ನೇಕಾರರಿಗೆ 10 ಹೆಚ್​ಪಿವರೆಗೆ ಉಚಿತ ವಿದ್ಯುತ್-25 ಸಾವಿರ ವಿದ್ಯುತ್ ಮಗ್ಗದ ಘಟಕಗಳಿಗೆ ಅನುಕೂಲ: ಸರ್ಕಾರದ ನಿರ್ಧಾರಕ್ಕೆ ನೇಕಾರರ ಶ್ಲಾಘನೆ

ಸಂಕಷ್ಟದಲ್ಲಿದ್ದ ನೇಯ್ಗೆ ಉದ್ಯಮಕ್ಕೆ 10HP ವರಗೆ ಉಚಿತ ವಿದ್ಯುತ್ ಜಾರಿಗೆ ತಂದು ನೇಯ್ಗೆ ಉದ್ಯಮಕ್ಕೆ ಶಕ್ತಿ ತುಂಬಿರುವ ಸರ್ಕಾರದ ತಿರ್ಮಾನದಿಂದ ರಾಜ್ಯದ 25 ಸಾವಿರ ವಿದ್ಯುತ್ ಮಗ್ಗದ ಘಟಕಗಳಿಗೆ ಅನುಕೂಲವಾಗಿದೆ ಎಂದು ನೇಕಾರರ ಹೋರಾಟ ಸಮಿತಿ ಅಧ್ಯಕ್ಷ ಬಿ.ಜಿ.ಹೇಮಂತರಾಜು ಹೇಳಿದರು.

ಈ ಕುರಿತು ನಗರದ ಸಿನಿಮಾ ರಸ್ತೆಯಲ್ಲಿರುವ ನೇಕಾರರ ಹೋರಾಟ ಸಮಿತಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೇಕಾರ ಸಮ್ಮಾನ್ ಯೋಜನೆಯ ಮೂಲಕ 83 ಸಾವಿರ ಜನ ನೇಕಾರರು ಮತ್ತು ನೇಕಾರ ಕಾರ್ಮಿಕರಿಗೆ ತಲಾ ಐದು ಸಾವಿರ ರೂಪಾಯಿ ಹಣವನ್ನ ಖಾತೆಗೆ ಜಮಾ ಮಾಡುವ ಮೂಲಕ ರಾಜ್ಯ ಸರ್ಕಾರ ನೇಕಾರರಿಗೆ ಅಸರೆಯಾಗಿದೆ ಎಂದರು.

2004ರಲ್ಲಿ ಅವಸಾನದ ಅಂಚಿನಲ್ಲಿದ್ದ ನೇಯ್ಗೆ ಉದ್ಯಮಕ್ಕೆ ಇದೆ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಉಪ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಅವರು, ವಿದ್ಯುತ್ ರಿಯಾಯಿತಿ ಜಾರಿಗೆ ತಂದು ನೇಯ್ಗೆ ಉದ್ಯಮಕ್ಕೆ ಆಸರೆ ಆಗಿದ್ದು ಅದೇ ಸಮಯದಲ್ಲಿ. ನೇಕಾರರ ಸಾಲದ ಮೇಲಿನ ಬಡ್ಡಿ ಮನ್ನಾ, ವಸತಿ ಯೋಜನೆ, ಗುಂಪು ವಿಮಾ ಯೋಜನೆ, ನೇಕಾರ ಮಕ್ಕಳಿಗೆ 9 ರಿಂದ 12 ತರಗತಿ ಓದುವ ವಿದ್ಯಾರ್ಥಿಗಳಿಗೆ 1,200 ರೂ. ವಿದ್ಯಾರ್ಥಿವೇತನ, ಯಶಸ್ವಿನಿ ಅರೊಗ್ಯ ವಿಮಾ ಯೋಜನೆ, ಎರಡು ಮಗ್ಗ ಯೋಜನೆ ಎಲೆಕ್ಟ್ರಾನಿಕ್ ಜಕಾರ್ಡ್ ಯೋಜನೆ, ಶೇ3.ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದು ನೇಯ್ಗೆ ಉದ್ಯಮಕ್ಕೆ ಜೀವ ತುಂಬಿದ್ದರು.

ದೇಶದಲ್ಲಿ ಸ್ವಾತಂತ್ರ್ಯ ಬಂದ ನಂತರ ರಾಜ್ಯದಲ್ಲಿ ಮೊದಲ ಬಾರಿಗೆ ನೇಕಾರರ ಪರವಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಹೇಳಿದರು.

ಉಚಿತ ವಿದ್ಯುತ್‌ ಜಾರಿಗೆ ತರಲು ಕರ್ನಾಟಕ ರಾಜ್ಯ ನೇಕಾರ ಮಹಾ ಮಂಡಳಿಯ ಜೊತೆ ನಿಂತು ಸಹಕರಿಸಿದ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಗಳಾದ ಎಂ ವೀರಪ್ಪ ಮೊಯ್ಲಿ ರವರು ಹಾಗು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಶಾಸಕರಾದ ಟಿ ವೆಂಕಟರಮಣಯ್ಯ ರವರು ಕಳೆದ ಚುನಾವಣೆಯಲ್ಲಿ ಅವರಿಗೆ ಅನ್ಯಾಯ ವಾಗಿದ್ದರೂ ಸಹ ಅವರು ಉಚಿತ ವಿದ್ಯುತ್ ಜಾರಿಗೆ ತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು‌ ಎಂದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

12 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

15 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

23 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

24 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago