ನೇಕಾರರಿಗೆ 10 ಹೆಚ್​ಪಿವರೆಗೆ ಉಚಿತ ವಿದ್ಯುತ್-25 ಸಾವಿರ ವಿದ್ಯುತ್ ಮಗ್ಗದ ಘಟಕಗಳಿಗೆ ಅನುಕೂಲ: ಸರ್ಕಾರದ ನಿರ್ಧಾರಕ್ಕೆ ನೇಕಾರರ ಶ್ಲಾಘನೆ

ಸಂಕಷ್ಟದಲ್ಲಿದ್ದ ನೇಯ್ಗೆ ಉದ್ಯಮಕ್ಕೆ 10HP ವರಗೆ ಉಚಿತ ವಿದ್ಯುತ್ ಜಾರಿಗೆ ತಂದು ನೇಯ್ಗೆ ಉದ್ಯಮಕ್ಕೆ ಶಕ್ತಿ ತುಂಬಿರುವ ಸರ್ಕಾರದ ತಿರ್ಮಾನದಿಂದ ರಾಜ್ಯದ 25 ಸಾವಿರ ವಿದ್ಯುತ್ ಮಗ್ಗದ ಘಟಕಗಳಿಗೆ ಅನುಕೂಲವಾಗಿದೆ ಎಂದು ನೇಕಾರರ ಹೋರಾಟ ಸಮಿತಿ ಅಧ್ಯಕ್ಷ ಬಿ.ಜಿ.ಹೇಮಂತರಾಜು ಹೇಳಿದರು.

ಈ ಕುರಿತು ನಗರದ ಸಿನಿಮಾ ರಸ್ತೆಯಲ್ಲಿರುವ ನೇಕಾರರ ಹೋರಾಟ ಸಮಿತಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೇಕಾರ ಸಮ್ಮಾನ್ ಯೋಜನೆಯ ಮೂಲಕ 83 ಸಾವಿರ ಜನ ನೇಕಾರರು ಮತ್ತು ನೇಕಾರ ಕಾರ್ಮಿಕರಿಗೆ ತಲಾ ಐದು ಸಾವಿರ ರೂಪಾಯಿ ಹಣವನ್ನ ಖಾತೆಗೆ ಜಮಾ ಮಾಡುವ ಮೂಲಕ ರಾಜ್ಯ ಸರ್ಕಾರ ನೇಕಾರರಿಗೆ ಅಸರೆಯಾಗಿದೆ ಎಂದರು.

2004ರಲ್ಲಿ ಅವಸಾನದ ಅಂಚಿನಲ್ಲಿದ್ದ ನೇಯ್ಗೆ ಉದ್ಯಮಕ್ಕೆ ಇದೆ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಉಪ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಅವರು, ವಿದ್ಯುತ್ ರಿಯಾಯಿತಿ ಜಾರಿಗೆ ತಂದು ನೇಯ್ಗೆ ಉದ್ಯಮಕ್ಕೆ ಆಸರೆ ಆಗಿದ್ದು ಅದೇ ಸಮಯದಲ್ಲಿ. ನೇಕಾರರ ಸಾಲದ ಮೇಲಿನ ಬಡ್ಡಿ ಮನ್ನಾ, ವಸತಿ ಯೋಜನೆ, ಗುಂಪು ವಿಮಾ ಯೋಜನೆ, ನೇಕಾರ ಮಕ್ಕಳಿಗೆ 9 ರಿಂದ 12 ತರಗತಿ ಓದುವ ವಿದ್ಯಾರ್ಥಿಗಳಿಗೆ 1,200 ರೂ. ವಿದ್ಯಾರ್ಥಿವೇತನ, ಯಶಸ್ವಿನಿ ಅರೊಗ್ಯ ವಿಮಾ ಯೋಜನೆ, ಎರಡು ಮಗ್ಗ ಯೋಜನೆ ಎಲೆಕ್ಟ್ರಾನಿಕ್ ಜಕಾರ್ಡ್ ಯೋಜನೆ, ಶೇ3.ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದು ನೇಯ್ಗೆ ಉದ್ಯಮಕ್ಕೆ ಜೀವ ತುಂಬಿದ್ದರು.

ದೇಶದಲ್ಲಿ ಸ್ವಾತಂತ್ರ್ಯ ಬಂದ ನಂತರ ರಾಜ್ಯದಲ್ಲಿ ಮೊದಲ ಬಾರಿಗೆ ನೇಕಾರರ ಪರವಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಹೇಳಿದರು.

ಉಚಿತ ವಿದ್ಯುತ್‌ ಜಾರಿಗೆ ತರಲು ಕರ್ನಾಟಕ ರಾಜ್ಯ ನೇಕಾರ ಮಹಾ ಮಂಡಳಿಯ ಜೊತೆ ನಿಂತು ಸಹಕರಿಸಿದ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಗಳಾದ ಎಂ ವೀರಪ್ಪ ಮೊಯ್ಲಿ ರವರು ಹಾಗು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಶಾಸಕರಾದ ಟಿ ವೆಂಕಟರಮಣಯ್ಯ ರವರು ಕಳೆದ ಚುನಾವಣೆಯಲ್ಲಿ ಅವರಿಗೆ ಅನ್ಯಾಯ ವಾಗಿದ್ದರೂ ಸಹ ಅವರು ಉಚಿತ ವಿದ್ಯುತ್ ಜಾರಿಗೆ ತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು‌ ಎಂದರು.

Ramesh Babu

Journalist

Recent Posts

“ಗುರಿ” ಇಟ್ಟ ದೊಡ್ಡಬಳ್ಳಾಪುರ ಪ್ರತಿಭೆ ಮಹಾನಿಧಿ

ವಿದ್ಯಾರ್ಥಿ ಮತ್ತು ಶಿಕ್ಷಕನ ಬಾಂಧವ್ಯ, ಸರ್ಕಾರಿ ಶಾಲೆಗಳ ಇಂದಿನ ಸ್ಥಿತಿಗತಿ ಮೊದಲಾದ ಅಂಶಗಳು ಒಳಗೊಂಡಿರುವ 'ನನ್ನ ಶಾಲೆಯನ್ನು ಪ್ರೀತಿಸುತ್ತೇನೆ' ಎಂಬ…

26 minutes ago

ನೇಪಾಳದ ದಂಗೆ……

ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…

6 hours ago

22 ವರ್ಷದ ಯುವಕ‌ ಮನೆಯಲ್ಲಿ ನೇಣಿಗೆ ಶರಣು

22 ವರ್ಷದ ಯುವಕ‌ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…

9 hours ago

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

20 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

20 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

24 hours ago