ನೆಲಮೂಲದ ಚಿಂತನೆಗಳು ದ್ರಾವಿಡ ಅಸ್ಮಿತೆಯ ಪ್ರತೀಕ-ಅಭಿಗೌಡ

ದೊಡ್ಡಬಳ್ಳಾಪುರ: ಕನ್ನಡಿಗರೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಜನರು ದ್ರಾವಿಡ ಅಸ್ಮಿತೆಯ ಪ್ರತೀಕವಾಗಿದ್ದು, ನೆಲಮೂಲದ ಚಿಂತನೆಗಳ ಮೂಲಕ ನಾಡಿನ ಅನನ್ಯತೆಯನ್ನು ಪ್ರತಿಪಾದಿಸುತ್ತಿದ್ದಾರೆ ಎಂದು ನಾವು ದ್ರಾವಿಡ ಕನ್ನಡಿಗರು ಚಳವಳಿಯ ಸಂಸ್ಥಾಪಕ ಅಭಿಗೌಡ ಅಭಿಪ್ರಾಯಪಟ್ಟರು.

ಇಲ್ಲಿನ ಶ್ರೀ ದೇವರಾಜ್‌ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ಸೋಮವಾರ ಭಾಗ್ಯವಿಧಾತ ಕ್ರೆಡಿಟ್‌ ಸೌಹಾರ್ದ ಸಹಕಾರಿ ನಿಯಮಿತ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕನ್ನಡ ಉಪನ್ಯಾಸ ಮಾಲಿಕೆಯಲ್ಲಿ “ದ್ರಾವಿಡ ನುಡಿ ಕುಟುಂಬ ಮತ್ತು ಕನ್ನಡ ನುಡಿ” ವಿಚಾರದ ಕುರಿತು ಉಪನ್ಯಾಸ ನೀಡಿದರು.

ಮಾತೃಪ್ರಧಾನ ವ್ಯವಸ್ಥೆಯನ್ನು ಪ್ರತಿಪಾದಿಸುವ ದ್ರಾವಿಡ ಪರಂಪರೆಯೇ ಭಾರತದ ಸಾಂಸ್ಕೃತಿಕ ಇತಿಹಾಸದ ಅಡಿಪಾಯವಾಗಿದೆ. ಇಂದು ಒಂದು ದೇಶ ಒಂದು ಭಾಷೆ, ಒಂದು ಸಂಸ್ಕೃತಿ, ಒಂದು ಚಿಂತನೆ ಹೆಸರಿನಲ್ಲಿ ಈ ನಾಡಿನ ವೈವಿಧ್ಯತೆಯನ್ನು ನಾಶ ಮಾಡುವ ಪ್ರಯತ್ನಗಳು ನಡೆಯುತ್ತಿರುವುದು ಅಪಾಯಕಾರಿ. ಬಹುತ್ವವನ್ನು ಪ್ರತಿಪಾದಿಸುವುದೇ ಭಾರತ ಒಕ್ಕೂಟದ ಮಂತ್ರವಾಗಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಭಾಗ್ಯವಿಧಾತ ಕ್ರೆಡಿಟ್‌ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಪ್ರೊ.ಚಂದ್ರಪ್ಪ ಮಾತನಾಡಿ, ಕನ್ನಡ ನಾಡು, ನುಡಿಯ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಜಾಗೃತಗೊಳಿಸುವ ಉದ್ದೇಶದಿಂದ ಕಾಲೇಜು ಹಂತದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳು ಸಾಹಿತ್ಯ, ಸಾಂಸ್ಕೃತಿಕ ಮೌಲ್ಯಗಳ ಬಗ್ಗೆ ಅವಲೋಕಿಸುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.

ಈ ವೇಳೆ ಪ್ರಾಂಶುಪಾಲ ಡಾ.ಆರ್.ನಾಗರಾಜು ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್, ಕನ್ನಡ ವಿಭಾಗ ಮುಖ್ಯಸ್ಥ ಡಾ.ಎಂ.ಚಿಕ್ಕಣ್ಣ ಮಾತನಾಡಿದರು. ಉಪಪ್ರಾಂಶುಪಾಲ ಪ್ರೊ.ದಕ್ಷಿಣಾಮೂರ್ತಿ, ಭಾಗ್ಯವಿಧಾತ ಕ್ರೆಡಿಟ್‌ ಸೌಹಾರ್ದ ಸಹಕಾರಿ ನಿಯಮಿತದ ಉಪಾಧ್ಯಕ್ಷ ದೊಡ್ಡರಂಗಪ್ಪ, ನಿವೃತ್ತ ಉಪನ್ಯಾಸಕ ಮಂಜುನಾಥಯ್ಯ, ವಿಭಾಗಗಳ ಮುಖ್ಯಸ್ಥರಾದ ಪಿ.ಚೈತ್ರ, ಸಿ.ಪಿ.ಪ್ರಕಾಶ್‌, ಡಾ.ತಾವರೆನಾಯ್ಕ್‌, ಉದ್ಯೋಗಾಧಿಕಾರಿ ಬಾಬು ಸಾಬಿ, ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ್, ಉಪನ್ಯಾಸರಾದ ಅಭಿಷೇಕ್, ಉಷಾಶ್ರೀ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

7 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

18 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

19 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

20 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

21 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago