ನೇಕಾರರ ಹೋರಾಟಕ್ಕೆ ಮಣಿದ ಬೆಸ್ಕಾಂ; ಮೂರು ತಿಂಗಳು ಬಿಲ್ ಕಟ್ಟದಿದ್ದರೆ ಪರವಾನಗಿ, ವಿದ್ಯುತ್ ಕಟ್ ಆದೇಶ ವಾಪಸ್

ಮೂರು ತಿಂಗಳ ವಿದ್ಯುತ್ ಬಿಲ್ ಪಾವತಿಸದಿದ್ದರೆ ಸಂಪರ್ಕ ಕಡಿತ ಮತ್ತು ಪರವಾನಗಿ ರದ್ದು ಮಾಡುವ ಆದೇಶವನ್ನು ವಾಪಸ್ ಪಡೆಯುವುದಾಗಿ ಪ್ರತಿಭಟನಾ ನಿರತ ನೇಕಾರ ಮತ್ತು ಬಡ, ಮಧ್ಯಮ ವರ್ಗದ ಜನತೆಗೆ ಬೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಧನಂಜಯ, ಎಇಇ ಮಂಜುನಾಥ ಅವರು ಹೇಳಿದರು.

ಸತತ ಮೂರು ತಿಂಗಳು ವಿದ್ಯುತ್ ಬಿಲ್ ಪಾವತಿಸದಿದ್ದರೆ ಸಂಪರ್ಕ ಕಡಿತ ಮತ್ತು ಪರವಾನಗಿ ರದ್ದು ಮಾಡುವ ಆದೇಶನ್ನು ವಿರೋಧಿಸಿ ನಗರದ ಬೆಸ್ಕಾಂ ಕಚೇರಿ ಮುಂಭಾಗ ನೇಕಾರ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಶಾಸಕ ವೆಂಕಟರಮಣಯ್ಯ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಬೆಸ್ಕಾಂ ಆದೇಶವು ನೇಕಾರರು, ಬಡವರು ಹಾಗೂ ರೈತರ ಮೇಲೆ ನಡೆಸುತ್ತಿರುವ ಗದಾ ಪ್ರಹಾರವಾಗಿದೆ. ಈಗಾಗಲೇ ದೇಶದ ಜನರು ಅಗತ್ಯ ವಸ್ತುಗಳು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಹೀಗಿರುವಾಗ ಬಿಲ್ ಪಾವತಿ ವಿಳಂಬ ಸಹಜ. ಇದನ್ನೇ ನೆಪ ಮಾಡಿಕೊಂಡು ಸಂಪರ್ಕ ಕಡಿತ ಮಾಡುವ ಆದೇಶ ಎಳ್ಳಷ್ಟು ಸರಿಯಲ್ಲ. ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರಪಂಚದಲ್ಲೇ ಹೆಚ್ಚು ಸೋಲಾರ್ ವಿದ್ಯುತ್ ಉತ್ಪಾದನೆಯನ್ನು ಕರ್ನಾಟಕ ಮಾಡುತ್ತಿದೆ. ಆದರೆ ಸರ್ಕಾರ ವಿದ್ಯುತ್ತನ್ನು ಖಾಸಗೀಯವರಿಗೆ ಮಾರಾಟ ಮಾಡಿ, ಗ್ರಾಹಕರಿಗೆ ವಂಚನೆ ಮಾಡುತ್ತಿವೆ ಎಂದು ದೂರಿದರು.

ನೇಕಾರರ ಹೋರಾಟ ಸಮಿತಿ ಅಧ್ಯಕ್ಷ ಹೇಮಂತರಾಜು ಮಾತನಾಡಿ, ವಿದ್ಯುತ್ ಮಸೂದೆ ಜಾರಿಗೆ ತಂದ ಪರಿಣಾಮ ಹಾಗೂ ಖಾಸಗಿ ಕಂಪನಿಗಳ ಒತ್ತಡದ ಫಲವಾಗಿ ಈ ಮಾರಕ ಆದೇಶ ಬಂದಿದೆ. ವಿದ್ಯುತ್ ಕ್ಷೇತ್ರವನ್ನು ಖಾಸಗಿಕರಣ ಮಾಡುವ ಹುನ್ನಾರ ಇದರ ಹಿಂದೆ ಅಡಗಿದೆ ಎಂದು ಆರೋಪಿಸಿದರು. ಐದು ವರ್ಷದಿಂದ ನೇಯ್ಗೆ ಉದ್ಯಮ ನೆಲಕಚ್ಚಿದೆ. ನೋಟ್ ಬ್ಯಾನ್, ಜಿಎಸ್ ಟಿ, ಕೋವಿಡ್ ನಿಂದಾಗಿ ಉದ್ಯಮದ ಪರಿಸ್ಥಿತಿ ಮೂರಾಬಟ್ಟೆಯಾಗಿದೆ. ಬಹುತೇಕರು ನೇಯ್ಗೆ ಉದ್ಯಮವನ್ನೇ ತೊರೆಯುವಂತಾಗಿದೆ. ಕಳೆದ ಐದು ತಿಂಗಳಿಂದ ಯಾವುದೇ ವ್ಯಾಪಾರವಾಗಿಲ್ಲ. ಇದರಿಂದ ನೇಕಾರರು ಪರಿತಪಿಸುವಂತಾಗಿದೆ ಎಂದು ಹೇಳಿದರು.

ಎಸ್ಕಾಂ ಹಾಗೂ ಸರ್ಕಾರ, ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗದ ಅವೈಜ್ಞಾನಿಕ ಆದೇಶ ಗ್ರಾಹಕರಿಗೆ ಮರಣಶಾಸನವಾಗಿದೆ. ಸರ್ಕಾರವೇ ಎಲ್ಲವನ್ನು ಮಾಡಿ, ಹಿಂಬಾಗಿಲಿನಿಂದ ಆದೇಶ ಮಾಡಿಸುವ ಮೂಲಕ ಜನಸಾಮಾನ್ಯರನ್ನು ದಿವಾಳಿಯ ಅಂಚಿಗೆ ದೂಡುತ್ತಿದೆ ಎಂದು ಆರೋಪಿಸಿದರು.

ಈ ವೇಳೆ ಪ್ರತಿಭಟನಾ ನಿರತರ ಸ್ಥಳಕ್ಕೆ ಧಾವಿಸಿದ ಬೆಸ್ಕಾಂ ಎಇ ಧನಂಜಯ, ಎಇಇ ಮಂಜುನಾಥ ಅವರು ಹೋರಾಟಗಾರರಿಂದ ಮನವಿ ಪತ್ರ ಸ್ವೀಕರಿಸಿದರು. ಬಳಿಕ ಮಾತನಾಡಿ ಮೇಲಾಧಿಕಾರಿಗಳ ಸೂಚನೆಯಂತೆ ಆದೇಶವನ್ನು ಜಾರಿಗೊಳಿಸಲಾಗಿತ್ತು. ಈ ಆದೇಶವನ್ನು ಶೀಘ್ರವಾಗಿ ವಾಪಸ್ ಪಡೆಯಲಾಗುವುದು ಎಂದು ತಿಳಿಸಿದರು.

ಈ ವೇಳೆ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ವಿದ್ಯುತ್ ಬಳಕೆದಾರರ ಸಂಘದ ಅಧ್ಯಕ್ಷ ರಂಗರಾಜು, ಸೂರ್ಯಪ್ರಕಾಶ್, ರಂಗಸ್ವಾಮಿ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Ramesh Babu

Journalist

Recent Posts

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

11 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

12 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

12 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

13 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

20 hours ago

ಅನ್ನದಾತ ಅನಾಥನಾಗುವ ಮುನ್ನ……. ಅನ್ನಕ್ಕಾಗಿ ನಾವು ಪರದಾಡುವ ಮುನ್ನ……

ಡಿಸೆಂಬರ್ 23...... ರೈತರಿಗೂ ಒಂದು ದಿನವಂತೆ..... ಭತ್ತ ಬೆಳೆಯುವ ರೈತ ಆತ್ಮಹತ್ಯೆಯತ್ತ, ಅಕ್ಕಿ ಮಾರುವ ವ್ಯಾಪಾರಿ ಅರಮನೆಯತ್ತಾ...... ಇತರ ಕೆಟ್ಟ…

24 hours ago