ನೇಕಾರರಿಗೆ 10 ಹೆಚ್​ಪಿವರೆಗೆ ಉಚಿತ ವಿದ್ಯುತ್-25 ಸಾವಿರ ವಿದ್ಯುತ್ ಮಗ್ಗದ ಘಟಕಗಳಿಗೆ ಅನುಕೂಲ: ಸರ್ಕಾರದ ನಿರ್ಧಾರಕ್ಕೆ ನೇಕಾರರ ಶ್ಲಾಘನೆ

ಸಂಕಷ್ಟದಲ್ಲಿದ್ದ ನೇಯ್ಗೆ ಉದ್ಯಮಕ್ಕೆ 10HP ವರಗೆ ಉಚಿತ ವಿದ್ಯುತ್ ಜಾರಿಗೆ ತಂದು ನೇಯ್ಗೆ ಉದ್ಯಮಕ್ಕೆ ಶಕ್ತಿ ತುಂಬಿರುವ ಸರ್ಕಾರದ ತಿರ್ಮಾನದಿಂದ ರಾಜ್ಯದ 25 ಸಾವಿರ ವಿದ್ಯುತ್ ಮಗ್ಗದ ಘಟಕಗಳಿಗೆ ಅನುಕೂಲವಾಗಿದೆ ಎಂದು ನೇಕಾರರ ಹೋರಾಟ ಸಮಿತಿ ಅಧ್ಯಕ್ಷ ಬಿ.ಜಿ.ಹೇಮಂತರಾಜು ಹೇಳಿದರು.

ಈ ಕುರಿತು ನಗರದ ಸಿನಿಮಾ ರಸ್ತೆಯಲ್ಲಿರುವ ನೇಕಾರರ ಹೋರಾಟ ಸಮಿತಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೇಕಾರ ಸಮ್ಮಾನ್ ಯೋಜನೆಯ ಮೂಲಕ 83 ಸಾವಿರ ಜನ ನೇಕಾರರು ಮತ್ತು ನೇಕಾರ ಕಾರ್ಮಿಕರಿಗೆ ತಲಾ ಐದು ಸಾವಿರ ರೂಪಾಯಿ ಹಣವನ್ನ ಖಾತೆಗೆ ಜಮಾ ಮಾಡುವ ಮೂಲಕ ರಾಜ್ಯ ಸರ್ಕಾರ ನೇಕಾರರಿಗೆ ಅಸರೆಯಾಗಿದೆ ಎಂದರು.

2004ರಲ್ಲಿ ಅವಸಾನದ ಅಂಚಿನಲ್ಲಿದ್ದ ನೇಯ್ಗೆ ಉದ್ಯಮಕ್ಕೆ ಇದೆ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಉಪ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಅವರು, ವಿದ್ಯುತ್ ರಿಯಾಯಿತಿ ಜಾರಿಗೆ ತಂದು ನೇಯ್ಗೆ ಉದ್ಯಮಕ್ಕೆ ಆಸರೆ ಆಗಿದ್ದು ಅದೇ ಸಮಯದಲ್ಲಿ. ನೇಕಾರರ ಸಾಲದ ಮೇಲಿನ ಬಡ್ಡಿ ಮನ್ನಾ, ವಸತಿ ಯೋಜನೆ, ಗುಂಪು ವಿಮಾ ಯೋಜನೆ, ನೇಕಾರ ಮಕ್ಕಳಿಗೆ 9 ರಿಂದ 12 ತರಗತಿ ಓದುವ ವಿದ್ಯಾರ್ಥಿಗಳಿಗೆ 1,200 ರೂ. ವಿದ್ಯಾರ್ಥಿವೇತನ, ಯಶಸ್ವಿನಿ ಅರೊಗ್ಯ ವಿಮಾ ಯೋಜನೆ, ಎರಡು ಮಗ್ಗ ಯೋಜನೆ ಎಲೆಕ್ಟ್ರಾನಿಕ್ ಜಕಾರ್ಡ್ ಯೋಜನೆ, ಶೇ3.ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದು ನೇಯ್ಗೆ ಉದ್ಯಮಕ್ಕೆ ಜೀವ ತುಂಬಿದ್ದರು.

ದೇಶದಲ್ಲಿ ಸ್ವಾತಂತ್ರ್ಯ ಬಂದ ನಂತರ ರಾಜ್ಯದಲ್ಲಿ ಮೊದಲ ಬಾರಿಗೆ ನೇಕಾರರ ಪರವಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಹೇಳಿದರು.

ಉಚಿತ ವಿದ್ಯುತ್‌ ಜಾರಿಗೆ ತರಲು ಕರ್ನಾಟಕ ರಾಜ್ಯ ನೇಕಾರ ಮಹಾ ಮಂಡಳಿಯ ಜೊತೆ ನಿಂತು ಸಹಕರಿಸಿದ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಗಳಾದ ಎಂ ವೀರಪ್ಪ ಮೊಯ್ಲಿ ರವರು ಹಾಗು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಶಾಸಕರಾದ ಟಿ ವೆಂಕಟರಮಣಯ್ಯ ರವರು ಕಳೆದ ಚುನಾವಣೆಯಲ್ಲಿ ಅವರಿಗೆ ಅನ್ಯಾಯ ವಾಗಿದ್ದರೂ ಸಹ ಅವರು ಉಚಿತ ವಿದ್ಯುತ್ ಜಾರಿಗೆ ತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು‌ ಎಂದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

30 minutes ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

21 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago