ನೆಲಮಂಗಲ: ರೈತರ ಸಬ್ಸಿಡಿ ಯೂರಿಯಾ ಅಕ್ರಮ ದಾಸ್ತಾನು, ಕಾಳ ಸಂತೆಯಲ್ಲಿ ಮಾರಾಟ…!: 200 ರೂ. ಯೂರಿಯಾ 1,500 ರೂ.ಗೆ ಮಾರಾಟ: ಅಕ್ರಮವಾಗಿ ಸಂಗ್ರಹಿಸಿದ್ದ  2 ಸಾವಿರ ಕೆಜಿ ಯೂರಿಯಾ DRI ವಶ

ರಾಜ್ಯಕ್ಕೆ ವಿನಾಯಿತಿ ಮೇಲೆ ಕೇಂದ್ರ ಸರ್ಕಾರ ಕೊಡುತ್ತಿರುವ ಯೂರಿಯಾದ ಅಭಾವದಿಂದಾಗಿ ಈ ಬಾರಿ ರೈತರು ಪರದಾಟ ನಡೆಸಿದ ಸಾಕಷ್ಟು ಘಟನೆಗಳು ನಡೆದಿತ್ತು.

ಕಿಲೋ ಮೀಟರ್​​ಗಟ್ಟಲೆ ಉದ್ದದ ಸರತಿ ಸಾಲಲ್ಲಿ ನಿಂತರೂ ಯೂರಿಯಾ ಸಿಗದೆ ಅದೆಷ್ಟೋ ರೈತರು ವಾಪಸ್ ಆಗಿದ್ದರು. ಈ ನಡುವೆ ರೈತರಿಗೆ ಹಂಚಿಕೆಯಾಗಬೇಕಿದ್ದ ಯೂರಿಯಾ ಕಾಳಸಂತೆಯಲ್ಲಿ ಮಾರಾಟವಾಗಿರುವ ಆತಂಕಕಾರಿ ವಿಷಯ ಬಹಿರಂಗವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗೆಜ್ಜಗದಹಳ್ಳಿ ಬಳಿ ಅಕ್ರಮವಾಗಿ ಸಂಗ್ರಹಿಸಿದ್ದ ಯೂರಿಯಾವನ್ನು DRI ವಶಕ್ಕೆ ಪಡೆದಿದೆ.

ದಾಳಿಯ ವೇಳೆ ಗೆಜ್ಜಗದಹಳ್ಳಿಯಲ್ಲಿ 2 ಸಾವಿರ ಕೆಜಿ ಯೂರಿಯಾವನ್ನು DRI ವಶಕ್ಕೆ ಪಡೆದಿದೆ. 6 ತಿಂಗಳ ಹಿಂದೆ ತಜೀರ್ ಖಾನ್ ಯೂಸುಫ್ ಎಂಬವರು ತಿಂಗಳಿಗೆ 40 ಸಾವಿರಕ್ಕೆ ಶೆಡ್​​ ಬಾಡಿಗೆಗೆ ಪಡೆದಿದ್ದರು. ಇಲ್ಲಿಂದ ಯೂರಿಯಾ ಪ್ಯಾಕ್ ಮಾಡಿ ತಮಿಳುನಾಡಿಗೆ ಕಳುಹಿಸಲಾಗ್ತಿತ್ತು. ತಮಿಳುನಾಡಿನಲ್ಲಿ ದಾಳಿ ವೇಳೆ DRI ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ಸಿಕ್ಕಿತ್ತು. ರಾಜ್ಯಕ್ಕೆ ಕೇಂದ್ರ ಸರ್ಕಾರ ಕೊಡ್ತಿದ್ದ 45 ಕೆಜಿ ತೂಕದ ಯೂರಿಯಾವನ್ನು ಶೆಡ್​ಗಳಿಗೆ ತಂದು ದಾಸ್ತಾನು ಮಾಡಲಾಗ್ತಿತ್ತು. ಬಳಿಕ ಅದನ್ನು ಬೇರೆ ಚೀಲಗಳಿಗೆ ತುಂಬಿ 50 ಕೆಜಿ ಚೀಲವನ್ನಾಗಿ ಮಾಡಿ ಮಾರಾಟ ಮಾಡಲಾಗುತ್ತಿತ್ತು. ಕೇವಲ 266 ರೂ.ಗೆ ರೈತರಿಗೆ ನೀಡಬೇಕಿದ್ದ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ 2000 ರೂ.ಗೆ ದಂಧೆಕೋರರು ಮಾರಾಟ ಮಾಡುತ್ತಿದ್ದರು.

ಕೇಂದ್ರವು 45 ಕೆಜಿ ತೂಕದ 2321 ರೂ. ಬೆಲೆಯ ಯೂರಿಯಾಗೆ 2054 ರೂ. ಸಬ್ಸಿಡಿ ನೀಡಿ 266 ರೂಪಾಯಿಗೆ ರಾಜ್ಯಕ್ಕೆ ನೀಡುತ್ತದೆ. ಅದನ್ನೇ ಇವರು ಕಾಳಸಂತೆಯಲ್ಲಿ 2500 ರೂ. ವರೆಗೆ ಮಾರಾಟ ಮಾಡುತ್ತಿದ್ದಾರೆ ಎನ್ನುವುದೀಗ ಬಯಲಾಗಿದೆ.

ಕೇಂದ್ರ ಸರ್ಕಾರದಿಂದ ಯೂರಿಯಾ ರಾಜ್ಯದ ಕೃಷಿ ಇಲಾಖೆಗೆ ವರ್ಗಾವಣೆ ಆಗುತ್ತದೆ. ಆ ಬಳಿಕ ಇಲಾಖೆಯೇ ರೈತರಿಗೆ ಇವನ್ನು ವಿತರಣೆ ಮಾಡಬೇಕು. ಹೀಗಿರುವಾಗ ಅವು ದಂಧೆಕೋರರ ಕೈಸೇರುತ್ತಿರೋದಾದರೂ ಹೇಗೆ ಎಂಬ ಪ್ರಶ್ನೆ ಎಲ್ಲರಲ್ಲಿ ಈಗ ಉದ್ಭವಿಸಿದೆ.

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

44 minutes ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

12 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

13 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

13 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

14 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

21 hours ago