ನೆಲಮಂಗಲ ಉಪವಿಭಾಗದಲ್ಲಿ ಪ್ರಾಪರ್ಟಿ ಪರೇಡ್

ನೆಲಮಂಗಲ ಉಪವಿಭಾಗ ವ್ಯಾಪ್ತಿಯಲ್ಲಿ ಕಳ್ಳತನ, ದರೋಡೆ, ಸುಲಿಗೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾದವರನ್ನ ಬಂಧಿಸಿ, ಬಂಧಿತರಿಂದ ವಶಪಡಿಸಿಕೊಂಡಿರುವ ವಸ್ತುಗಳನ್ನು ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಶಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಪರಿಶೀಲಿಸಿದರು.

ಮಾದನಾಯಕನಹಳ್ಳಿ ಪೊಲೀಸ್ ಠಾಣೆ ಸರಹದ್ದಿನಲ್ಲಿ ದರೋಡೆ, ಮತ್ತು ಕಳ್ಳತನ ಪ್ರಕರಣಗಳನ್ನು ಬೇಧಿಸಿ ಆರೋಪಿಗಳನ್ನು ಪತ್ತೆ ಮಾಡಿ ಬಂಧಿತ ಆರೋಪಿಗಳಿಂದ 3ಲಕ್ಷ ರೂ. ಮೌಲ್ಯದ 12 ಮೊಬೈಲ್ ಫೋನ್‌ಗಳು ಮತ್ತು ನಗದು, ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರಗಳು, ಮೋಟಾರ್‌ ಸೈಕಲ್‌ ವಶಕ್ಕೆ ಪಡೆಯಲಾಗಿದೆ.

ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೆದ್ದಾರಿಗಳಲ್ಲಿ ರಾತ್ರಿ ವೇಳೆಯಲ್ಲಿ ಸಾರ್ವಜನಿಕರಿಗೆ ಮಾರಕಾಸ್ತ್ರಗಳನ್ನು ತೋರಿಸಿ ಅವರಿಗೆ ಹೆದರಿಸಿ ಮೊಬೈಲ್ ಗಳನ್ನು ಹಾಗೂ ಹಣ ದೋಚುತ್ತಿದ್ದ ಹಾಗೂ ಗಾಂಜಾವನ್ನು   ಮಾರಾಟ ಮಾಡುತ್ತಿದ್ದ 4 ಜನ ಆರೋಪಿಗಳನ್ನು ಬಂಧಿಸಿ, ಅವರಿಂದ 4 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಯಿತು.

ಈ ವೇಳೆ ಭರ್ಜರಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನ ಶ್ಲಾಘನೆ ಮಾಡಲಾಯಿತು.

ಎಎಸ್ಪಿ ಪುರುಷೋತ್ತಮ್, ಎಎಸ್ಪಿ ನಾಗರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರೊ. ಬಿ ಕೃಷ್ಣಪ್ಪ ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕ- ದಸಂಸ ಜಿಲ್ಲಾ ಸಂಚಾಲಕ ರಾಮಮೂರ್ತಿ(ರಾಮು)

ಸಮಾಜದಲ್ಲಿ ದಲಿತ ಸಮುದಾಯಗಳು ಎದುರಿಸುತ್ತಿದ್ದ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿದ ಪ್ರೊ. ಬಿ ಕೃಷ್ಣಪ್ಪ ಅವರು ಎಲ್ಲರಿಗೂ ಮಾದರಿ. ಅವರ…

12 hours ago

ಜೆಡಿಎಸ್ ಬಣ ಗುದ್ದಾಟದಲ್ಲಿ ಕಾರ್ಯಕರ್ತರಿಗೆ ಸಿಕ್ಕ ‘ಸ್ಮೈಲ್ ಕ್ಯಾಪ್ಟನ್ ಆನಂದ್’

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 40 ವರ್ಷಗಳಿಂದ ರಾಜಕಾರಣ ಮಾಡುತ್ತಾ, ಮನೆ ಮಾತಾಗಿರುವ ಹುಸ್ಕೂರು ಟಿ. ಆನಂದ್ ಜೆಡಿಎಸ್ ಪಕ್ಷದಲ್ಲಿ ರಾಜ್ಯ ಪ್ರಧಾನ…

21 hours ago

ವೇಶ್ಯಾವಾಟಿಕೆ ಜಗತ್ತಿನ ಹಳೆಯದಾದ ಒಂದು ಕ್ರಿಯೆ…?

ವೇಶ್ಯಾವಾಟಿಕೆ...... ಒಂದು ವೃತ್ತಿಯೇ, ಜೀವನ ನಿರ್ವಹಣೆಯ ಒಂದು ಮಾರ್ಗವೇ, ಒಂದು ಉದ್ಯೋಗವೇ, ಸಹಜ ಪ್ರಾಕೃತಿಕ ವಿಧಾನವೇ, ಹೆಣ್ಣಿನ ಶೋಷಣೆಯೇ, ಗಂಡಿನ…

21 hours ago

ಮಳೆಗಾಲ ಆರಂಭ: ರಸ್ತೆಗುಂಡಿಗಳ ದರ್ಬಾರ್: ಟೋಲ್ ತಪ್ಪಿಸಲು ಹಳ್ಳಿ ರಸ್ತೆಗಳ ಬಳಕೆ: ಜನರ ಜೀವದ ಜೊತೆ ಚೆಲ್ಲಾಟ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

ದೊಡ್ಡಬಳ್ಳಾಪುರ: ಮಳೆಗಾಲ ಆರಂಭವಾಗುತ್ತಿದ್ದಂತೆ ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ಭಾಗಗಳ ರಸ್ತೆಗುಂಡಿಗಳ ಸಮಸ್ಯೆ ಮತ್ತೆ ತಲೆದೋರಿದ್ದು, ವಾಹನ ಸವಾರರು ಜೀವ…

22 hours ago

ಬೈಕ್ – ಕಾರಿನ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ರಾತ್ರಿ ದೊಡ್ಡಬಳ್ಳಾಪುರ…

1 day ago

ಕೃಷಿ ಚಟುವಟಿಕೆಯಲ್ಲಿ ರೈತರು ಡಿಎಪಿ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಲು ಕೃಷಿ ಇಲಾಖೆ…

1 day ago