ಮೂತ್ರಪಿಂಡ ಮತ್ತು ಮೂತ್ರಾಂಗ ಸಂಬಂಧಿತ ರೋಗಗಳ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರಿನ ನೆಫ್ರೋ ಯೂರೋಲಜಿ ಸಂಸ್ಥೆಯು ಪ್ರತಿಷ್ಠಿತ ರಾಷ್ಟ್ರೀಯ ಹಾಸ್ಪಿಟಲ್ ಅಕ್ರೆಡಿಟೇಶನ್ ಮಂಡಳಿ (NABH) ಮಾನ್ಯತೆ ಪತ್ರವನ್ನು ಪಡೆದುಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದು ಅವರು ಸಂಸ್ಥೆಗೆ ದೊರೆತಿರುವ ಪ್ರಮಾಣಪತ್ರವನ್ನು ನೆಫ್ರೋ ಯೂರೋಲಜಿ ಸಂಸ್ಥೆಯ ನಿರ್ದೇಶಕ ಆರ್.ಎಂ. ಶಿವಲಿಂಗಯ್ಯ, ಸ್ಥಾಪಕ ನಿರ್ದೇಶಕ ಡಾ. ಜಿ.ಕೆ. ವೆಂಕಟೇಶ್ ಅವರಿಗೆ ಹಸ್ತಾಂತರಿಸಿ, ಮಾತನಾಡಿದರು.
ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿರುವ ನೆಫ್ರೋ-ಯುರಾಲಜಿ ಸಂಸ್ಥೆ 160 ಹಾಸಿಗೆ ಸಾಮರ್ಥ್ಯದೊಂದಿಗೆ 2007ರಲ್ಲಿ ಬೆಂಗಳೂರಿನಲ್ಲಿ ಆರಂಭವಾಗಿದ್ದು, ಮೈಸೂರಿನ ಕೆ.ಆರ್.ಆಸ್ಪತ್ರೆಯ ಆವರಣದಲ್ಲಿ ಸಂಸ್ಥೆಯ ಘಟಕವನ್ನು ಸ್ಥಾಪಿಸಿ ಸೇವೆಯನ್ನು ನೀಡುತ್ತಿದೆ ಎಂದರು.
ಈ ಸಂಸ್ಥೆ ದೇಶದ ಅಗ್ರ 10 ವಿಶೇಷ ಆಸ್ಪತ್ರೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಇದೀಗ ಸಂಸ್ಥೆಯು ಸುರಕ್ಷತೆ ಮತ್ತು ಅತ್ಯುತ್ತಮ ವೈದ್ಯಕೀಯ ಗುಣಮಟ್ಟಕ್ಕೆ ಎನ್ಎಬಿಎಚ್ ನೀಡುವ ಪ್ರಮಾಣ ಪತ್ರ ಪಡೆದುಕೊಂಡಿರುವುದು ಸಂಸ್ಥೆಯ ಗುಣಮಟ್ಟದ ಸೇವೆಗೆ ದೊರೆತಿರುವ ರಾಷ್ಟ್ರೀಯ ಮಾನ್ಯತೆಯಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿಗಳು ಮಾತಿನ ಸಾರಾಂಶ;
ಸಂಸ್ಥೆಯ ಸೇವೆಯು ಶ್ಲಾಘನೀಯವಾದುದ್ದು. ಗುಣಮಟ್ಟದ ಆರೋಗ್ಯ ಸೇವೆಯನ್ನು ಪ್ರತಿಯೊಬ್ಬರಿಗೂ ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ನೆಫ್ರೋ ಯುರಾಲಜಿಯಂತಹ ಸಂಸ್ಥೆಗಳು ರಾಷ್ಟ್ರೀಯ ಮನ್ನಣೆಗೆ ಪಾತ್ರವಾಗಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.
ಇಂತಹ ರಾಷ್ಟ್ರೀಯ ಮನ್ನಣೆಯ ಸಂಸ್ಥೆಗಳಲ್ಲಿ ಬಡ ಜನರು ಸಹ ಮೂತ್ರಾಂಗ ಚಿಕಿತ್ಸೆಯ ಅತ್ಯುನ್ನತ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿದೆ. ಸರ್ಕಾರದ ವಿವಿಧ ಯೋಜನೆಗಳಡಿ ಈ ಸಂಸ್ಥೆಯಲ್ಲಿ ಕಡು ಬಡವ/ನಿರ್ಗತಿಕ/ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…