ರಾಜ್ಯಕ್ಕೆ ವಿನಾಯಿತಿ ಮೇಲೆ ಕೇಂದ್ರ ಸರ್ಕಾರ ಕೊಡುತ್ತಿರುವ ಯೂರಿಯಾದ ಅಭಾವದಿಂದಾಗಿ ಈ ಬಾರಿ ರೈತರು ಪರದಾಟ ನಡೆಸಿದ ಸಾಕಷ್ಟು ಘಟನೆಗಳು ನಡೆದಿತ್ತು.
ಕಿಲೋ ಮೀಟರ್ಗಟ್ಟಲೆ ಉದ್ದದ ಸರತಿ ಸಾಲಲ್ಲಿ ನಿಂತರೂ ಯೂರಿಯಾ ಸಿಗದೆ ಅದೆಷ್ಟೋ ರೈತರು ವಾಪಸ್ ಆಗಿದ್ದರು. ಈ ನಡುವೆ ರೈತರಿಗೆ ಹಂಚಿಕೆಯಾಗಬೇಕಿದ್ದ ಯೂರಿಯಾ ಕಾಳಸಂತೆಯಲ್ಲಿ ಮಾರಾಟವಾಗಿರುವ ಆತಂಕಕಾರಿ ವಿಷಯ ಬಹಿರಂಗವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗೆಜ್ಜಗದಹಳ್ಳಿ ಬಳಿ ಅಕ್ರಮವಾಗಿ ಸಂಗ್ರಹಿಸಿದ್ದ ಯೂರಿಯಾವನ್ನು DRI ವಶಕ್ಕೆ ಪಡೆದಿದೆ.
ದಾಳಿಯ ವೇಳೆ ಗೆಜ್ಜಗದಹಳ್ಳಿಯಲ್ಲಿ 2 ಸಾವಿರ ಕೆಜಿ ಯೂರಿಯಾವನ್ನು DRI ವಶಕ್ಕೆ ಪಡೆದಿದೆ. 6 ತಿಂಗಳ ಹಿಂದೆ ತಜೀರ್ ಖಾನ್ ಯೂಸುಫ್ ಎಂಬವರು ತಿಂಗಳಿಗೆ 40 ಸಾವಿರಕ್ಕೆ ಶೆಡ್ ಬಾಡಿಗೆಗೆ ಪಡೆದಿದ್ದರು. ಇಲ್ಲಿಂದ ಯೂರಿಯಾ ಪ್ಯಾಕ್ ಮಾಡಿ ತಮಿಳುನಾಡಿಗೆ ಕಳುಹಿಸಲಾಗ್ತಿತ್ತು. ತಮಿಳುನಾಡಿನಲ್ಲಿ ದಾಳಿ ವೇಳೆ DRI ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ಸಿಕ್ಕಿತ್ತು. ರಾಜ್ಯಕ್ಕೆ ಕೇಂದ್ರ ಸರ್ಕಾರ ಕೊಡ್ತಿದ್ದ 45 ಕೆಜಿ ತೂಕದ ಯೂರಿಯಾವನ್ನು ಶೆಡ್ಗಳಿಗೆ ತಂದು ದಾಸ್ತಾನು ಮಾಡಲಾಗ್ತಿತ್ತು. ಬಳಿಕ ಅದನ್ನು ಬೇರೆ ಚೀಲಗಳಿಗೆ ತುಂಬಿ 50 ಕೆಜಿ ಚೀಲವನ್ನಾಗಿ ಮಾಡಿ ಮಾರಾಟ ಮಾಡಲಾಗುತ್ತಿತ್ತು. ಕೇವಲ 266 ರೂ.ಗೆ ರೈತರಿಗೆ ನೀಡಬೇಕಿದ್ದ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ 2000 ರೂ.ಗೆ ದಂಧೆಕೋರರು ಮಾರಾಟ ಮಾಡುತ್ತಿದ್ದರು.
ಕೇಂದ್ರವು 45 ಕೆಜಿ ತೂಕದ 2321 ರೂ. ಬೆಲೆಯ ಯೂರಿಯಾಗೆ 2054 ರೂ. ಸಬ್ಸಿಡಿ ನೀಡಿ 266 ರೂಪಾಯಿಗೆ ರಾಜ್ಯಕ್ಕೆ ನೀಡುತ್ತದೆ. ಅದನ್ನೇ ಇವರು ಕಾಳಸಂತೆಯಲ್ಲಿ 2500 ರೂ. ವರೆಗೆ ಮಾರಾಟ ಮಾಡುತ್ತಿದ್ದಾರೆ ಎನ್ನುವುದೀಗ ಬಯಲಾಗಿದೆ.
ಕೇಂದ್ರ ಸರ್ಕಾರದಿಂದ ಯೂರಿಯಾ ರಾಜ್ಯದ ಕೃಷಿ ಇಲಾಖೆಗೆ ವರ್ಗಾವಣೆ ಆಗುತ್ತದೆ. ಆ ಬಳಿಕ ಇಲಾಖೆಯೇ ರೈತರಿಗೆ ಇವನ್ನು ವಿತರಣೆ ಮಾಡಬೇಕು. ಹೀಗಿರುವಾಗ ಅವು ದಂಧೆಕೋರರ ಕೈಸೇರುತ್ತಿರೋದಾದರೂ ಹೇಗೆ ಎಂಬ ಪ್ರಶ್ನೆ ಎಲ್ಲರಲ್ಲಿ ಈಗ ಉದ್ಭವಿಸಿದೆ.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…