Categories: Accident

ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಮನರ್ತನ: ಒಂದೇ ಕುಟುಂಬದ 6 ಮಂದಿ ದುರ್ಮರಣ: ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ದುರ್ಮರಣ: ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಕಾರಿನ ಮೇಲೆ ಕಂಟೇನರ್‌ ಲಾರಿ ಬಿದ್ದಿದ್ದರಿಂದ ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ಘಟನೆ ನಡೆದಿದೆ.

ಕಂಟೇನರ್‌ ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರು, ಮಗು ಸೇರಿ ಒಟ್ಟು 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಂದ್ರ ಯಾಗಪ್ಪ ಗೋಳ್ (48), ಗೌರಾಬಾಯಿ (42), ದೀಕ್ಷಾ (12), ಜಾನ್ (16), ವಿಜಯಲಕ್ಷ್ಮಿ (36), ಆರ್ಯ (6)ಮೃತಪಟ್ಟವರು.

ಈ ಭೀಕರ ಅಪಘಾತ ಅಪಘಾತ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಗ್ರಾಮ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದ್ದು, ಸ್ಥಳದಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಸುಮಾರು 1 ಕಿಲೋ ಮೀಟರ್​​ವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ.

ಮೃತಪಟ್ಟವರು ವಿಜಯಪುರದ ಒಂದೇ ಫ್ಯಾಮಿಲಿ ಯವರು ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ವಿಜಯಪುರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ ಪಿ ಸಿ.ಕೆ.ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

10 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago