ರಾಜ್ಯಕ್ಕೆ ವಿನಾಯಿತಿ ಮೇಲೆ ಕೇಂದ್ರ ಸರ್ಕಾರ ಕೊಡುತ್ತಿರುವ ಯೂರಿಯಾದ ಅಭಾವದಿಂದಾಗಿ ಈ ಬಾರಿ ರೈತರು ಪರದಾಟ ನಡೆಸಿದ ಸಾಕಷ್ಟು ಘಟನೆಗಳು ನಡೆದಿತ್ತು.
ಕಿಲೋ ಮೀಟರ್ಗಟ್ಟಲೆ ಉದ್ದದ ಸರತಿ ಸಾಲಲ್ಲಿ ನಿಂತರೂ ಯೂರಿಯಾ ಸಿಗದೆ ಅದೆಷ್ಟೋ ರೈತರು ವಾಪಸ್ ಆಗಿದ್ದರು. ಈ ನಡುವೆ ರೈತರಿಗೆ ಹಂಚಿಕೆಯಾಗಬೇಕಿದ್ದ ಯೂರಿಯಾ ಕಾಳಸಂತೆಯಲ್ಲಿ ಮಾರಾಟವಾಗಿರುವ ಆತಂಕಕಾರಿ ವಿಷಯ ಬಹಿರಂಗವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗೆಜ್ಜಗದಹಳ್ಳಿ ಬಳಿ ಅಕ್ರಮವಾಗಿ ಸಂಗ್ರಹಿಸಿದ್ದ ಯೂರಿಯಾವನ್ನು DRI ವಶಕ್ಕೆ ಪಡೆದಿದೆ.
ದಾಳಿಯ ವೇಳೆ ಗೆಜ್ಜಗದಹಳ್ಳಿಯಲ್ಲಿ 2 ಸಾವಿರ ಕೆಜಿ ಯೂರಿಯಾವನ್ನು DRI ವಶಕ್ಕೆ ಪಡೆದಿದೆ. 6 ತಿಂಗಳ ಹಿಂದೆ ತಜೀರ್ ಖಾನ್ ಯೂಸುಫ್ ಎಂಬವರು ತಿಂಗಳಿಗೆ 40 ಸಾವಿರಕ್ಕೆ ಶೆಡ್ ಬಾಡಿಗೆಗೆ ಪಡೆದಿದ್ದರು. ಇಲ್ಲಿಂದ ಯೂರಿಯಾ ಪ್ಯಾಕ್ ಮಾಡಿ ತಮಿಳುನಾಡಿಗೆ ಕಳುಹಿಸಲಾಗ್ತಿತ್ತು. ತಮಿಳುನಾಡಿನಲ್ಲಿ ದಾಳಿ ವೇಳೆ DRI ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ಸಿಕ್ಕಿತ್ತು. ರಾಜ್ಯಕ್ಕೆ ಕೇಂದ್ರ ಸರ್ಕಾರ ಕೊಡ್ತಿದ್ದ 45 ಕೆಜಿ ತೂಕದ ಯೂರಿಯಾವನ್ನು ಶೆಡ್ಗಳಿಗೆ ತಂದು ದಾಸ್ತಾನು ಮಾಡಲಾಗ್ತಿತ್ತು. ಬಳಿಕ ಅದನ್ನು ಬೇರೆ ಚೀಲಗಳಿಗೆ ತುಂಬಿ 50 ಕೆಜಿ ಚೀಲವನ್ನಾಗಿ ಮಾಡಿ ಮಾರಾಟ ಮಾಡಲಾಗುತ್ತಿತ್ತು. ಕೇವಲ 266 ರೂ.ಗೆ ರೈತರಿಗೆ ನೀಡಬೇಕಿದ್ದ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ 2000 ರೂ.ಗೆ ದಂಧೆಕೋರರು ಮಾರಾಟ ಮಾಡುತ್ತಿದ್ದರು.
ಕೇಂದ್ರವು 45 ಕೆಜಿ ತೂಕದ 2321 ರೂ. ಬೆಲೆಯ ಯೂರಿಯಾಗೆ 2054 ರೂ. ಸಬ್ಸಿಡಿ ನೀಡಿ 266 ರೂಪಾಯಿಗೆ ರಾಜ್ಯಕ್ಕೆ ನೀಡುತ್ತದೆ. ಅದನ್ನೇ ಇವರು ಕಾಳಸಂತೆಯಲ್ಲಿ 2500 ರೂ. ವರೆಗೆ ಮಾರಾಟ ಮಾಡುತ್ತಿದ್ದಾರೆ ಎನ್ನುವುದೀಗ ಬಯಲಾಗಿದೆ.
ಕೇಂದ್ರ ಸರ್ಕಾರದಿಂದ ಯೂರಿಯಾ ರಾಜ್ಯದ ಕೃಷಿ ಇಲಾಖೆಗೆ ವರ್ಗಾವಣೆ ಆಗುತ್ತದೆ. ಆ ಬಳಿಕ ಇಲಾಖೆಯೇ ರೈತರಿಗೆ ಇವನ್ನು ವಿತರಣೆ ಮಾಡಬೇಕು. ಹೀಗಿರುವಾಗ ಅವು ದಂಧೆಕೋರರ ಕೈಸೇರುತ್ತಿರೋದಾದರೂ ಹೇಗೆ ಎಂಬ ಪ್ರಶ್ನೆ ಎಲ್ಲರಲ್ಲಿ ಈಗ ಉದ್ಭವಿಸಿದೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…