ಸಂಕಷ್ಟದಲ್ಲಿದ್ದ ನೇಯ್ಗೆ ಉದ್ಯಮಕ್ಕೆ 10HP ವರಗೆ ಉಚಿತ ವಿದ್ಯುತ್ ಜಾರಿಗೆ ತಂದು ನೇಯ್ಗೆ ಉದ್ಯಮಕ್ಕೆ ಶಕ್ತಿ ತುಂಬಿರುವ ಸರ್ಕಾರದ ತಿರ್ಮಾನದಿಂದ ರಾಜ್ಯದ 25 ಸಾವಿರ ವಿದ್ಯುತ್ ಮಗ್ಗದ ಘಟಕಗಳಿಗೆ ಅನುಕೂಲವಾಗಿದೆ ಎಂದು ನೇಕಾರರ ಹೋರಾಟ ಸಮಿತಿ ಅಧ್ಯಕ್ಷ ಬಿ.ಜಿ.ಹೇಮಂತರಾಜು ಹೇಳಿದರು.
ಈ ಕುರಿತು ನಗರದ ಸಿನಿಮಾ ರಸ್ತೆಯಲ್ಲಿರುವ ನೇಕಾರರ ಹೋರಾಟ ಸಮಿತಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೇಕಾರ ಸಮ್ಮಾನ್ ಯೋಜನೆಯ ಮೂಲಕ 83 ಸಾವಿರ ಜನ ನೇಕಾರರು ಮತ್ತು ನೇಕಾರ ಕಾರ್ಮಿಕರಿಗೆ ತಲಾ ಐದು ಸಾವಿರ ರೂಪಾಯಿ ಹಣವನ್ನ ಖಾತೆಗೆ ಜಮಾ ಮಾಡುವ ಮೂಲಕ ರಾಜ್ಯ ಸರ್ಕಾರ ನೇಕಾರರಿಗೆ ಅಸರೆಯಾಗಿದೆ ಎಂದರು.
2004ರಲ್ಲಿ ಅವಸಾನದ ಅಂಚಿನಲ್ಲಿದ್ದ ನೇಯ್ಗೆ ಉದ್ಯಮಕ್ಕೆ ಇದೆ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಉಪ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಅವರು, ವಿದ್ಯುತ್ ರಿಯಾಯಿತಿ ಜಾರಿಗೆ ತಂದು ನೇಯ್ಗೆ ಉದ್ಯಮಕ್ಕೆ ಆಸರೆ ಆಗಿದ್ದು ಅದೇ ಸಮಯದಲ್ಲಿ. ನೇಕಾರರ ಸಾಲದ ಮೇಲಿನ ಬಡ್ಡಿ ಮನ್ನಾ, ವಸತಿ ಯೋಜನೆ, ಗುಂಪು ವಿಮಾ ಯೋಜನೆ, ನೇಕಾರ ಮಕ್ಕಳಿಗೆ 9 ರಿಂದ 12 ತರಗತಿ ಓದುವ ವಿದ್ಯಾರ್ಥಿಗಳಿಗೆ 1,200 ರೂ. ವಿದ್ಯಾರ್ಥಿವೇತನ, ಯಶಸ್ವಿನಿ ಅರೊಗ್ಯ ವಿಮಾ ಯೋಜನೆ, ಎರಡು ಮಗ್ಗ ಯೋಜನೆ ಎಲೆಕ್ಟ್ರಾನಿಕ್ ಜಕಾರ್ಡ್ ಯೋಜನೆ, ಶೇ3.ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದು ನೇಯ್ಗೆ ಉದ್ಯಮಕ್ಕೆ ಜೀವ ತುಂಬಿದ್ದರು.
ದೇಶದಲ್ಲಿ ಸ್ವಾತಂತ್ರ್ಯ ಬಂದ ನಂತರ ರಾಜ್ಯದಲ್ಲಿ ಮೊದಲ ಬಾರಿಗೆ ನೇಕಾರರ ಪರವಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಹೇಳಿದರು.
ಉಚಿತ ವಿದ್ಯುತ್ ಜಾರಿಗೆ ತರಲು ಕರ್ನಾಟಕ ರಾಜ್ಯ ನೇಕಾರ ಮಹಾ ಮಂಡಳಿಯ ಜೊತೆ ನಿಂತು ಸಹಕರಿಸಿದ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಗಳಾದ ಎಂ ವೀರಪ್ಪ ಮೊಯ್ಲಿ ರವರು ಹಾಗು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಶಾಸಕರಾದ ಟಿ ವೆಂಕಟರಮಣಯ್ಯ ರವರು ಕಳೆದ ಚುನಾವಣೆಯಲ್ಲಿ ಅವರಿಗೆ ಅನ್ಯಾಯ ವಾಗಿದ್ದರೂ ಸಹ ಅವರು ಉಚಿತ ವಿದ್ಯುತ್ ಜಾರಿಗೆ ತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು ಎಂದರು.
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…