ಮೂತ್ರಪಿಂಡ ಮತ್ತು ಮೂತ್ರಾಂಗ ಸಂಬಂಧಿತ ರೋಗಗಳ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರಿನ ನೆಫ್ರೋ ಯೂರೋಲಜಿ ಸಂಸ್ಥೆಯು ಪ್ರತಿಷ್ಠಿತ ರಾಷ್ಟ್ರೀಯ ಹಾಸ್ಪಿಟಲ್ ಅಕ್ರೆಡಿಟೇಶನ್ ಮಂಡಳಿ (NABH) ಮಾನ್ಯತೆ ಪತ್ರವನ್ನು ಪಡೆದುಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದು ಅವರು ಸಂಸ್ಥೆಗೆ ದೊರೆತಿರುವ ಪ್ರಮಾಣಪತ್ರವನ್ನು ನೆಫ್ರೋ ಯೂರೋಲಜಿ ಸಂಸ್ಥೆಯ ನಿರ್ದೇಶಕ ಆರ್.ಎಂ. ಶಿವಲಿಂಗಯ್ಯ, ಸ್ಥಾಪಕ ನಿರ್ದೇಶಕ ಡಾ. ಜಿ.ಕೆ. ವೆಂಕಟೇಶ್ ಅವರಿಗೆ ಹಸ್ತಾಂತರಿಸಿ, ಮಾತನಾಡಿದರು.
ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿರುವ ನೆಫ್ರೋ-ಯುರಾಲಜಿ ಸಂಸ್ಥೆ 160 ಹಾಸಿಗೆ ಸಾಮರ್ಥ್ಯದೊಂದಿಗೆ 2007ರಲ್ಲಿ ಬೆಂಗಳೂರಿನಲ್ಲಿ ಆರಂಭವಾಗಿದ್ದು, ಮೈಸೂರಿನ ಕೆ.ಆರ್.ಆಸ್ಪತ್ರೆಯ ಆವರಣದಲ್ಲಿ ಸಂಸ್ಥೆಯ ಘಟಕವನ್ನು ಸ್ಥಾಪಿಸಿ ಸೇವೆಯನ್ನು ನೀಡುತ್ತಿದೆ ಎಂದರು.
ಈ ಸಂಸ್ಥೆ ದೇಶದ ಅಗ್ರ 10 ವಿಶೇಷ ಆಸ್ಪತ್ರೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಇದೀಗ ಸಂಸ್ಥೆಯು ಸುರಕ್ಷತೆ ಮತ್ತು ಅತ್ಯುತ್ತಮ ವೈದ್ಯಕೀಯ ಗುಣಮಟ್ಟಕ್ಕೆ ಎನ್ಎಬಿಎಚ್ ನೀಡುವ ಪ್ರಮಾಣ ಪತ್ರ ಪಡೆದುಕೊಂಡಿರುವುದು ಸಂಸ್ಥೆಯ ಗುಣಮಟ್ಟದ ಸೇವೆಗೆ ದೊರೆತಿರುವ ರಾಷ್ಟ್ರೀಯ ಮಾನ್ಯತೆಯಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿಗಳು ಮಾತಿನ ಸಾರಾಂಶ;
ಸಂಸ್ಥೆಯ ಸೇವೆಯು ಶ್ಲಾಘನೀಯವಾದುದ್ದು. ಗುಣಮಟ್ಟದ ಆರೋಗ್ಯ ಸೇವೆಯನ್ನು ಪ್ರತಿಯೊಬ್ಬರಿಗೂ ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ನೆಫ್ರೋ ಯುರಾಲಜಿಯಂತಹ ಸಂಸ್ಥೆಗಳು ರಾಷ್ಟ್ರೀಯ ಮನ್ನಣೆಗೆ ಪಾತ್ರವಾಗಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.
ಇಂತಹ ರಾಷ್ಟ್ರೀಯ ಮನ್ನಣೆಯ ಸಂಸ್ಥೆಗಳಲ್ಲಿ ಬಡ ಜನರು ಸಹ ಮೂತ್ರಾಂಗ ಚಿಕಿತ್ಸೆಯ ಅತ್ಯುನ್ನತ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿದೆ. ಸರ್ಕಾರದ ವಿವಿಧ ಯೋಜನೆಗಳಡಿ ಈ ಸಂಸ್ಥೆಯಲ್ಲಿ ಕಡು ಬಡವ/ನಿರ್ಗತಿಕ/ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದರು.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…