ದೊಡ್ಡಬಳ್ಳಾಪುರ: ಕನ್ನಡಿಗರೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಜನರು ದ್ರಾವಿಡ ಅಸ್ಮಿತೆಯ ಪ್ರತೀಕವಾಗಿದ್ದು, ನೆಲಮೂಲದ ಚಿಂತನೆಗಳ ಮೂಲಕ ನಾಡಿನ ಅನನ್ಯತೆಯನ್ನು ಪ್ರತಿಪಾದಿಸುತ್ತಿದ್ದಾರೆ ಎಂದು ನಾವು ದ್ರಾವಿಡ ಕನ್ನಡಿಗರು ಚಳವಳಿಯ ಸಂಸ್ಥಾಪಕ ಅಭಿಗೌಡ ಅಭಿಪ್ರಾಯಪಟ್ಟರು.
ಇಲ್ಲಿನ ಶ್ರೀ ದೇವರಾಜ್ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ಸೋಮವಾರ ಭಾಗ್ಯವಿಧಾತ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕನ್ನಡ ಉಪನ್ಯಾಸ ಮಾಲಿಕೆಯಲ್ಲಿ “ದ್ರಾವಿಡ ನುಡಿ ಕುಟುಂಬ ಮತ್ತು ಕನ್ನಡ ನುಡಿ” ವಿಚಾರದ ಕುರಿತು ಉಪನ್ಯಾಸ ನೀಡಿದರು.
ಮಾತೃಪ್ರಧಾನ ವ್ಯವಸ್ಥೆಯನ್ನು ಪ್ರತಿಪಾದಿಸುವ ದ್ರಾವಿಡ ಪರಂಪರೆಯೇ ಭಾರತದ ಸಾಂಸ್ಕೃತಿಕ ಇತಿಹಾಸದ ಅಡಿಪಾಯವಾಗಿದೆ. ಇಂದು ಒಂದು ದೇಶ ಒಂದು ಭಾಷೆ, ಒಂದು ಸಂಸ್ಕೃತಿ, ಒಂದು ಚಿಂತನೆ ಹೆಸರಿನಲ್ಲಿ ಈ ನಾಡಿನ ವೈವಿಧ್ಯತೆಯನ್ನು ನಾಶ ಮಾಡುವ ಪ್ರಯತ್ನಗಳು ನಡೆಯುತ್ತಿರುವುದು ಅಪಾಯಕಾರಿ. ಬಹುತ್ವವನ್ನು ಪ್ರತಿಪಾದಿಸುವುದೇ ಭಾರತ ಒಕ್ಕೂಟದ ಮಂತ್ರವಾಗಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಭಾಗ್ಯವಿಧಾತ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಪ್ರೊ.ಚಂದ್ರಪ್ಪ ಮಾತನಾಡಿ, ಕನ್ನಡ ನಾಡು, ನುಡಿಯ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಜಾಗೃತಗೊಳಿಸುವ ಉದ್ದೇಶದಿಂದ ಕಾಲೇಜು ಹಂತದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳು ಸಾಹಿತ್ಯ, ಸಾಂಸ್ಕೃತಿಕ ಮೌಲ್ಯಗಳ ಬಗ್ಗೆ ಅವಲೋಕಿಸುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.
ಈ ವೇಳೆ ಪ್ರಾಂಶುಪಾಲ ಡಾ.ಆರ್.ನಾಗರಾಜು ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್, ಕನ್ನಡ ವಿಭಾಗ ಮುಖ್ಯಸ್ಥ ಡಾ.ಎಂ.ಚಿಕ್ಕಣ್ಣ ಮಾತನಾಡಿದರು. ಉಪಪ್ರಾಂಶುಪಾಲ ಪ್ರೊ.ದಕ್ಷಿಣಾಮೂರ್ತಿ, ಭಾಗ್ಯವಿಧಾತ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತದ ಉಪಾಧ್ಯಕ್ಷ ದೊಡ್ಡರಂಗಪ್ಪ, ನಿವೃತ್ತ ಉಪನ್ಯಾಸಕ ಮಂಜುನಾಥಯ್ಯ, ವಿಭಾಗಗಳ ಮುಖ್ಯಸ್ಥರಾದ ಪಿ.ಚೈತ್ರ, ಸಿ.ಪಿ.ಪ್ರಕಾಶ್, ಡಾ.ತಾವರೆನಾಯ್ಕ್, ಉದ್ಯೋಗಾಧಿಕಾರಿ ಬಾಬು ಸಾಬಿ, ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ್, ಉಪನ್ಯಾಸರಾದ ಅಭಿಷೇಕ್, ಉಷಾಶ್ರೀ ಮತ್ತಿತರರು ಉಪಸ್ಥಿತರಿದ್ದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…