ಸಂಕಷ್ಟದಲ್ಲಿದ್ದ ನೇಯ್ಗೆ ಉದ್ಯಮಕ್ಕೆ 10HP ವರಗೆ ಉಚಿತ ವಿದ್ಯುತ್ ಜಾರಿಗೆ ತಂದು ನೇಯ್ಗೆ ಉದ್ಯಮಕ್ಕೆ ಶಕ್ತಿ ತುಂಬಿರುವ ಸರ್ಕಾರದ ತಿರ್ಮಾನದಿಂದ ರಾಜ್ಯದ 25 ಸಾವಿರ ವಿದ್ಯುತ್ ಮಗ್ಗದ ಘಟಕಗಳಿಗೆ ಅನುಕೂಲವಾಗಿದೆ ಎಂದು ನೇಕಾರರ ಹೋರಾಟ ಸಮಿತಿ ಅಧ್ಯಕ್ಷ ಬಿ.ಜಿ.ಹೇಮಂತರಾಜು ಹೇಳಿದರು.
ಈ ಕುರಿತು ನಗರದ ಸಿನಿಮಾ ರಸ್ತೆಯಲ್ಲಿರುವ ನೇಕಾರರ ಹೋರಾಟ ಸಮಿತಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೇಕಾರ ಸಮ್ಮಾನ್ ಯೋಜನೆಯ ಮೂಲಕ 83 ಸಾವಿರ ಜನ ನೇಕಾರರು ಮತ್ತು ನೇಕಾರ ಕಾರ್ಮಿಕರಿಗೆ ತಲಾ ಐದು ಸಾವಿರ ರೂಪಾಯಿ ಹಣವನ್ನ ಖಾತೆಗೆ ಜಮಾ ಮಾಡುವ ಮೂಲಕ ರಾಜ್ಯ ಸರ್ಕಾರ ನೇಕಾರರಿಗೆ ಅಸರೆಯಾಗಿದೆ ಎಂದರು.
2004ರಲ್ಲಿ ಅವಸಾನದ ಅಂಚಿನಲ್ಲಿದ್ದ ನೇಯ್ಗೆ ಉದ್ಯಮಕ್ಕೆ ಇದೆ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಉಪ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಅವರು, ವಿದ್ಯುತ್ ರಿಯಾಯಿತಿ ಜಾರಿಗೆ ತಂದು ನೇಯ್ಗೆ ಉದ್ಯಮಕ್ಕೆ ಆಸರೆ ಆಗಿದ್ದು ಅದೇ ಸಮಯದಲ್ಲಿ. ನೇಕಾರರ ಸಾಲದ ಮೇಲಿನ ಬಡ್ಡಿ ಮನ್ನಾ, ವಸತಿ ಯೋಜನೆ, ಗುಂಪು ವಿಮಾ ಯೋಜನೆ, ನೇಕಾರ ಮಕ್ಕಳಿಗೆ 9 ರಿಂದ 12 ತರಗತಿ ಓದುವ ವಿದ್ಯಾರ್ಥಿಗಳಿಗೆ 1,200 ರೂ. ವಿದ್ಯಾರ್ಥಿವೇತನ, ಯಶಸ್ವಿನಿ ಅರೊಗ್ಯ ವಿಮಾ ಯೋಜನೆ, ಎರಡು ಮಗ್ಗ ಯೋಜನೆ ಎಲೆಕ್ಟ್ರಾನಿಕ್ ಜಕಾರ್ಡ್ ಯೋಜನೆ, ಶೇ3.ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದು ನೇಯ್ಗೆ ಉದ್ಯಮಕ್ಕೆ ಜೀವ ತುಂಬಿದ್ದರು.
ದೇಶದಲ್ಲಿ ಸ್ವಾತಂತ್ರ್ಯ ಬಂದ ನಂತರ ರಾಜ್ಯದಲ್ಲಿ ಮೊದಲ ಬಾರಿಗೆ ನೇಕಾರರ ಪರವಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಹೇಳಿದರು.
ಉಚಿತ ವಿದ್ಯುತ್ ಜಾರಿಗೆ ತರಲು ಕರ್ನಾಟಕ ರಾಜ್ಯ ನೇಕಾರ ಮಹಾ ಮಂಡಳಿಯ ಜೊತೆ ನಿಂತು ಸಹಕರಿಸಿದ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಗಳಾದ ಎಂ ವೀರಪ್ಪ ಮೊಯ್ಲಿ ರವರು ಹಾಗು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಶಾಸಕರಾದ ಟಿ ವೆಂಕಟರಮಣಯ್ಯ ರವರು ಕಳೆದ ಚುನಾವಣೆಯಲ್ಲಿ ಅವರಿಗೆ ಅನ್ಯಾಯ ವಾಗಿದ್ದರೂ ಸಹ ಅವರು ಉಚಿತ ವಿದ್ಯುತ್ ಜಾರಿಗೆ ತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು ಎಂದರು.
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…