ನೆಪೋಲಿಯನ್ ಮಗನ ಮದುವೆ ದೊಡ್ಡ ಮಟ್ಟದಲ್ಲಿ ಚರ್ಚೆ: ಇಷ್ಟಕ್ಕೂ ಏನಿದು ಕಥೆ..? ವಿವರ ಇಲ್ಲಿದೆ…..

ಆತನ ಹೆಸರು ಧನುಷ್. ಸದ್ಯ ಧನುಷ್ ಮದುವೆ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಕೆಲವರು ಟೀಕೆ ಮಾಡಿದರೆ, ಇನ್ನು ಕೆಲವರು ಈತನನ್ನು ವರಿಸಿದ ವಧುವನ್ನ ಬಾಯಿತುಂಬಾ ಹೊಗಳುತ್ತಿದ್ದಾರೆ. ಇಷ್ಟಕ್ಕೂ ಏನಿದು ಕಥೆ..? ವಿವರ ಇಲ್ಲಿದೆ.

ತಮಿಳು ಸ್ಟಾರ್ ಹೀರೋ, ಮಾಜಿ ಶಾಸಕ, ಮಾಜಿ ಸಂಸದ, ಮಾಜಿ ಕೇಂದ್ರ ಸಚಿವ ಸಾಫ್ಟ್‌ವೇರ್‌ ಉದ್ಯಮಿ ನೆಪೋಲಿಯನ್ ಸುಪುತ್ರ ಧನುಷ್. ಕೋಟಿ ಕೋಟಿ ಆಸ್ತಿ ಒಡೆಯ. ಈತ ಬೆಳೆಯುತ್ತಾ ಹೋದಂತೆ ಈತನಿಗೆ ಅಪರೂಪದ ಕಾಯಿಲೆಯೊಂದು ಒಕ್ಕರಿಸಿದೆ. ಆ ಕಾಯಿಲೆಯ ಹೆಸರು ಸ್ನಾಯು ಕ್ಷಯ(Muscular dystrophy). ಅಂದರೆ ಈತನ ಸ್ನಾಯುಗಳು ವಯಸ್ಸಾಗುತ್ತಾ ಆಗುತ್ತಾ ಹೋದಂತೆ ಕ್ಷಯವಾಗುತ್ತಾ, ಕ್ಷೀಣಿಸುತ್ತಾ, ದುರ್ಬಲವಾಗುತ್ತಾ ಹೋಗುತ್ತವೆ. ಈ ಕಾಯಿಲೆಯ ಸ್ಥಿತಿಯಲ್ಲಿರುವ ಧನುಷ್ ಗೆ ಈಗ ಕೈಕಾಲು ಎತ್ತುವುದಕ್ಕೂ ಆಗದ ಸ್ಥಿತಿ ಪ್ರಸ್ತುತ ಇದೆ.

ಈತನ ಚಿಕಿತ್ಸೆಗಾಗಿ ಅಮೆರಿಕಕ್ಕೆ ಹೋಗಿರುವ ನೆಪೋಲಿಯನ್ ದಂಪತಿ, ಇವತ್ತಿಗೂ ಅಲ್ಲಿಯೇ ಇದ್ದು, ಚಿಕಿತ್ಸೆ ಕೊಡಿಸುತ್ತಲೇ ಇದ್ದಾರೆ ಎನ್ನಲಾಗಿದೆ. ಚಿಕಿತ್ಸೆಗಾಗಿ ಕೋಟಿ ಕೋಟಿ ಖರ್ಚಾಗುತ್ತಿದೆ. ಆದರೆ, ಧನುಷ್ ಆರೋಗ್ಯದಲ್ಲಿ ಯಾವ ಚೇತರಿಕೆಯೂ ಆಗುತ್ತಿಲ್ಲ ಎಂಬುದು ನೋವಿನ ಸಂಗತಿ.

ಈತನ ಮಲಮೂತ್ರ ವಿಸರ್ಜನೆಯನ್ನೂ ಬೇರೊಬ್ಬರು ಮಾಡಿಸಬೇಕು. ಬಟ್ಟೆಯನ್ನು ತೊಡಿಸಬೇಕು. ಈತನಿಗೆ ಲೈಂಗಿಕ ಶಕ್ತಿಯೂ ಇಲ್ಲ ಎನ್ನಲಾಗುತ್ತಿದೆ. ಹೀಗಿದ್ದರೂ, ತಮ್ಮ ಮಗನಿಗೆ ಮದುವೆ ಮಾಡಬೇಕು ಎಂದು ತಂದೆ ಆಸೆಪಟ್ಟು ಮದುವೆ ಮಾಡಿದ್ದಾರೆ.

ನೆಪೋಲಿಯನ್ ದಂಪತಿಯ ಈ ಆಸೆಯನ್ನು ಈಡೇರಿಸಲು ಧನುಷ್ ನನ್ನು ಮದುವೆಯಾಗಲು ಅಕ್ಷಯ ಎಂಬ ಹುಡುಗಿ ಮುಂದೆ ಬಂದಳು. ಈಗ ಆಕೆಯ ಜೊತೆ ಧನುಷ್ ಮದುವೆಯಾಗಿದೆ. ಜಪಾನ್ ಟೋಕಿಯೋದಲ್ಲಿ ನಡೆದ ಅದ್ಧೂರಿ ಮದುವೆಯಲ್ಲಿ ಧನುಷ್-ಅಕ್ಷಯ ಸತಿಪತಿಗಳಾಗಿದ್ದಾರೆ.

ಈಗ ಟೀಕೆ ಆಗುತ್ತಿರುವುದು ಇದಕ್ಕೆ. ದೈಹಿಕವಾಗಿ ಯಾವ ಶಕ್ತಿಯೂ ಇಲ್ಲದವನನ್ನು ಈ ಹುಡುಗಿ ಮದುವೆಯಾಗುವುದಕ್ಕೆ ಆತನ ಹೆಸರಲ್ಲಿದ್ದ ಕೋಟಿ ಕೋಟಿ ಆಸ್ತಿಯೇ ಕಾರಣ, ದುಡ್ಡಿದ್ದರೆ ಹುಡುಗಿಯರು ಎಂಥವನನ್ನು ಬೇಕಾದರೂ ಮದುವೆ ಆಗ್ತಾರೆ.. ಎಂದೆಲ್ಲ ಟೀಕೆ ಮಾಡ್ತಿದ್ದಾರೆ.

ಹಾಗಂತ ಎಲ್ಲರದ್ದೂ ಟೀಕೆ, ಲೇವಡಿ ಅಲ್ಲ. ಕೆಲವರು ಹೊಗಳಿಯೂ ಇದ್ದಾರೆ. ಎಲ್ಲರೂ ದೈಹಿಕವಾಗಿ ಸರಿ ಇರುವ ವ್ಯಕ್ತಿಯನ್ನಷ್ಟೇ ಮದುವೆ ಆಗುವುದಾಗಿದ್ದರೆ, ಜಗತ್ತಿನ ಕೋಟ್ಯಂತರ ವಿಕಲಚೇತನರು ಮದುವೆಯೇ ಆಗುತ್ತಿರಲಿಲ್ಲ. ಆಕೆಯನ್ನು ಟೀಕೆ ಮಾಡಬೇಡಿ ಎಂದು ಹೇಳುವವರೂ ಇದ್ದಾರೆ.

ಹಾಗಂತ ಅಕ್ಷಯ, ಅವಿದ್ಯಾವಂತೆಯೇನಲ್ಲ. ತೀರಾ ಬಡಕುಟುಂಬದವಳೂ ಅಲ್ಲ. ನರ್ಸಿಂಗ್ ಓದಿರುವ ಈಕೆ, ಈಗ ಧನುಷ್ ಅವರನ್ನು ವಿವಾಹವಾಗಿದ್ದಾರೆ.

Ramesh Babu

Journalist

Recent Posts

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

3 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

8 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

9 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

11 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

1 day ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

1 day ago