ಮೂತ್ರಪಿಂಡ ಮತ್ತು ಮೂತ್ರಾಂಗ ಸಂಬಂಧಿತ ರೋಗಗಳ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರಿನ ನೆಫ್ರೋ ಯೂರೋಲಜಿ ಸಂಸ್ಥೆಯು ಪ್ರತಿಷ್ಠಿತ ರಾಷ್ಟ್ರೀಯ ಹಾಸ್ಪಿಟಲ್ ಅಕ್ರೆಡಿಟೇಶನ್ ಮಂಡಳಿ (NABH) ಮಾನ್ಯತೆ ಪತ್ರವನ್ನು ಪಡೆದುಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದು ಅವರು ಸಂಸ್ಥೆಗೆ ದೊರೆತಿರುವ ಪ್ರಮಾಣಪತ್ರವನ್ನು ನೆಫ್ರೋ ಯೂರೋಲಜಿ ಸಂಸ್ಥೆಯ ನಿರ್ದೇಶಕ ಆರ್.ಎಂ. ಶಿವಲಿಂಗಯ್ಯ, ಸ್ಥಾಪಕ ನಿರ್ದೇಶಕ ಡಾ. ಜಿ.ಕೆ. ವೆಂಕಟೇಶ್ ಅವರಿಗೆ ಹಸ್ತಾಂತರಿಸಿ, ಮಾತನಾಡಿದರು.
ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿರುವ ನೆಫ್ರೋ-ಯುರಾಲಜಿ ಸಂಸ್ಥೆ 160 ಹಾಸಿಗೆ ಸಾಮರ್ಥ್ಯದೊಂದಿಗೆ 2007ರಲ್ಲಿ ಬೆಂಗಳೂರಿನಲ್ಲಿ ಆರಂಭವಾಗಿದ್ದು, ಮೈಸೂರಿನ ಕೆ.ಆರ್.ಆಸ್ಪತ್ರೆಯ ಆವರಣದಲ್ಲಿ ಸಂಸ್ಥೆಯ ಘಟಕವನ್ನು ಸ್ಥಾಪಿಸಿ ಸೇವೆಯನ್ನು ನೀಡುತ್ತಿದೆ ಎಂದರು.
ಈ ಸಂಸ್ಥೆ ದೇಶದ ಅಗ್ರ 10 ವಿಶೇಷ ಆಸ್ಪತ್ರೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಇದೀಗ ಸಂಸ್ಥೆಯು ಸುರಕ್ಷತೆ ಮತ್ತು ಅತ್ಯುತ್ತಮ ವೈದ್ಯಕೀಯ ಗುಣಮಟ್ಟಕ್ಕೆ ಎನ್ಎಬಿಎಚ್ ನೀಡುವ ಪ್ರಮಾಣ ಪತ್ರ ಪಡೆದುಕೊಂಡಿರುವುದು ಸಂಸ್ಥೆಯ ಗುಣಮಟ್ಟದ ಸೇವೆಗೆ ದೊರೆತಿರುವ ರಾಷ್ಟ್ರೀಯ ಮಾನ್ಯತೆಯಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿಗಳು ಮಾತಿನ ಸಾರಾಂಶ;
ಸಂಸ್ಥೆಯ ಸೇವೆಯು ಶ್ಲಾಘನೀಯವಾದುದ್ದು. ಗುಣಮಟ್ಟದ ಆರೋಗ್ಯ ಸೇವೆಯನ್ನು ಪ್ರತಿಯೊಬ್ಬರಿಗೂ ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ನೆಫ್ರೋ ಯುರಾಲಜಿಯಂತಹ ಸಂಸ್ಥೆಗಳು ರಾಷ್ಟ್ರೀಯ ಮನ್ನಣೆಗೆ ಪಾತ್ರವಾಗಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.
ಇಂತಹ ರಾಷ್ಟ್ರೀಯ ಮನ್ನಣೆಯ ಸಂಸ್ಥೆಗಳಲ್ಲಿ ಬಡ ಜನರು ಸಹ ಮೂತ್ರಾಂಗ ಚಿಕಿತ್ಸೆಯ ಅತ್ಯುನ್ನತ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿದೆ. ಸರ್ಕಾರದ ವಿವಿಧ ಯೋಜನೆಗಳಡಿ ಈ ಸಂಸ್ಥೆಯಲ್ಲಿ ಕಡು ಬಡವ/ನಿರ್ಗತಿಕ/ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…