ನೆಲಮಂಗಲ ಉಪವಿಭಾಗದಲ್ಲಿ ಪ್ರಾಪರ್ಟಿ ಪರೇಡ್

ನೆಲಮಂಗಲ ಉಪವಿಭಾಗ ವ್ಯಾಪ್ತಿಯಲ್ಲಿ ಕಳ್ಳತನ, ದರೋಡೆ, ಸುಲಿಗೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾದವರನ್ನ ಬಂಧಿಸಿ, ಬಂಧಿತರಿಂದ ವಶಪಡಿಸಿಕೊಂಡಿರುವ ವಸ್ತುಗಳನ್ನು ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಶಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಪರಿಶೀಲಿಸಿದರು.

ಮಾದನಾಯಕನಹಳ್ಳಿ ಪೊಲೀಸ್ ಠಾಣೆ ಸರಹದ್ದಿನಲ್ಲಿ ದರೋಡೆ, ಮತ್ತು ಕಳ್ಳತನ ಪ್ರಕರಣಗಳನ್ನು ಬೇಧಿಸಿ ಆರೋಪಿಗಳನ್ನು ಪತ್ತೆ ಮಾಡಿ ಬಂಧಿತ ಆರೋಪಿಗಳಿಂದ 3ಲಕ್ಷ ರೂ. ಮೌಲ್ಯದ 12 ಮೊಬೈಲ್ ಫೋನ್‌ಗಳು ಮತ್ತು ನಗದು, ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರಗಳು, ಮೋಟಾರ್‌ ಸೈಕಲ್‌ ವಶಕ್ಕೆ ಪಡೆಯಲಾಗಿದೆ.

ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೆದ್ದಾರಿಗಳಲ್ಲಿ ರಾತ್ರಿ ವೇಳೆಯಲ್ಲಿ ಸಾರ್ವಜನಿಕರಿಗೆ ಮಾರಕಾಸ್ತ್ರಗಳನ್ನು ತೋರಿಸಿ ಅವರಿಗೆ ಹೆದರಿಸಿ ಮೊಬೈಲ್ ಗಳನ್ನು ಹಾಗೂ ಹಣ ದೋಚುತ್ತಿದ್ದ ಹಾಗೂ ಗಾಂಜಾವನ್ನು   ಮಾರಾಟ ಮಾಡುತ್ತಿದ್ದ 4 ಜನ ಆರೋಪಿಗಳನ್ನು ಬಂಧಿಸಿ, ಅವರಿಂದ 4 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಯಿತು.

ಈ ವೇಳೆ ಭರ್ಜರಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನ ಶ್ಲಾಘನೆ ಮಾಡಲಾಯಿತು.

ಎಎಸ್ಪಿ ಪುರುಷೋತ್ತಮ್, ಎಎಸ್ಪಿ ನಾಗರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 hour ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago