ನೇಕಾರರ ಸರ್ವತೋಮುಖ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧ: ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಹೇಳಿಕೆ

ದೇಶದಲ್ಲಿ ನಡೆಯುತ್ತಿರುವ ಪ್ರತಿಯೊಂದು ಚುನಾವಣೆಗಳಲ್ಲಿ ಬಿಜೆಪಿ ಅಭೂತಪೂರ್ವ ಯಶಸ್ಸು ಕಾಣುತ್ತಿದೆ. ಮುಂದೆ ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿಯೂ ಕಮಲ ಅರಳಲಿದೆ. ಮತ್ತೊಮ್ಮೆ ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಹೇಳಿದರು.

ನಗರದ ಡಿಪಿವಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ನೇಕಾರ ಸಮುದಾಯ ಮತ್ತು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಡಬಲ್ ಇಂಜಿನ್ ಸರ್ಕಾರದಿಂದ ಮಾತ್ರ ಅಭಿವೃದ್ಧಿ ಸಾಧ್ಯ. ನೇಕಾರ ಸಮುದಾಯಕ್ಕೆ ಹೆಚ್ಚಿನ ಅನುಕೂಲ ಮಾಡಿರುವುದು ಬಿಜೆಪಿ ಸರ್ಕಾರ ಮಾತ್ರ ಎಂದರು.

ಬಿಜೆಪಿಯ ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ದೊಡ್ಡಬಳ್ಳಾಪುರಕ್ಕೆ ಅಳೆದು ತೂಗಿ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದಿದ್ದರೂ ಪಕ್ಷದ ನಿಷ್ಠಾವಂತ, ಅಭಿವೃದ್ಧಿಯ ಮುಂದಾಲೋಚನೆಯಿರುವ ಯುವ ಅಭ್ಯರ್ಥಿ ಧೀರಜ್ ಮುನಿರಾಜು ಅವರನ್ನು ಅಖೈರು ಮಾಡಲಾಗಿದೆ. ಇಂತಹ ಅವಕಾಶವನ್ನು ಒದಗಿಸುವುದು ಬಿಜೆಪಿ ಮಾತ್ರ ಎಂದು ಹೇಳಿದರು.

ಕಾಂಗ್ರೆಸ್ ಕೇವಲ ಕುಟುಂಬ ರಾಜಕೀಯಕ್ಕೆ ಸಿಮೀತವಾಗಿದೆ. ದೊಡ್ಡಬಳ್ಳಾಪುರದಲ್ಲಿ ನೇಕಾರ ಸಮುದಾಯ ಹೆಚ್ಚಿನದಾಗಿದೆ. ನೇಕಾರರೇ ನಿರ್ಣಾಯಕರಾಗಿದ್ದು, ಈ ಬಾರಿ ನೇಕಾರ ಸಮುದಾಯದ ಸರ್ವತೋಮುಖ ಅಭಿವೃದ್ಧಿಯ ನೀಲನಕ್ಷೆ ಹೊಂದಿರುವ ಧೀರಜ್ ಮುನಿರಾಜುಗೆ ಅವಕಾಶ ಮಾಡಿಕೊಡಬೇಕು ಎಂದರು.

ನಂತರ ಮಾತನಾಡಿದ ಧೀರಜ್ ಮುನಿರಾಜು, ಬಾಶೆಟ್ಟಿಹಳ್ಳಿಯಲ್ಲಿನ ಕೈಗಾರಿಕಾ ಪ್ರದೇಶಕ್ಕೆ ಮತ್ತಷ್ಟು ಉದ್ಯಮಗಳು ತಂದು ಯುವ ಜನತೆಗೆ ಉದ್ಯೋಗ ಒದಗಿಸಲು ಕ್ರಮ ವಹಿಸಲಾಗುವುದು. ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಅಭಿವೃದ್ಧಿಗೆ ಸೂಕ್ತ ಕ್ರಮ ವಹಿಸಲಾಗುವುದು ಎಂದರು. ಒಂದು ಬಾರಿ ಅವಕಾಶ ಮಾಡಿಕೊಟ್ಟರೆ ತಾಲ್ಲೂಕನ್ನು ಇಡಿ ರಾಜ್ಯ ಮಟ್ಟದಲ್ಲಿ ಮಾದರಿ ತಾಲ್ಲೂಕನ್ನಾಗಿ ಮಾಡುತ್ತೇನೆ ಎಂದರು.

ಈ ವೇಳೆ ಮುಖಂಡರಾದ ಕೆಎಂ ಹನುಮಂತರಾಯಪ್ಪ, ವಿಷ್ಣುವರ್ಧನ್ ರೆಡ್ಡಿ, ಚೀರಂಜಿವಿ ರೆಡ್ಡಿ, ನಗರಸಭೆ ಅಧ್ಯಕ್ಷೆ ಸುಧರಾಣಿ ಲಕ್ಷ್ಮೀನಾರಾಯಣ್, ತಿ.ರಂಗರಾಜು, ಬಿಸಿ ಆನಂದ್ ಕುಮಾರ್ ಸೇರಿದಂತೆ ಮತ್ತಿತರರು ಇದ್ದರು.

Ramesh Babu

Journalist

Recent Posts

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

8 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

11 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

12 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

23 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

1 day ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

2 days ago