ನೇಕಾರರ ಹೋರಾಟಕ್ಕೆ ಮಣಿದ ಬೆಸ್ಕಾಂ; ಮೂರು ತಿಂಗಳು ಬಿಲ್ ಕಟ್ಟದಿದ್ದರೆ ಪರವಾನಗಿ, ವಿದ್ಯುತ್ ಕಟ್ ಆದೇಶ ವಾಪಸ್

ಮೂರು ತಿಂಗಳ ವಿದ್ಯುತ್ ಬಿಲ್ ಪಾವತಿಸದಿದ್ದರೆ ಸಂಪರ್ಕ ಕಡಿತ ಮತ್ತು ಪರವಾನಗಿ ರದ್ದು ಮಾಡುವ ಆದೇಶವನ್ನು ವಾಪಸ್ ಪಡೆಯುವುದಾಗಿ ಪ್ರತಿಭಟನಾ ನಿರತ ನೇಕಾರ ಮತ್ತು ಬಡ, ಮಧ್ಯಮ ವರ್ಗದ ಜನತೆಗೆ ಬೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಧನಂಜಯ, ಎಇಇ ಮಂಜುನಾಥ ಅವರು ಹೇಳಿದರು.

ಸತತ ಮೂರು ತಿಂಗಳು ವಿದ್ಯುತ್ ಬಿಲ್ ಪಾವತಿಸದಿದ್ದರೆ ಸಂಪರ್ಕ ಕಡಿತ ಮತ್ತು ಪರವಾನಗಿ ರದ್ದು ಮಾಡುವ ಆದೇಶನ್ನು ವಿರೋಧಿಸಿ ನಗರದ ಬೆಸ್ಕಾಂ ಕಚೇರಿ ಮುಂಭಾಗ ನೇಕಾರ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಶಾಸಕ ವೆಂಕಟರಮಣಯ್ಯ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಬೆಸ್ಕಾಂ ಆದೇಶವು ನೇಕಾರರು, ಬಡವರು ಹಾಗೂ ರೈತರ ಮೇಲೆ ನಡೆಸುತ್ತಿರುವ ಗದಾ ಪ್ರಹಾರವಾಗಿದೆ. ಈಗಾಗಲೇ ದೇಶದ ಜನರು ಅಗತ್ಯ ವಸ್ತುಗಳು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಹೀಗಿರುವಾಗ ಬಿಲ್ ಪಾವತಿ ವಿಳಂಬ ಸಹಜ. ಇದನ್ನೇ ನೆಪ ಮಾಡಿಕೊಂಡು ಸಂಪರ್ಕ ಕಡಿತ ಮಾಡುವ ಆದೇಶ ಎಳ್ಳಷ್ಟು ಸರಿಯಲ್ಲ. ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರಪಂಚದಲ್ಲೇ ಹೆಚ್ಚು ಸೋಲಾರ್ ವಿದ್ಯುತ್ ಉತ್ಪಾದನೆಯನ್ನು ಕರ್ನಾಟಕ ಮಾಡುತ್ತಿದೆ. ಆದರೆ ಸರ್ಕಾರ ವಿದ್ಯುತ್ತನ್ನು ಖಾಸಗೀಯವರಿಗೆ ಮಾರಾಟ ಮಾಡಿ, ಗ್ರಾಹಕರಿಗೆ ವಂಚನೆ ಮಾಡುತ್ತಿವೆ ಎಂದು ದೂರಿದರು.

ನೇಕಾರರ ಹೋರಾಟ ಸಮಿತಿ ಅಧ್ಯಕ್ಷ ಹೇಮಂತರಾಜು ಮಾತನಾಡಿ, ವಿದ್ಯುತ್ ಮಸೂದೆ ಜಾರಿಗೆ ತಂದ ಪರಿಣಾಮ ಹಾಗೂ ಖಾಸಗಿ ಕಂಪನಿಗಳ ಒತ್ತಡದ ಫಲವಾಗಿ ಈ ಮಾರಕ ಆದೇಶ ಬಂದಿದೆ. ವಿದ್ಯುತ್ ಕ್ಷೇತ್ರವನ್ನು ಖಾಸಗಿಕರಣ ಮಾಡುವ ಹುನ್ನಾರ ಇದರ ಹಿಂದೆ ಅಡಗಿದೆ ಎಂದು ಆರೋಪಿಸಿದರು. ಐದು ವರ್ಷದಿಂದ ನೇಯ್ಗೆ ಉದ್ಯಮ ನೆಲಕಚ್ಚಿದೆ. ನೋಟ್ ಬ್ಯಾನ್, ಜಿಎಸ್ ಟಿ, ಕೋವಿಡ್ ನಿಂದಾಗಿ ಉದ್ಯಮದ ಪರಿಸ್ಥಿತಿ ಮೂರಾಬಟ್ಟೆಯಾಗಿದೆ. ಬಹುತೇಕರು ನೇಯ್ಗೆ ಉದ್ಯಮವನ್ನೇ ತೊರೆಯುವಂತಾಗಿದೆ. ಕಳೆದ ಐದು ತಿಂಗಳಿಂದ ಯಾವುದೇ ವ್ಯಾಪಾರವಾಗಿಲ್ಲ. ಇದರಿಂದ ನೇಕಾರರು ಪರಿತಪಿಸುವಂತಾಗಿದೆ ಎಂದು ಹೇಳಿದರು.

ಎಸ್ಕಾಂ ಹಾಗೂ ಸರ್ಕಾರ, ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗದ ಅವೈಜ್ಞಾನಿಕ ಆದೇಶ ಗ್ರಾಹಕರಿಗೆ ಮರಣಶಾಸನವಾಗಿದೆ. ಸರ್ಕಾರವೇ ಎಲ್ಲವನ್ನು ಮಾಡಿ, ಹಿಂಬಾಗಿಲಿನಿಂದ ಆದೇಶ ಮಾಡಿಸುವ ಮೂಲಕ ಜನಸಾಮಾನ್ಯರನ್ನು ದಿವಾಳಿಯ ಅಂಚಿಗೆ ದೂಡುತ್ತಿದೆ ಎಂದು ಆರೋಪಿಸಿದರು.

ಈ ವೇಳೆ ಪ್ರತಿಭಟನಾ ನಿರತರ ಸ್ಥಳಕ್ಕೆ ಧಾವಿಸಿದ ಬೆಸ್ಕಾಂ ಎಇ ಧನಂಜಯ, ಎಇಇ ಮಂಜುನಾಥ ಅವರು ಹೋರಾಟಗಾರರಿಂದ ಮನವಿ ಪತ್ರ ಸ್ವೀಕರಿಸಿದರು. ಬಳಿಕ ಮಾತನಾಡಿ ಮೇಲಾಧಿಕಾರಿಗಳ ಸೂಚನೆಯಂತೆ ಆದೇಶವನ್ನು ಜಾರಿಗೊಳಿಸಲಾಗಿತ್ತು. ಈ ಆದೇಶವನ್ನು ಶೀಘ್ರವಾಗಿ ವಾಪಸ್ ಪಡೆಯಲಾಗುವುದು ಎಂದು ತಿಳಿಸಿದರು.

ಈ ವೇಳೆ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ವಿದ್ಯುತ್ ಬಳಕೆದಾರರ ಸಂಘದ ಅಧ್ಯಕ್ಷ ರಂಗರಾಜು, ಸೂರ್ಯಪ್ರಕಾಶ್, ರಂಗಸ್ವಾಮಿ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Ramesh Babu

Journalist

Share
Published by
Ramesh Babu

Recent Posts

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

58 minutes ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

4 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

4 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

16 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

16 hours ago

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…

16 hours ago