ದೊಡ್ಡಬಳ್ಳಾಪುರ: ಕನ್ನಡಿಗರೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಜನರು ದ್ರಾವಿಡ ಅಸ್ಮಿತೆಯ ಪ್ರತೀಕವಾಗಿದ್ದು, ನೆಲಮೂಲದ ಚಿಂತನೆಗಳ ಮೂಲಕ ನಾಡಿನ ಅನನ್ಯತೆಯನ್ನು ಪ್ರತಿಪಾದಿಸುತ್ತಿದ್ದಾರೆ ಎಂದು ನಾವು ದ್ರಾವಿಡ ಕನ್ನಡಿಗರು ಚಳವಳಿಯ ಸಂಸ್ಥಾಪಕ ಅಭಿಗೌಡ ಅಭಿಪ್ರಾಯಪಟ್ಟರು.
ಇಲ್ಲಿನ ಶ್ರೀ ದೇವರಾಜ್ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ಸೋಮವಾರ ಭಾಗ್ಯವಿಧಾತ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕನ್ನಡ ಉಪನ್ಯಾಸ ಮಾಲಿಕೆಯಲ್ಲಿ “ದ್ರಾವಿಡ ನುಡಿ ಕುಟುಂಬ ಮತ್ತು ಕನ್ನಡ ನುಡಿ” ವಿಚಾರದ ಕುರಿತು ಉಪನ್ಯಾಸ ನೀಡಿದರು.
ಮಾತೃಪ್ರಧಾನ ವ್ಯವಸ್ಥೆಯನ್ನು ಪ್ರತಿಪಾದಿಸುವ ದ್ರಾವಿಡ ಪರಂಪರೆಯೇ ಭಾರತದ ಸಾಂಸ್ಕೃತಿಕ ಇತಿಹಾಸದ ಅಡಿಪಾಯವಾಗಿದೆ. ಇಂದು ಒಂದು ದೇಶ ಒಂದು ಭಾಷೆ, ಒಂದು ಸಂಸ್ಕೃತಿ, ಒಂದು ಚಿಂತನೆ ಹೆಸರಿನಲ್ಲಿ ಈ ನಾಡಿನ ವೈವಿಧ್ಯತೆಯನ್ನು ನಾಶ ಮಾಡುವ ಪ್ರಯತ್ನಗಳು ನಡೆಯುತ್ತಿರುವುದು ಅಪಾಯಕಾರಿ. ಬಹುತ್ವವನ್ನು ಪ್ರತಿಪಾದಿಸುವುದೇ ಭಾರತ ಒಕ್ಕೂಟದ ಮಂತ್ರವಾಗಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಭಾಗ್ಯವಿಧಾತ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಪ್ರೊ.ಚಂದ್ರಪ್ಪ ಮಾತನಾಡಿ, ಕನ್ನಡ ನಾಡು, ನುಡಿಯ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಜಾಗೃತಗೊಳಿಸುವ ಉದ್ದೇಶದಿಂದ ಕಾಲೇಜು ಹಂತದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳು ಸಾಹಿತ್ಯ, ಸಾಂಸ್ಕೃತಿಕ ಮೌಲ್ಯಗಳ ಬಗ್ಗೆ ಅವಲೋಕಿಸುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.
ಈ ವೇಳೆ ಪ್ರಾಂಶುಪಾಲ ಡಾ.ಆರ್.ನಾಗರಾಜು ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್, ಕನ್ನಡ ವಿಭಾಗ ಮುಖ್ಯಸ್ಥ ಡಾ.ಎಂ.ಚಿಕ್ಕಣ್ಣ ಮಾತನಾಡಿದರು. ಉಪಪ್ರಾಂಶುಪಾಲ ಪ್ರೊ.ದಕ್ಷಿಣಾಮೂರ್ತಿ, ಭಾಗ್ಯವಿಧಾತ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತದ ಉಪಾಧ್ಯಕ್ಷ ದೊಡ್ಡರಂಗಪ್ಪ, ನಿವೃತ್ತ ಉಪನ್ಯಾಸಕ ಮಂಜುನಾಥಯ್ಯ, ವಿಭಾಗಗಳ ಮುಖ್ಯಸ್ಥರಾದ ಪಿ.ಚೈತ್ರ, ಸಿ.ಪಿ.ಪ್ರಕಾಶ್, ಡಾ.ತಾವರೆನಾಯ್ಕ್, ಉದ್ಯೋಗಾಧಿಕಾರಿ ಬಾಬು ಸಾಬಿ, ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ್, ಉಪನ್ಯಾಸರಾದ ಅಭಿಷೇಕ್, ಉಷಾಶ್ರೀ ಮತ್ತಿತರರು ಉಪಸ್ಥಿತರಿದ್ದರು.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…