ನೆಲಮಂಗಲ: ರೈತರ ಸಬ್ಸಿಡಿ ಯೂರಿಯಾ ಅಕ್ರಮ ದಾಸ್ತಾನು, ಕಾಳ ಸಂತೆಯಲ್ಲಿ ಮಾರಾಟ…!: 200 ರೂ. ಯೂರಿಯಾ 1,500 ರೂ.ಗೆ ಮಾರಾಟ: ಅಕ್ರಮವಾಗಿ ಸಂಗ್ರಹಿಸಿದ್ದ  2 ಸಾವಿರ ಕೆಜಿ ಯೂರಿಯಾ DRI ವಶ

ರಾಜ್ಯಕ್ಕೆ ವಿನಾಯಿತಿ ಮೇಲೆ ಕೇಂದ್ರ ಸರ್ಕಾರ ಕೊಡುತ್ತಿರುವ ಯೂರಿಯಾದ ಅಭಾವದಿಂದಾಗಿ ಈ ಬಾರಿ ರೈತರು ಪರದಾಟ ನಡೆಸಿದ ಸಾಕಷ್ಟು ಘಟನೆಗಳು ನಡೆದಿತ್ತು.

ಕಿಲೋ ಮೀಟರ್​​ಗಟ್ಟಲೆ ಉದ್ದದ ಸರತಿ ಸಾಲಲ್ಲಿ ನಿಂತರೂ ಯೂರಿಯಾ ಸಿಗದೆ ಅದೆಷ್ಟೋ ರೈತರು ವಾಪಸ್ ಆಗಿದ್ದರು. ಈ ನಡುವೆ ರೈತರಿಗೆ ಹಂಚಿಕೆಯಾಗಬೇಕಿದ್ದ ಯೂರಿಯಾ ಕಾಳಸಂತೆಯಲ್ಲಿ ಮಾರಾಟವಾಗಿರುವ ಆತಂಕಕಾರಿ ವಿಷಯ ಬಹಿರಂಗವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗೆಜ್ಜಗದಹಳ್ಳಿ ಬಳಿ ಅಕ್ರಮವಾಗಿ ಸಂಗ್ರಹಿಸಿದ್ದ ಯೂರಿಯಾವನ್ನು DRI ವಶಕ್ಕೆ ಪಡೆದಿದೆ.

ದಾಳಿಯ ವೇಳೆ ಗೆಜ್ಜಗದಹಳ್ಳಿಯಲ್ಲಿ 2 ಸಾವಿರ ಕೆಜಿ ಯೂರಿಯಾವನ್ನು DRI ವಶಕ್ಕೆ ಪಡೆದಿದೆ. 6 ತಿಂಗಳ ಹಿಂದೆ ತಜೀರ್ ಖಾನ್ ಯೂಸುಫ್ ಎಂಬವರು ತಿಂಗಳಿಗೆ 40 ಸಾವಿರಕ್ಕೆ ಶೆಡ್​​ ಬಾಡಿಗೆಗೆ ಪಡೆದಿದ್ದರು. ಇಲ್ಲಿಂದ ಯೂರಿಯಾ ಪ್ಯಾಕ್ ಮಾಡಿ ತಮಿಳುನಾಡಿಗೆ ಕಳುಹಿಸಲಾಗ್ತಿತ್ತು. ತಮಿಳುನಾಡಿನಲ್ಲಿ ದಾಳಿ ವೇಳೆ DRI ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ಸಿಕ್ಕಿತ್ತು. ರಾಜ್ಯಕ್ಕೆ ಕೇಂದ್ರ ಸರ್ಕಾರ ಕೊಡ್ತಿದ್ದ 45 ಕೆಜಿ ತೂಕದ ಯೂರಿಯಾವನ್ನು ಶೆಡ್​ಗಳಿಗೆ ತಂದು ದಾಸ್ತಾನು ಮಾಡಲಾಗ್ತಿತ್ತು. ಬಳಿಕ ಅದನ್ನು ಬೇರೆ ಚೀಲಗಳಿಗೆ ತುಂಬಿ 50 ಕೆಜಿ ಚೀಲವನ್ನಾಗಿ ಮಾಡಿ ಮಾರಾಟ ಮಾಡಲಾಗುತ್ತಿತ್ತು. ಕೇವಲ 266 ರೂ.ಗೆ ರೈತರಿಗೆ ನೀಡಬೇಕಿದ್ದ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ 2000 ರೂ.ಗೆ ದಂಧೆಕೋರರು ಮಾರಾಟ ಮಾಡುತ್ತಿದ್ದರು.

ಕೇಂದ್ರವು 45 ಕೆಜಿ ತೂಕದ 2321 ರೂ. ಬೆಲೆಯ ಯೂರಿಯಾಗೆ 2054 ರೂ. ಸಬ್ಸಿಡಿ ನೀಡಿ 266 ರೂಪಾಯಿಗೆ ರಾಜ್ಯಕ್ಕೆ ನೀಡುತ್ತದೆ. ಅದನ್ನೇ ಇವರು ಕಾಳಸಂತೆಯಲ್ಲಿ 2500 ರೂ. ವರೆಗೆ ಮಾರಾಟ ಮಾಡುತ್ತಿದ್ದಾರೆ ಎನ್ನುವುದೀಗ ಬಯಲಾಗಿದೆ.

ಕೇಂದ್ರ ಸರ್ಕಾರದಿಂದ ಯೂರಿಯಾ ರಾಜ್ಯದ ಕೃಷಿ ಇಲಾಖೆಗೆ ವರ್ಗಾವಣೆ ಆಗುತ್ತದೆ. ಆ ಬಳಿಕ ಇಲಾಖೆಯೇ ರೈತರಿಗೆ ಇವನ್ನು ವಿತರಣೆ ಮಾಡಬೇಕು. ಹೀಗಿರುವಾಗ ಅವು ದಂಧೆಕೋರರ ಕೈಸೇರುತ್ತಿರೋದಾದರೂ ಹೇಗೆ ಎಂಬ ಪ್ರಶ್ನೆ ಎಲ್ಲರಲ್ಲಿ ಈಗ ಉದ್ಭವಿಸಿದೆ.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

54 minutes ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

2 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

15 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

15 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

15 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

16 hours ago