ಮೂತ್ರಪಿಂಡ ಮತ್ತು ಮೂತ್ರಾಂಗ ಸಂಬಂಧಿತ ರೋಗಗಳ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರಿನ ನೆಫ್ರೋ ಯೂರೋಲಜಿ ಸಂಸ್ಥೆಯು ಪ್ರತಿಷ್ಠಿತ ರಾಷ್ಟ್ರೀಯ ಹಾಸ್ಪಿಟಲ್ ಅಕ್ರೆಡಿಟೇಶನ್ ಮಂಡಳಿ (NABH) ಮಾನ್ಯತೆ ಪತ್ರವನ್ನು ಪಡೆದುಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದು ಅವರು ಸಂಸ್ಥೆಗೆ ದೊರೆತಿರುವ ಪ್ರಮಾಣಪತ್ರವನ್ನು ನೆಫ್ರೋ ಯೂರೋಲಜಿ ಸಂಸ್ಥೆಯ ನಿರ್ದೇಶಕ ಆರ್.ಎಂ. ಶಿವಲಿಂಗಯ್ಯ, ಸ್ಥಾಪಕ ನಿರ್ದೇಶಕ ಡಾ. ಜಿ.ಕೆ. ವೆಂಕಟೇಶ್ ಅವರಿಗೆ ಹಸ್ತಾಂತರಿಸಿ, ಮಾತನಾಡಿದರು.
ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿರುವ ನೆಫ್ರೋ-ಯುರಾಲಜಿ ಸಂಸ್ಥೆ 160 ಹಾಸಿಗೆ ಸಾಮರ್ಥ್ಯದೊಂದಿಗೆ 2007ರಲ್ಲಿ ಬೆಂಗಳೂರಿನಲ್ಲಿ ಆರಂಭವಾಗಿದ್ದು, ಮೈಸೂರಿನ ಕೆ.ಆರ್.ಆಸ್ಪತ್ರೆಯ ಆವರಣದಲ್ಲಿ ಸಂಸ್ಥೆಯ ಘಟಕವನ್ನು ಸ್ಥಾಪಿಸಿ ಸೇವೆಯನ್ನು ನೀಡುತ್ತಿದೆ ಎಂದರು.
ಈ ಸಂಸ್ಥೆ ದೇಶದ ಅಗ್ರ 10 ವಿಶೇಷ ಆಸ್ಪತ್ರೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಇದೀಗ ಸಂಸ್ಥೆಯು ಸುರಕ್ಷತೆ ಮತ್ತು ಅತ್ಯುತ್ತಮ ವೈದ್ಯಕೀಯ ಗುಣಮಟ್ಟಕ್ಕೆ ಎನ್ಎಬಿಎಚ್ ನೀಡುವ ಪ್ರಮಾಣ ಪತ್ರ ಪಡೆದುಕೊಂಡಿರುವುದು ಸಂಸ್ಥೆಯ ಗುಣಮಟ್ಟದ ಸೇವೆಗೆ ದೊರೆತಿರುವ ರಾಷ್ಟ್ರೀಯ ಮಾನ್ಯತೆಯಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿಗಳು ಮಾತಿನ ಸಾರಾಂಶ;
ಸಂಸ್ಥೆಯ ಸೇವೆಯು ಶ್ಲಾಘನೀಯವಾದುದ್ದು. ಗುಣಮಟ್ಟದ ಆರೋಗ್ಯ ಸೇವೆಯನ್ನು ಪ್ರತಿಯೊಬ್ಬರಿಗೂ ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ನೆಫ್ರೋ ಯುರಾಲಜಿಯಂತಹ ಸಂಸ್ಥೆಗಳು ರಾಷ್ಟ್ರೀಯ ಮನ್ನಣೆಗೆ ಪಾತ್ರವಾಗಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.
ಇಂತಹ ರಾಷ್ಟ್ರೀಯ ಮನ್ನಣೆಯ ಸಂಸ್ಥೆಗಳಲ್ಲಿ ಬಡ ಜನರು ಸಹ ಮೂತ್ರಾಂಗ ಚಿಕಿತ್ಸೆಯ ಅತ್ಯುನ್ನತ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿದೆ. ಸರ್ಕಾರದ ವಿವಿಧ ಯೋಜನೆಗಳಡಿ ಈ ಸಂಸ್ಥೆಯಲ್ಲಿ ಕಡು ಬಡವ/ನಿರ್ಗತಿಕ/ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದರು.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…