ನೆಲ್ಲುಕುಂಟೆಯಲ್ಲಿ‌ ಉಚಿತ ಆರೋಗ್ಯ ತಪಾಸಣಾ ಶಿಬಿರ

ನೆಲ್ಲುಕುಂಟೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮಾಜಸೇವಕರಾದ ರಂಜಿತ್ ಯಾದವ್ ರವರ ಹುಟ್ಟುಹಬ್ಬದ ಅಂಗವಾಗಿ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು.

ಮಾಜಿ ಎಂ.ಪಿ. ಸಿ .ಎಸ್ ಅಧ್ಯಕ್ಷರು ಮತ್ತು ತಿಪ್ಪೂರು ವಿ.ಎಸ್.ಎಸ್.ಎನ್ ನಿರ್ದೇಶಕರಾದ ತಿಮ್ಮರಾಜು ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಂಜಿತ್ ಯಾದವ್ ಜನ್ಮದಿನದ ಅಂಗವಾಗಿ ಆರೋಗ್ಯ ಶಿಬಿರ ಆಯೋಜನೆ ಮಾಡಿರುವುದು ಒಳ್ಳೆಯ ಕೆಲಸ. ಇದರಿಂದ ಸುತ್ತಮುತ್ತಲಿನ ಗ್ರಾಮಗಳ ಜನಸಾಮಾನ್ಯರಿಗೆ ಸಹಕಾರಿಯಾಗಲಿದೆ. ಸುತ್ತಮುತ್ತಲಿನ ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಬೇಕು. ರಂಜಿತ್ ಇಂತಹ ಮತ್ತಷ್ಟು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಭಗವಂತ ಶಕ್ತಿ ಕರುಣಿಸಲಿ ಎಂದು ಶುಭಹಾರೈಸಿದರು.

ಕಂಟನಕುಂಟೆಯ ಮಾತೋ ಶ್ರೀ ಆಸ್ಪತ್ರೆಯ ಸಹಯೋಗದೊಂದಿಗೆ ಶಿಬಿರ ಆಯೋಜನೆ ಮಾಡಲಾಗಿತ್ತು. ಈ ಶಿಬಿರದಲ್ಲಿ ಬಿ.ಪಿ, ಶುಗರ್, ರಕ್ತದೊತ್ತಡ ಇತರೆ ಕಾಯಿಲೆಗಳ ತಪಾಸಣೆ ನಡೆಸಲಾಯಿತು.

ಕಾರ್ಯಕ್ರಮದ ಆಯೋಜಕ ರಂಜಿತ್ ಯಾದವ್ ಮಾತನಾಡಿ, ಪ್ರತಿವರ್ಷ ನನ್ನ ಹುಟ್ಟಿದ ದಿನದ ಅಂಗವಾಗಿ ಬೇರೆಬೇರೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದ್ದೆ, ಈ ವರ್ಷ ನಮ್ಮ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಅನುಕೂಲವಾಗಲೆಂದು ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಿದ್ದೇನೆ. ಎಲ್ಲರೂ ಬಂದು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಆರೋಗ್ಯಕ್ಕಿಂತ ಮುಖ್ಯವಾದು ಯಾವುದೂ ಇಲ್ಲ ಅರೋಗ್ಯಕ್ಕೆ ಹೆಚ್ಚಿನ ಗಮನ ಕೊಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿ.ಜೆ.ಪಿ ಯುವ ಮುಖಂಡ ಪ್ರತಾಪ್, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಸುನೀಲ್ ಕುಮಾರ್ ಯಾದವ್, ಕಾಂಗ್ರೆಸ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರೇಗೌಡ ಮಾತೋ ಶ್ರೀ ಆಸ್ಪತ್ರೆಯ ಸಂಸ್ಥಾಪಕರು ಹಾಗೂ ವ್ಯವಸ್ಥಾಪಕರಾದ ಗಜೇಂದ್ರ ,ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ದಪ್ಪ, ಮುಖಂಡರು ಗಳಾದ ಸಂಪತ್ ಯಾದವ್, ರಾಜ್‍ಕುಮಾರ್ ಜಿ.ಎನ್ ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

6 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

9 hours ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

1 day ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

1 day ago

ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಡ್ಯಾಂ ನಿರ್ಮಾಣ ಬೇಡ- ತಹಶೀಲ್ದಾರ್ ಮಲ್ಲಪ್ಪಗೆ ರೈತರ ಮನವಿ

ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…

1 day ago

ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರ ಪ್ರತಿಭಟನೆ

ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ…

1 day ago