ರಾಜ್ಯಕ್ಕೆ ವಿನಾಯಿತಿ ಮೇಲೆ ಕೇಂದ್ರ ಸರ್ಕಾರ ಕೊಡುತ್ತಿರುವ ಯೂರಿಯಾದ ಅಭಾವದಿಂದಾಗಿ ಈ ಬಾರಿ ರೈತರು ಪರದಾಟ ನಡೆಸಿದ ಸಾಕಷ್ಟು ಘಟನೆಗಳು ನಡೆದಿತ್ತು.
ಕಿಲೋ ಮೀಟರ್ಗಟ್ಟಲೆ ಉದ್ದದ ಸರತಿ ಸಾಲಲ್ಲಿ ನಿಂತರೂ ಯೂರಿಯಾ ಸಿಗದೆ ಅದೆಷ್ಟೋ ರೈತರು ವಾಪಸ್ ಆಗಿದ್ದರು. ಈ ನಡುವೆ ರೈತರಿಗೆ ಹಂಚಿಕೆಯಾಗಬೇಕಿದ್ದ ಯೂರಿಯಾ ಕಾಳಸಂತೆಯಲ್ಲಿ ಮಾರಾಟವಾಗಿರುವ ಆತಂಕಕಾರಿ ವಿಷಯ ಬಹಿರಂಗವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗೆಜ್ಜಗದಹಳ್ಳಿ ಬಳಿ ಅಕ್ರಮವಾಗಿ ಸಂಗ್ರಹಿಸಿದ್ದ ಯೂರಿಯಾವನ್ನು DRI ವಶಕ್ಕೆ ಪಡೆದಿದೆ.
ದಾಳಿಯ ವೇಳೆ ಗೆಜ್ಜಗದಹಳ್ಳಿಯಲ್ಲಿ 2 ಸಾವಿರ ಕೆಜಿ ಯೂರಿಯಾವನ್ನು DRI ವಶಕ್ಕೆ ಪಡೆದಿದೆ. 6 ತಿಂಗಳ ಹಿಂದೆ ತಜೀರ್ ಖಾನ್ ಯೂಸುಫ್ ಎಂಬವರು ತಿಂಗಳಿಗೆ 40 ಸಾವಿರಕ್ಕೆ ಶೆಡ್ ಬಾಡಿಗೆಗೆ ಪಡೆದಿದ್ದರು. ಇಲ್ಲಿಂದ ಯೂರಿಯಾ ಪ್ಯಾಕ್ ಮಾಡಿ ತಮಿಳುನಾಡಿಗೆ ಕಳುಹಿಸಲಾಗ್ತಿತ್ತು. ತಮಿಳುನಾಡಿನಲ್ಲಿ ದಾಳಿ ವೇಳೆ DRI ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ಸಿಕ್ಕಿತ್ತು. ರಾಜ್ಯಕ್ಕೆ ಕೇಂದ್ರ ಸರ್ಕಾರ ಕೊಡ್ತಿದ್ದ 45 ಕೆಜಿ ತೂಕದ ಯೂರಿಯಾವನ್ನು ಶೆಡ್ಗಳಿಗೆ ತಂದು ದಾಸ್ತಾನು ಮಾಡಲಾಗ್ತಿತ್ತು. ಬಳಿಕ ಅದನ್ನು ಬೇರೆ ಚೀಲಗಳಿಗೆ ತುಂಬಿ 50 ಕೆಜಿ ಚೀಲವನ್ನಾಗಿ ಮಾಡಿ ಮಾರಾಟ ಮಾಡಲಾಗುತ್ತಿತ್ತು. ಕೇವಲ 266 ರೂ.ಗೆ ರೈತರಿಗೆ ನೀಡಬೇಕಿದ್ದ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ 2000 ರೂ.ಗೆ ದಂಧೆಕೋರರು ಮಾರಾಟ ಮಾಡುತ್ತಿದ್ದರು.
ಕೇಂದ್ರವು 45 ಕೆಜಿ ತೂಕದ 2321 ರೂ. ಬೆಲೆಯ ಯೂರಿಯಾಗೆ 2054 ರೂ. ಸಬ್ಸಿಡಿ ನೀಡಿ 266 ರೂಪಾಯಿಗೆ ರಾಜ್ಯಕ್ಕೆ ನೀಡುತ್ತದೆ. ಅದನ್ನೇ ಇವರು ಕಾಳಸಂತೆಯಲ್ಲಿ 2500 ರೂ. ವರೆಗೆ ಮಾರಾಟ ಮಾಡುತ್ತಿದ್ದಾರೆ ಎನ್ನುವುದೀಗ ಬಯಲಾಗಿದೆ.
ಕೇಂದ್ರ ಸರ್ಕಾರದಿಂದ ಯೂರಿಯಾ ರಾಜ್ಯದ ಕೃಷಿ ಇಲಾಖೆಗೆ ವರ್ಗಾವಣೆ ಆಗುತ್ತದೆ. ಆ ಬಳಿಕ ಇಲಾಖೆಯೇ ರೈತರಿಗೆ ಇವನ್ನು ವಿತರಣೆ ಮಾಡಬೇಕು. ಹೀಗಿರುವಾಗ ಅವು ದಂಧೆಕೋರರ ಕೈಸೇರುತ್ತಿರೋದಾದರೂ ಹೇಗೆ ಎಂಬ ಪ್ರಶ್ನೆ ಎಲ್ಲರಲ್ಲಿ ಈಗ ಉದ್ಭವಿಸಿದೆ.
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…
ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…
ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…
ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…
ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ…
ನನ್ನ ಸಾವಿನೊಂದಿಗೆ ಈ ಜಗತ್ತೂ ಇಲ್ಲವಾಗುತ್ತದೆ.......... ದಿಢೀರ್ ಸಾವುಗಳ ಸುತ್ತಾ..... ಇತ್ತೀಚಿನ ಕೆಲವು ಮಾಧ್ಯಮ ವರದಿಗಳನ್ನು ನೋಡುತ್ತಿದ್ದರೆ ಅನೇಕ ಯುವಕ…