Categories: Accident

ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದು 6 ಮಂದಿ ಸಾವು

ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಕಾರಿನ ಮೇಲೆ ಕಂಟೇನರ್‌ ಲಾರಿ ಬಿದ್ದಿದ್ದರಿಂದ ಕಾರ್‌ನಲ್ಲಿದ್ದ 6 ಮಂದಿ ಸಂಪೂರ್ಣವಾಗಿ ಅಪ್ಪಚ್ಚಿಯಾಗಿ ಸಾವು ಕಂಡಿದ್ದಾರೆ. ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದಿದ್ದರಿಂದಲೇ ಈ ಸಾವು ಸಂಭವಿಸಿದೆ ಎನ್ನಲಾಗಿದೆ.

ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ಘಟನೆ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. ಇದರಿದಾಗಿ ತುಮಕೂರು ಬೆಂಗಳೂರು ರಸ್ತೆಯಲ್ಲಿ ಬಾರಿ  ಟ್ರಾಫಿಕ್ ಜಾಮ್ ಆಗಿದೆ. ಸ್ಥಳಕ್ಕೆ ನೆಲಮಂಗಲ ಟ್ರಾಫಿಕ್ ಪೊಲೀಸರು ಆಗಮಿಸಿದ್ದು, ಕಂಟೇನರ್ ಲಾರಿ ಬಿದ್ದ ಪರಿಣಾಮವಾಗಿ ಕಾರಿನಲ್ಲಿರುವರ ರಕ್ಷಣೆ ಕಾರ್ಯ ನಡೆಯುತ್ತಿದೆ.

ಕಂಟೇನರ್‌ ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು, ಅದರಲ್ಲಿದ್ದ ದೇಹಗಳು ಕೂಡ ಛಿದ್ರವಾಗಿದೆ. KA 01 ND 1536 ಕಾರ್ ನಲ್ಲಿದ್ದ ಎಲ್ಲರೂ ಸಾವು ಕಂಡಿದ್ದಾರೆ.

ಒಟ್ಟು ಆರು ಮಂದಿ ಸಾವು ಕಂಡಿದ್ದಾರೆ ಎಂದು ತಿಳಿಸಲಾಗಿದೆ. 2 ಕಾರು, 2 ಲಾರಿ, ಶಾಲಾ ವಾಹನದ ನಡುವೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಡಿಕ್ಕಿ ರಭಸಕ್ಕೆ ಪಲ್ಟಿಯಾಗಿ ಕಾರಿನ ಮೇಲೆ ಕಂಟೇನರ್‌ ಬಿದ್ದಿದ್ದರಿಂದ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರು, ಮಗು ಸೆರಿ ಒಟ್ಟು 6 ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ.

ಮೃತರು

ಚಂದ್ರ ಯಾಗಪ್ಪ ಗೋಳ್ (48), ಗೌರಾಬಾಯಿ (42), ದೀಕ್ಷಾ (12), ಜಾನ್ (16), ವಿಜಯಲಕ್ಷ್ಮಿ (36), ಆರ್ಯ (6)

Ramesh Babu

Journalist

Recent Posts

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

3 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

4 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

4 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

12 hours ago

ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ; ಗೋಕರ್ಣಕ್ಕೆ ತೆರಳುತ್ತಿದ್ದ 6 ಮಂದಿ ಸಾವು: ಹಲವರಿಗೆ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…

14 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…

1 day ago