ಸಂಕಷ್ಟದಲ್ಲಿದ್ದ ನೇಯ್ಗೆ ಉದ್ಯಮಕ್ಕೆ 10HP ವರಗೆ ಉಚಿತ ವಿದ್ಯುತ್ ಜಾರಿಗೆ ತಂದು ನೇಯ್ಗೆ ಉದ್ಯಮಕ್ಕೆ ಶಕ್ತಿ ತುಂಬಿರುವ ಸರ್ಕಾರದ ತಿರ್ಮಾನದಿಂದ ರಾಜ್ಯದ 25 ಸಾವಿರ ವಿದ್ಯುತ್ ಮಗ್ಗದ ಘಟಕಗಳಿಗೆ ಅನುಕೂಲವಾಗಿದೆ ಎಂದು ನೇಕಾರರ ಹೋರಾಟ ಸಮಿತಿ ಅಧ್ಯಕ್ಷ ಬಿ.ಜಿ.ಹೇಮಂತರಾಜು ಹೇಳಿದರು.
ಈ ಕುರಿತು ನಗರದ ಸಿನಿಮಾ ರಸ್ತೆಯಲ್ಲಿರುವ ನೇಕಾರರ ಹೋರಾಟ ಸಮಿತಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೇಕಾರ ಸಮ್ಮಾನ್ ಯೋಜನೆಯ ಮೂಲಕ 83 ಸಾವಿರ ಜನ ನೇಕಾರರು ಮತ್ತು ನೇಕಾರ ಕಾರ್ಮಿಕರಿಗೆ ತಲಾ ಐದು ಸಾವಿರ ರೂಪಾಯಿ ಹಣವನ್ನ ಖಾತೆಗೆ ಜಮಾ ಮಾಡುವ ಮೂಲಕ ರಾಜ್ಯ ಸರ್ಕಾರ ನೇಕಾರರಿಗೆ ಅಸರೆಯಾಗಿದೆ ಎಂದರು.
2004ರಲ್ಲಿ ಅವಸಾನದ ಅಂಚಿನಲ್ಲಿದ್ದ ನೇಯ್ಗೆ ಉದ್ಯಮಕ್ಕೆ ಇದೆ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಉಪ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಅವರು, ವಿದ್ಯುತ್ ರಿಯಾಯಿತಿ ಜಾರಿಗೆ ತಂದು ನೇಯ್ಗೆ ಉದ್ಯಮಕ್ಕೆ ಆಸರೆ ಆಗಿದ್ದು ಅದೇ ಸಮಯದಲ್ಲಿ. ನೇಕಾರರ ಸಾಲದ ಮೇಲಿನ ಬಡ್ಡಿ ಮನ್ನಾ, ವಸತಿ ಯೋಜನೆ, ಗುಂಪು ವಿಮಾ ಯೋಜನೆ, ನೇಕಾರ ಮಕ್ಕಳಿಗೆ 9 ರಿಂದ 12 ತರಗತಿ ಓದುವ ವಿದ್ಯಾರ್ಥಿಗಳಿಗೆ 1,200 ರೂ. ವಿದ್ಯಾರ್ಥಿವೇತನ, ಯಶಸ್ವಿನಿ ಅರೊಗ್ಯ ವಿಮಾ ಯೋಜನೆ, ಎರಡು ಮಗ್ಗ ಯೋಜನೆ ಎಲೆಕ್ಟ್ರಾನಿಕ್ ಜಕಾರ್ಡ್ ಯೋಜನೆ, ಶೇ3.ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದು ನೇಯ್ಗೆ ಉದ್ಯಮಕ್ಕೆ ಜೀವ ತುಂಬಿದ್ದರು.
ದೇಶದಲ್ಲಿ ಸ್ವಾತಂತ್ರ್ಯ ಬಂದ ನಂತರ ರಾಜ್ಯದಲ್ಲಿ ಮೊದಲ ಬಾರಿಗೆ ನೇಕಾರರ ಪರವಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಹೇಳಿದರು.
ಉಚಿತ ವಿದ್ಯುತ್ ಜಾರಿಗೆ ತರಲು ಕರ್ನಾಟಕ ರಾಜ್ಯ ನೇಕಾರ ಮಹಾ ಮಂಡಳಿಯ ಜೊತೆ ನಿಂತು ಸಹಕರಿಸಿದ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಗಳಾದ ಎಂ ವೀರಪ್ಪ ಮೊಯ್ಲಿ ರವರು ಹಾಗು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಶಾಸಕರಾದ ಟಿ ವೆಂಕಟರಮಣಯ್ಯ ರವರು ಕಳೆದ ಚುನಾವಣೆಯಲ್ಲಿ ಅವರಿಗೆ ಅನ್ಯಾಯ ವಾಗಿದ್ದರೂ ಸಹ ಅವರು ಉಚಿತ ವಿದ್ಯುತ್ ಜಾರಿಗೆ ತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು ಎಂದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…