್ಷಯ(Muscular dystrophy). ಅಂದರೆ ಈತನ ಸ್ನಾಯುಗಳು ವಯಸ್ಸಾಗುತ್ತಾ ಆಗುತ್ತಾ ಹೋದಂತೆ ಕ್ಷಯವಾಗುತ್ತಾ, ಕ್ಷೀಣಿಸುತ್ತಾ, ದುರ್ಬಲವಾಗುತ್ತಾ ಹೋಗುತ್ತವೆ. ಈ ಕಾಯಿಲೆಯ ಸ್ಥಿತಿಯಲ್ಲಿರುವ ಧನುಷ್ ಗೆ ಈಗ ಕೈಕಾಲು ಎತ್ತುವುದಕ್ಕೂ ಆಗದ ಸ್ಥಿತಿ ಪ್ರಸ್ತುತ ಇದೆ.

ಈತನ ಚಿಕಿತ್ಸೆಗಾಗಿ ಅಮೆರಿಕಕ್ಕೆ ಹೋಗಿರುವ ನೆಪೋಲಿಯನ್ ದಂಪತಿ, ಇವತ್ತಿಗೂ ಅಲ್ಲಿಯೇ ಇದ್ದು, ಚಿಕಿತ್ಸೆ ಕೊಡಿಸುತ್ತಲೇ ಇದ್ದಾರೆ ಎನ್ನಲಾಗಿದೆ. ಚಿಕಿತ್ಸೆಗಾಗಿ ಕೋಟಿ ಕೋಟಿ ಖರ್ಚಾಗುತ್ತಿದೆ. ಆದರೆ, ಧನುಷ್ ಆರೋಗ್ಯದಲ್ಲಿ ಯಾವ ಚೇತರಿಕೆಯೂ ಆಗುತ್ತಿಲ್ಲ ಎಂಬುದು ನೋವಿನ ಸಂಗತಿ.

ಈತನ ಮಲಮೂತ್ರ ವಿಸರ್ಜನೆಯನ್ನೂ ಬೇರೊಬ್ಬರು ಮಾಡಿಸಬೇಕು. ಬಟ್ಟೆಯನ್ನು ತೊಡಿಸಬೇಕು. ಈತನಿಗೆ ಲೈಂಗಿಕ ಶಕ್ತಿಯೂ ಇಲ್ಲ ಎನ್ನಲಾಗುತ್ತಿದೆ. ಹೀಗಿದ್ದರೂ, ತಮ್ಮ ಮಗನಿಗೆ ಮದುವೆ ಮಾಡಬೇಕು ಎಂದು ತಂದೆ ಆಸೆಪಟ್ಟು ಮದುವೆ ಮಾಡಿದ್ದಾರೆ.

ನೆಪೋಲಿಯನ್ ದಂಪತಿಯ ಈ ಆಸೆಯನ್ನು ಈಡೇರಿಸಲು ಧನುಷ್ ನನ್ನು ಮದುವೆಯಾಗಲು ಅಕ್ಷಯ ಎಂಬ ಹುಡುಗಿ ಮುಂದೆ ಬಂದಳು. ಈಗ ಆಕೆಯ ಜೊತೆ ಧನುಷ್ ಮದುವೆಯಾಗಿದೆ. ಜಪಾನ್ ಟೋಕಿಯೋದಲ್ಲಿ ನಡೆದ ಅದ್ಧೂರಿ ಮದುವೆಯಲ್ಲಿ ಧನುಷ್-ಅಕ್ಷಯ ಸತಿಪತಿಗಳಾಗಿದ್ದಾರೆ.

ಈಗ ಟೀಕೆ ಆಗುತ್ತಿರುವುದು ಇದಕ್ಕೆ. ದೈಹಿಕವಾಗಿ ಯಾವ ಶಕ್ತಿಯೂ ಇಲ್ಲದವನನ್ನು ಈ ಹುಡುಗಿ ಮದುವೆಯಾಗುವುದಕ್ಕೆ ಆತನ ಹೆಸರಲ್ಲಿದ್ದ ಕೋಟಿ ಕೋಟಿ ಆಸ್ತಿಯೇ ಕಾರಣ, ದುಡ್ಡಿದ್ದರೆ ಹುಡುಗಿಯರು ಎಂಥವನನ್ನು ಬೇಕಾದರೂ ಮದುವೆ ಆಗ್ತಾರೆ.. ಎಂದೆಲ್ಲ ಟೀಕೆ ಮಾಡ್ತಿದ್ದಾರೆ.

ಹಾಗಂತ ಎಲ್ಲರದ್ದೂ ಟೀಕೆ, ಲೇವಡಿ ಅಲ್ಲ. ಕೆಲವರು ಹೊಗಳಿಯೂ ಇದ್ದಾರೆ. ಎಲ್ಲರೂ ದೈಹಿಕವಾಗಿ ಸರಿ ಇರುವ ವ್ಯಕ್ತಿಯನ್ನಷ್ಟೇ ಮದುವೆ ಆಗುವುದಾಗಿದ್ದರೆ, ಜಗತ್ತಿನ ಕೋಟ್ಯಂತರ ವಿಕಲಚೇತನರು ಮದುವೆಯೇ ಆಗುತ್ತಿರಲಿಲ್ಲ. ಆಕೆಯನ್ನು ಟೀಕೆ ಮಾಡಬೇಡಿ ಎಂದು ಹೇಳುವವರೂ ಇದ್ದಾರೆ.

ಹಾಗಂತ ಅಕ್ಷಯ, ಅವಿದ್ಯಾವಂತೆಯೇನಲ್ಲ. ತೀರಾ ಬಡಕುಟುಂಬದವಳೂ ಅಲ್ಲ. ನರ್ಸಿಂಗ್ ಓದಿರುವ ಈಕೆ, ಈಗ ಧನುಷ್ ಅವರನ್ನು ವಿವಾಹವಾಗಿದ್ದಾರೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

11 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

11 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

14 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

14 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

19 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

23 hours ago