ನೆಲ್ಲುಕುಂಟೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮಾಜಸೇವಕರಾದ ರಂಜಿತ್ ಯಾದವ್ ರವರ ಹುಟ್ಟುಹಬ್ಬದ ಅಂಗವಾಗಿ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು.
ಮಾಜಿ ಎಂ.ಪಿ. ಸಿ .ಎಸ್ ಅಧ್ಯಕ್ಷರು ಮತ್ತು ತಿಪ್ಪೂರು ವಿ.ಎಸ್.ಎಸ್.ಎನ್ ನಿರ್ದೇಶಕರಾದ ತಿಮ್ಮರಾಜು ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಂಜಿತ್ ಯಾದವ್ ಜನ್ಮದಿನದ ಅಂಗವಾಗಿ ಆರೋಗ್ಯ ಶಿಬಿರ ಆಯೋಜನೆ ಮಾಡಿರುವುದು ಒಳ್ಳೆಯ ಕೆಲಸ. ಇದರಿಂದ ಸುತ್ತಮುತ್ತಲಿನ ಗ್ರಾಮಗಳ ಜನಸಾಮಾನ್ಯರಿಗೆ ಸಹಕಾರಿಯಾಗಲಿದೆ. ಸುತ್ತಮುತ್ತಲಿನ ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಬೇಕು. ರಂಜಿತ್ ಇಂತಹ ಮತ್ತಷ್ಟು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಭಗವಂತ ಶಕ್ತಿ ಕರುಣಿಸಲಿ ಎಂದು ಶುಭಹಾರೈಸಿದರು.
ಕಂಟನಕುಂಟೆಯ ಮಾತೋ ಶ್ರೀ ಆಸ್ಪತ್ರೆಯ ಸಹಯೋಗದೊಂದಿಗೆ ಶಿಬಿರ ಆಯೋಜನೆ ಮಾಡಲಾಗಿತ್ತು. ಈ ಶಿಬಿರದಲ್ಲಿ ಬಿ.ಪಿ, ಶುಗರ್, ರಕ್ತದೊತ್ತಡ ಇತರೆ ಕಾಯಿಲೆಗಳ ತಪಾಸಣೆ ನಡೆಸಲಾಯಿತು.
ಕಾರ್ಯಕ್ರಮದ ಆಯೋಜಕ ರಂಜಿತ್ ಯಾದವ್ ಮಾತನಾಡಿ, ಪ್ರತಿವರ್ಷ ನನ್ನ ಹುಟ್ಟಿದ ದಿನದ ಅಂಗವಾಗಿ ಬೇರೆಬೇರೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದ್ದೆ, ಈ ವರ್ಷ ನಮ್ಮ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಅನುಕೂಲವಾಗಲೆಂದು ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಿದ್ದೇನೆ. ಎಲ್ಲರೂ ಬಂದು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಆರೋಗ್ಯಕ್ಕಿಂತ ಮುಖ್ಯವಾದು ಯಾವುದೂ ಇಲ್ಲ ಅರೋಗ್ಯಕ್ಕೆ ಹೆಚ್ಚಿನ ಗಮನ ಕೊಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿ.ಜೆ.ಪಿ ಯುವ ಮುಖಂಡ ಪ್ರತಾಪ್, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಸುನೀಲ್ ಕುಮಾರ್ ಯಾದವ್, ಕಾಂಗ್ರೆಸ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರೇಗೌಡ ಮಾತೋ ಶ್ರೀ ಆಸ್ಪತ್ರೆಯ ಸಂಸ್ಥಾಪಕರು ಹಾಗೂ ವ್ಯವಸ್ಥಾಪಕರಾದ ಗಜೇಂದ್ರ ,ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ದಪ್ಪ, ಮುಖಂಡರು ಗಳಾದ ಸಂಪತ್ ಯಾದವ್, ರಾಜ್ಕುಮಾರ್ ಜಿ.ಎನ್ ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…