ನೇಕಾರರ ಸರ್ವತೋಮುಖ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧ: ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಹೇಳಿಕೆ

ದೇಶದಲ್ಲಿ ನಡೆಯುತ್ತಿರುವ ಪ್ರತಿಯೊಂದು ಚುನಾವಣೆಗಳಲ್ಲಿ ಬಿಜೆಪಿ ಅಭೂತಪೂರ್ವ ಯಶಸ್ಸು ಕಾಣುತ್ತಿದೆ. ಮುಂದೆ ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿಯೂ ಕಮಲ ಅರಳಲಿದೆ. ಮತ್ತೊಮ್ಮೆ ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಹೇಳಿದರು.

ನಗರದ ಡಿಪಿವಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ನೇಕಾರ ಸಮುದಾಯ ಮತ್ತು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಡಬಲ್ ಇಂಜಿನ್ ಸರ್ಕಾರದಿಂದ ಮಾತ್ರ ಅಭಿವೃದ್ಧಿ ಸಾಧ್ಯ. ನೇಕಾರ ಸಮುದಾಯಕ್ಕೆ ಹೆಚ್ಚಿನ ಅನುಕೂಲ ಮಾಡಿರುವುದು ಬಿಜೆಪಿ ಸರ್ಕಾರ ಮಾತ್ರ ಎಂದರು.

ಬಿಜೆಪಿಯ ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ದೊಡ್ಡಬಳ್ಳಾಪುರಕ್ಕೆ ಅಳೆದು ತೂಗಿ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದಿದ್ದರೂ ಪಕ್ಷದ ನಿಷ್ಠಾವಂತ, ಅಭಿವೃದ್ಧಿಯ ಮುಂದಾಲೋಚನೆಯಿರುವ ಯುವ ಅಭ್ಯರ್ಥಿ ಧೀರಜ್ ಮುನಿರಾಜು ಅವರನ್ನು ಅಖೈರು ಮಾಡಲಾಗಿದೆ. ಇಂತಹ ಅವಕಾಶವನ್ನು ಒದಗಿಸುವುದು ಬಿಜೆಪಿ ಮಾತ್ರ ಎಂದು ಹೇಳಿದರು.

ಕಾಂಗ್ರೆಸ್ ಕೇವಲ ಕುಟುಂಬ ರಾಜಕೀಯಕ್ಕೆ ಸಿಮೀತವಾಗಿದೆ. ದೊಡ್ಡಬಳ್ಳಾಪುರದಲ್ಲಿ ನೇಕಾರ ಸಮುದಾಯ ಹೆಚ್ಚಿನದಾಗಿದೆ. ನೇಕಾರರೇ ನಿರ್ಣಾಯಕರಾಗಿದ್ದು, ಈ ಬಾರಿ ನೇಕಾರ ಸಮುದಾಯದ ಸರ್ವತೋಮುಖ ಅಭಿವೃದ್ಧಿಯ ನೀಲನಕ್ಷೆ ಹೊಂದಿರುವ ಧೀರಜ್ ಮುನಿರಾಜುಗೆ ಅವಕಾಶ ಮಾಡಿಕೊಡಬೇಕು ಎಂದರು.

ನಂತರ ಮಾತನಾಡಿದ ಧೀರಜ್ ಮುನಿರಾಜು, ಬಾಶೆಟ್ಟಿಹಳ್ಳಿಯಲ್ಲಿನ ಕೈಗಾರಿಕಾ ಪ್ರದೇಶಕ್ಕೆ ಮತ್ತಷ್ಟು ಉದ್ಯಮಗಳು ತಂದು ಯುವ ಜನತೆಗೆ ಉದ್ಯೋಗ ಒದಗಿಸಲು ಕ್ರಮ ವಹಿಸಲಾಗುವುದು. ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಅಭಿವೃದ್ಧಿಗೆ ಸೂಕ್ತ ಕ್ರಮ ವಹಿಸಲಾಗುವುದು ಎಂದರು. ಒಂದು ಬಾರಿ ಅವಕಾಶ ಮಾಡಿಕೊಟ್ಟರೆ ತಾಲ್ಲೂಕನ್ನು ಇಡಿ ರಾಜ್ಯ ಮಟ್ಟದಲ್ಲಿ ಮಾದರಿ ತಾಲ್ಲೂಕನ್ನಾಗಿ ಮಾಡುತ್ತೇನೆ ಎಂದರು.

ಈ ವೇಳೆ ಮುಖಂಡರಾದ ಕೆಎಂ ಹನುಮಂತರಾಯಪ್ಪ, ವಿಷ್ಣುವರ್ಧನ್ ರೆಡ್ಡಿ, ಚೀರಂಜಿವಿ ರೆಡ್ಡಿ, ನಗರಸಭೆ ಅಧ್ಯಕ್ಷೆ ಸುಧರಾಣಿ ಲಕ್ಷ್ಮೀನಾರಾಯಣ್, ತಿ.ರಂಗರಾಜು, ಬಿಸಿ ಆನಂದ್ ಕುಮಾರ್ ಸೇರಿದಂತೆ ಮತ್ತಿತರರು ಇದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

24 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago